ADVERTISEMENT
Thursday, September 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇನ್ಮುಂದೆ ಎರಡು ಪಾಳಿಯಲ್ಲಿ ನಡೆಯಲಿವೆ ರಾಜ್ಯದ ಶಾಲೆಗಳು…

admin by admin
May 16, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಕೊರೊನಾದಿಂದಾಗಿ ಹೊಸ ಶೈಕ್ಷಣಿಕ ವರ್ಷ ರಾಜ್ಯದಲ್ಲಿ ಯಾವಾಗ ಪ್ರಾರಂಭವಾಗುತ್ತದೆ ಎಂಬ ಗೊಂದಲ ಇನ್ನೂ ಮುಂದುವರೆದಿದೆ. ಇದರ ಮಧ್ಯೆ ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಕುರಿತಾಗಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ವಿದ್ಯಾರ್ಥಿಗಳು ಸುರಕ್ಷಿತ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಶಾಲೆಯನ್ನು ಪಾಳಿ ಪದ್ಧತಿಯಲ್ಲಿ ನಡೆಸುವ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಆಯಾ ಶಾಲೆಗಳ ಆಡಳಿತ ಮಂಡಳಿಗಳು, ಮುಖ್ಯ ಶಿಕ್ಷಕರು ನಿರ್ಣಯ ಕೈಗೊಂಡಲ್ಲಿ ಮೊದಲನೇ ಪಾಳಿ ಬೆಳಗ್ಗೆ 7.50ರಿಂದ ಮಧ್ಯಾಹ್ನ 12.20ರವರೆಗೆ ಹಾಗೂ ಎರಡನೇ ಪಾಳಿ ಮಧ್ಯಾಹ್ನ 12.10ರಿಂದ 5ರವರೆಗೆ ಶಾಲಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿಕೊಳ್ಳಲು ಸೂಚಿಸಲಾಗಿದೆ.

Related posts

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ:  ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

September 3, 2026
ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

September 3, 2026

ಶಾಲಾ ತರಗತಿ ಕೊಠಡಿಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳಲು ಒಂದು ಡೆಸ್ಕ್ ಗೆ ಮೂವರು ವಿದ್ಯಾರ್ಥಿಗಳಂತೆ ಕೂರಲು ಸೂಕ್ತ ಆಸನ ವ್ಯವಸ್ಥೆ ಮಾಡಬೇಕು. ಈ ಸಂಬಂಧ ಕೊಠಡಿಗಳು ಕೊರತೆ ಬಂದಲ್ಲಿ ಶಾಲೆಯಲ್ಲಿರುವ ಗ್ರಂಥಾಲಯ ಕೊಠಡಿ, ಕ್ರೀಡಾ ಕೊಠಡಿ, ಗಣಕಯಂತ್ರ ಕೊಠಡಿಗಳನ್ನು ಬಳಸಿಕೊಳ್ಳಬಹುದು.

ರಾಜ್ಯದಲ್ಲಿ 1ರಿಂದ 5ನೇ ತರಗತಿ ನಡೆಯುತ್ತಿರುವ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿನ ಶಾಲೆಗಳಲ್ಲಿ ಕಡಿಮೆ ಇರುತ್ತದೆ. ಇಂತಹ ಶಾಲೆಗಳಲ್ಲಿ ಪಾಳಿ ಪದ್ಧತಿ ಅವಶ್ಯಕತೆ ಇರುವುದಿಲ್ಲ. ಆದರೆ, 1ರಿಂದ 7/8 ತರಗತಿ ಇರುವ ಶಾಲೆಗಳಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು ತರಗತಿ ನಡೆಸಲು ಕೊಠಡಿಗಳ ಕೊರತೆಯಾದಲ್ಲಿ ಪಾಳಿ ಪದ್ಧತಿ ಅಳವಡಿಸಕೊಳ್ಳಬಹುದು.

