ಹೊಸದಿಲ್ಲಿ, ಮೇ 15 : ಸುಪ್ರೀಂ ಕೋರ್ಟ್ ವಕೀಲರಿಗೆ ಮತ್ತು ನ್ಯಾಯಮೂರ್ತಿಗಳಿಗೆ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಶೀಘ್ರವೇ ವಸ್ತ್ರ ಸಂಹಿತೆ ನೀತಿ ರೂಪಿಸುವುದು ಎಂದು ಮುಖ್ಯ ನ್ಯಾಯ ಮೂರ್ತಿ ಎಸ್.ಎ.ಬೋಬ್ಡೆ ತಿಳಿಸಿದ್ದಾರೆ.
ಪ್ರಕರಣವೊಂದರ ವಿಚಾರಣೆ ವೇಳೆ ವಕೀಲ ಕಪಿಲ್ ಸಿಬಲ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾಯಮೂರ್ತಿಗಳಾದ ಮಲ್ಹೋತ್ರಾ, ಹೃಷಿಕೇಶ್ ರಾಯ್ ನೇತೃತ್ವದ ಪೀಠದ ಮುಂದೆ ‘ ಈ ಪೀಠದಲ್ಲಿ ನ್ಯಾಯಮೂರ್ತಿಗಳ ನಿಲುವಂಗಿ ಇಲ್ಲ’ ವೆಂದು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯ ಮೂರ್ತಿ ಎಸ್.ಎ.ಬೋಬ್ಡೆ ‘ಗೌನ್ ನಿಂದ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಕೀಲರು, ಜಡ್ಜ್ ಗಳು ನಿಲುವಂಗಿ ಧರಿಸದಂತೆ ಶೀಘ್ರದಲ್ಲಿ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದರು.
ಮೇ 17 ರ ಬಳಿಕ ನ್ಯಾಯಾಲಯದ ಕಾರ್ಯ ಚಟುವಟಿಕೆಗಳು ಶುರುವಾಗಲಿದ್ದು, ಸುಪ್ರೀಂ ಕೋರ್ಟ್ ತನ್ನ ಏಳು ವಾರಗಳ ಬೇಸಿಗೆ ರಜೆಯನ್ನು ಕಡಿತಗೊಳಿಸಿದೆ
ಜನಾದೇಶಕ್ಕೆ ಬೆಲೆ ನೀಡದ ದೀದಿ ಅಹಂಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಗಾಳಿಗೆ ತೂರಿದ ಪಶ್ಚಿಮ ಬಂಗಾಳ ನಾಯಕಿ ಈಗ ಮಾಜಿ ಸಿಎಂ
ಭಾರತದ ರಾಜಕೀಯ ಭೂಪಟದಲ್ಲಿ ಪಶ್ಚಿಮ ಬಂಗಾಳದ ರಾಜಕಾರಣ ಯಾವಾಗಲೂ ಒಂದು ಕುತೂಹಲದ ಕೇಂದ್ರಬಿಂದು. ಅಲ್ಲಿನ ಕೆಚ್ಚೆದೆಯ ನಾಯಕಿ ಎಂದು ಕರೆಸಿಕೊಳ್ಳುವ ಮಮತಾ ಬ್ಯಾನರ್ಜಿ ಅವರ ಇತ್ತೀಚಿನ ನಡೆಗಳು...