1 ಮತ್ತು 2ನೇ ತರಗತಿಯ ನಲಿಕಲಿ ಮಕ್ಕಳನ್ನು ಒಟ್ಟಿಗೆ ಸೇರ್ಪಡೆ ಮಾಡಿ ಬೋಧಿಸಬಹುದು. 3ನೇ ತರಗತಿಯ ವಿದ್ಯಾರ್ಥಿಗಳು ಈಗಾಗಲೇ ನಲಿಕಲಿ ಬೋಧನೆಯ ಪರಿಚಯ ಇರುವುದರಿಂದ ಇವರಿಗೆ ಸ್ವಕಲಿಕೆಗೆ ಆದ್ಯತೆ ನೀಡಿ ಪ್ರತ್ಯೇಕ ಕೊಠಡಿಯಲ್ಲಿ ಬೋಧನಾ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬಹುದು. ಹಾಗೂ 1ರಿಂದ 7ನೇ ತರಗತಿಗೆ ಶಿಕ್ಷಕರ ಕೊರತೆಯಿದ್ದಲ್ಲಿ ಸ್ಥಳೀಯವಾಗಿ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಬಹುದಾಗಿದೆ.

ಪ್ರಾಥಮಿಕ ಶಾಲೆಗಳಲ್ಲಿಯೂ ಇತ್ತೀಚೆಗೆ ಪದವಿಗಳನ್ನು ಪಡೆದಿರುವ ಶಿಕ್ಷಕರು ಇರುತ್ತಾರೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು ಪರಸ್ಪರ ಸಮಾಲೋಚಿಸಿಕೊಂಡು ಪ್ರೌಢಶಾಲಾ ಶಿಕ್ಷಕರು ಪ್ರಾಥಮಿಕ ಶಾಲೆಗಳ 6 ಮತ್ತು 7ನೇ ತರಗತಿಗಳಿಗೂ ಪ್ರಾಥಮಿಕ ಶಾಲೆಗಳಲ್ಲಿ ಪದವಿ ಹೊಂದಿರುವ ಶಿಕ್ಷಕರು 8 ಮತ್ತು 9ನೇ ತರಗತಿಗಳಿಗೆ ಬೋಧಿಸುವ ಪ್ರಕ್ರಿಯೆ ಮಾಡಬಹುದಾಗಿರುತ್ತದೆ.

8ರಿಂದ 12ನೇ ತರಗತಿಗಳಿರುವ ಕಡೆಗಳಲ್ಲಿ ಈಗಿರುವ ಪಿಯು ಕಾಲೇಜುಗಳು ಬೆಳಗ್ಗೆ 10ರಿಂದ 3.30ರವರೆಗೆ ಅವಧಿಯನ್ನು ಮಾರ್ಪಡಿಸಿ 8.30ರಿಂದ 12.30ರವರೆಗೆ ನಡೆಸಿದರೆ, ಆ ನಂತರ ಪಿಯು ಕೊಠಡಿಗಳನ್ನು ಪ್ರೌಢಶಾಲಾ ತರಗತಿಗಳನ್ನು ನಡೆಸಲು ಬಳಸಿಕೊಳ್ಳಬಹುದೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಮೊದಲನೇ ಪಾಳಿ

ಬೆಳಗ್ಗೆ 7:50ರಿಂದ 8 (ಪ್ರಾರ್ಥನೆ)

ಬೆಳಗ್ಗೆ 8ರಿಂದ 8:40(ಮೊದಲನೇ ಅವಧಿ)

ಬೆಳಗ್ಗೆ 8:40ರಿಂದ 9:20(ಎರಡನೇ ಅವಧಿ)

ಬೆಳಗ್ಗೆ 9:20ರಿಂದ 9:40(ವಿರಾಮ)

ಬೆಳಗ್ಗೆ 9:40ರಿಂದ 10:20(ಮೂರನೇ ಅವಧಿ)

ಬೆಳಗ್ಗೆ 10:20ರಿಂದ 11:00(ನಾಲ್ಕನೇ ಅವಧಿ)

ಬೆಳಗ್ಗೆ 11ರಿಂದ 11:40(ಐದನೇ ಅವಧಿ)

ಬೆಳಗ್ಗೆ 11:40ರಿಂದ ಮಾಧ್ಯಾಹ್ನ 12:20(ಆರನೇ ಅವಧಿ)

ಎರಡನೇ ಪಾಳಿ

ಮಧ್ಯಾಹ್ನ 12:10ರಿಂದ 12:30 (ಪ್ರಾರ್ಥನೆ)

ಮಧ್ಯಾಹ್ನ 12:30ರಿಂದ 1:10 (ಮೊದಲನೇ ಅವಧಿ)

ಅಪರಾಹ್ನ 1:10ರಿಂದ 1:50(ಎರಡನೇ ಅವಧಿ)

ಅಪರಾಹ್ನ 1:50ರಿಂದ 2:20(ಊಟದ ವಿರಾಮ)

ಅಪರಾಹ್ನ 2:20ರಿಂದ 3:00(ಮೂರನೇ ಅವಧಿ)

ಅಪರಾಹ್ನ 3ರಿಂದ 3:40 (ನಾಲ್ಕನೇ ಅವಧಿ)

ಅಪರಾಹ್ನ 3:40ರಿಂದ 4:20(ಐದನೇ ಅವಧಿ)

ಅಪರಾಹ್ನ 4:20ರಿಂದ 5(ಆರನೇ ಅವಧಿ)

Tags: CoronaSchool
ShareTweetSendShare
Join us on:

Related Posts

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ:  ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

by Shwetha
September 3, 2026
0

ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

by Shwetha
September 3, 2026
0

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಏರೋ ಇಂಡಿಯಾ 2027’ ವೈಮಾನಿಕ ಪ್ರದರ್ಶನಕ್ಕೆ ದಿನಾಂಕ ನಿಗದಿಯಾಗಿದೆ. 16ನೇ ಆವೃತ್ತಿಯ ಈ ಬೃಹತ್ ಏರ್‌ಶೋ 2027ರ ಫೆಬ್ರವರಿ 8ರಿಂದ...

ಹೊರ್ಮುಜ್ ದಾಳಿ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕ ದಾಳಿ: ವಿವಾಹ ಸಮಾರಂಭದ ಮನೆಗೆ ಕ್ಷಿಪಣಿ ತುಣುಕು ಬಿದ್ದು 4 ಮಂದಿ ಸಾವು

ಹೊರ್ಮುಜ್ ದಾಳಿ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕ ದಾಳಿ: ವಿವಾಹ ಸಮಾರಂಭದ ಮನೆಗೆ ಕ್ಷಿಪಣಿ ತುಣುಕು ಬಿದ್ದು 4 ಮಂದಿ ಸಾವು

by Shwetha
September 3, 2026
0

ಹೊರ್ಮುಜ್ ಜಲಮಾರ್ಗದಲ್ಲಿ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ...

ಪ್ರಿಯಾಂಕ್ ಖರ್ಗೆ ಮಧ್ಯರಾತ್ರಿ ಸಿಐಡಿ ಕಚೇರಿಗೆ ಹೋಗಿದ್ದೇಕೆ? ಕೈ ಎರಡನೇ ವಿಕೆಟ್ ಪತನದ ಎಚ್ಚರಿಕೆ ನೀಡಿದ ವಿಜಯೇಂದ್ರ

ಪ್ರಿಯಾಂಕ್ ಖರ್ಗೆ ಮಧ್ಯರಾತ್ರಿ ಸಿಐಡಿ ಕಚೇರಿಗೆ ಹೋಗಿದ್ದೇಕೆ? ಕೈ ಎರಡನೇ ವಿಕೆಟ್ ಪತನದ ಎಚ್ಚರಿಕೆ ನೀಡಿದ ವಿಜಯೇಂದ್ರ

by Shwetha
September 3, 2026
0

ಲಿಂಗಸುಗೂರು: ರಾಜ್ಯ ರಾಜಕಾರಣದಲ್ಲಿ ಈಗ ಪಾದಯಾತ್ರೆಯ ಅಬ್ಬರ ಜೋರಾಗಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ಲಿಂಗಸುಗೂರಿನಿಂದ ಆರಂಭವಾಗಿರುವ 170 ಕಿಲೋ ಮೀಟರ್ ಉದ್ದದ...

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ರೆಸಾರ್ಟ್‌ನಲ್ಲಿ ಕುಳಿತು ಪರೀಕ್ಷೆ ಬರೆದರಾ ಹಿರಿಯ ಪೊಲೀಸ್ ಅಧಿಕಾರಿಗಳ ಮಕ್ಕಳು? ರೆಸಾರ್ಟ್‌ನಲ್ಲಿ ಪರೀಕ್ಷೆ ಬರೆಸಿದವರಾರು ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ ಹೆಚ್‌ಡಿಕೆ

by Shwetha
September 3, 2026
0

ಬೆಂಗಳೂರು: ಕೆಪಿಎಸ್‌ಸಿ ಅಕ್ರಮದ ವಿಚಾರವಾಗಿ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ಜಟಾಪಟಿ ಈಗ ತಾರಕಕ್ಕೇರಿದೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram