ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೇಶದಲ್ಲಿ 2,68,833 ಕೇಸ್ , ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್, ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತ , TOP 10 NEWS

Namratha Rao by Namratha Rao
January 15, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ದೇಶದಲ್ಲಿ 2,68,833 ಕೇಸ್ , ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್, ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತ , TOP 10 NEWS
0.1  ದೇಶದಲ್ಲಿ 2,68,833 ಕೇಸ್

ದೇಶದಲ್ಲಿ ಕೊರೊನಾ ಮೂರನೇ ಅಲೆಯ ಅಬ್ಬರ ಮುಂದುವರೆದಿದ್ದು,  ಕಳೆದ 24 ಗಂಟೆಯಲ್ಲಿ 2,68,833 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ.  402 ಮಂದಿ ಸೋಂಕಿತರ ಪ್ರಾಣ ಕಳೆದುಕೊಂಡಿದ್ದಾರೆ. 1,22,684 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

0.2 ಮಳವಳ್ಳಿಯಲ್ಲಿ  ಕೊರೊನಾ ಸ್ಫೋಟ

ಮಳವಳ್ಳಿ ತಾಲೂಕಿನ ಶಿವನಸಮುದ್ರಂ ಸರ್ಕಾರಿ ಶಾಲೆಯಲ್ಲಿ  ಕೊರೊನಾ ಸ್ಫೋಟಗೊಂಡಿದೆ. ಈ ಶಾಲೆಯಲ್ಲಿ 20 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡ ಕಾರಣ ಶಾಲೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ. ಮಕ್ಕಳಿಗೆ ಕೋವಿಡ್ ಸೆಂಟರ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ.

0.3 ಯುಪಿ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್

ಉತ್ತರ ಪ್ರದೇಶ ಚುನಾವನಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸುದ್ದಿಗೋಷ್ಠಿ ನಡೆಸಿ  ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ ಪಟ್ಟಿಯಲ್ಲಿ ಮೊದಲ ಹೆಸರು ಯೋಗಿ ಆದಿತ್ಯನಾಥ್ ಅವರದ್ದಾಗಿದ್ದು, ಗೋರಖ್ ಪುರ ನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.  ಕೆಲದಿನಗಳಿಂದ ಯೋಗಿ ಅಯೋಧ್ಯೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು.

0.4 ಹೆಚ್ಚಾಗಲಿದೆ ಹಾಲಿನ ದರ…

ಬೆಂಗಳೂರು: ರಾಜ್ಯ ಸರಕಾರ ಹಾಲಿನ ದರವನ್ನು ಏರಿಕೆ ಮಾಡಲು ಮುಂದಾಗಿದೆ. ಹಾಲಿನ ದರವನ್ನು ಪ್ರತಿ ಲೀಟರ್ ಗೆ  3 ರೂ ಹೆಚ್ಚಳ ಮಾಡೋದಕ್ಕೆ ಮುಂದಾಗಿದೆ. ಇದು ರಾಜ್ಯದ ಜನರಿಗೆ ಬಿಗ್ ಶಾಕ್ ನೀಡಿದೆ

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಈಗ ಹಾಲಿನ ದರ ಏರಿಕೆಯಾದರೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಹಾಲಿನ ದರವನ್ನು ಏರಿಸಲು ಮುಂದಾಗಿರುವ ಕೆಎಂಎಫ್. ನಂದಿನಿ ಹಾಲಿನ ದರ ಸದ್ಯ ಪ್ರತಿ ಲೀಟರ್ ಗೆ 37 ರೂ ಇದ್ದು ಈಗ 3 ರೂ ಹೆಚ್ಚಿಸಿದರೆ ಹಾಲಿನ ದರವು ಲೀಟರ್ ಗೆ 40 ರೂ ಆಗಲಿದೆ.

0.5 ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತಕ್ಕೆ ಹವಾಮಾನ ವೈಪರಿತ್ಯ ಕಾರಣ

ನವದೆಹಲಿ: ಕಳೆದ ತಿಂಗಳು ಸಂಭವಿಸಿದ ಹೆಲಿಕಾಪ್ಟರ್‌ ದುರಂತದಲ್ಲಿ  ಮೂರು ಸೇನಾಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌  ಮತ್ತು ಅವರ ಪತ್ನಿ ಮರಣಹೊಂದಿದ್ದರು. ಈ ಅಪಘಾತಕ್ಕೆ ಹವಾಮಾನ ವೈಪರಿತ್ಯ ಕಾರಣ ಎಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿದೆ. ಕಳೆದ ವರ್ಷ ಡಿಸೆಂಬರ್​​ 8ರಂದು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ವೆಲ್ಲಿಂಗ್ಟನ್ ಗೆ ಪ್ರಯಾಣಿಸುತ್ತಿದ್ದ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು 13 ಸೇನಾ ಸಿಬ್ಬಂದಿ  ಕೂನೂರು ಕಣಿವೆಯಲ್ಲಿ ಹೆಲಿಕಾಪ್ಟ್ ರ್ ಅಪಘಾತ ದುರಂತದಿಂದ ಮರಣ ಹೊಂದಿದರು.

0.6  ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ

ನವದೆಹಲಿ: ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ. ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ 2788 ಕಾನ್ಸ್​ಟೇಬಲ್  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನಾಂಕವಾಗಿದೆ. ಅರ್ಜಿದಾರರು ಗಡಿ ಭದ್ರತಾ ಪಡೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ, ಡಿಪ್ಲೋಮಾ ಪಾಸಾಗಿರಬೇಕು. ಮತ್ತು ಅಭ್ಯರ್ಥಿಗಳು ಆಯಾ ಟ್ರೇಡ್‌ಗಳಲ್ಲಿ ಎರಡು ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು. ಹಾಗೂ ವೃತ್ತಿ ಶಿಕ್ಷಣ ಸಂಸ್ಥೆಯ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಒಂದು ವರ್ಷದ ಸರ್ಟಿಫಿಕೇಟ್ ಕೋರ್ಸ್ ಹೊಂದಿರಬೇಕು. ಜೊತೆಗೆ ಟ್ರೇಡ್​​ನಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹೊಂದಿರಬೇಕು.

0.8 ಮೇಕೆದಾಟು ಯೋಜನೆಗೆ ಚೇತನ್ ಕಿಡಿ

ಮೇಕೆದಾಟು ಯೋಜನೆ ಕುರಿತು ನಟ ಚೇತನ ಅಸಮಾಧಾನ ಹೊರಹಾಕಿದ್ದಾರೆ. ಈ ಯೋಜನೆಯಿಂದ ಪರಿಸರ ನಾಶವಾಗುತ್ತಿದೆ, ಮೂರು ರಾಜಕೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜಕಾರಣಿಗಳು ಕಾಂಟ್ರ್ಯಾಕ್ಟರ್ ಸ್ವಾರ್ಥಕ್ಕೋಸ್ಕರ ಇದೆಲ್ಲ ಮಾಡುತ್ತಿದ್ದಾರೆ. ಈ ಯೋಜನೆಯು 9,000 ಕೋಟಿ ರೂಪಾಯಿಂದ ಕೂಡಿದೆ. ಯೋಜನೆಯು ಜಾರಿಯಾದರೆ ಸುತ್ತಮುತ್ತಲಿನ 12-18 ಸಾವಿರ ಎಕರೆ ಕಾಡು ನಾಶವಾಗುತ್ತದೆ. ಹಾಗೇ ಅಲ್ಲಿ ವಾಸಿಸುತ್ತಿರುವ ಶ್ರಮ‌ಜೀವಿಗಳನ್ನು ಒಕ್ಕಲೆಬ್ಬಿಸೋಕೆ ಪ್ರಯತ್ನಿಸುತ್ತಿದ್ದಾರೆ. ಅನೇಕ ರಾಜಕೀಯ ಶಕ್ತಿಗಳು ಅವರನ್ನು ಹೆದರಿಸುತ್ತಿದ್ದಾರೆ. ಈಗ ರಾಜಕಾರಣಿಗಳೇ ಕಾಂಟ್ರ್ಯಾಕ್ಟರ್, ಕಾಂಟ್ರ್ಯಾಕ್ಟರ್ಗಳೇ ರಾಜಕಾರಣಿಗಳಾಗಿದ್ದಾರೆ ಎಂದು ಚೇತನ್ ಕಿಡಿಕಾರಿದರು.


0.7  1.5 ಕೋಟಿ ಫಾಲೋವರ್ಸ್ ಗಳಿಸಿದ ಅಲ್ಲು..!

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಗೆ ಪುಷ್ಪ ಸಿನಿಮಾದ ನಂತರ ಭಾರತದಾದ್ಯಂತ ಕ್ರೇಜ್ ಹೆಚ್ಚಾಗಿದ್ದು, ಅಭಿಮಾನಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ.. ಈ ನಡುವೆ ಅವರಿಗೆ ಇನ್ಸ್ಟಾಗ್ರಾಮ್ ನಲ್ಲಿ 15 ಮಿಲಿಯನ್ ಫಾಲೋವರ್ಸ್ ಗಳಾಗಿದ್ದು, ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿ ಸಂಕ್ರಾಂತಿಗೆ ವಿಶ್ ಮಾಡಿದ್ದಾರೆ ಅಲ್ಲು

0.9 ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ 5ನೇ ಸ್ಥಾನಕ್ಕೆ ಕುಸಿದ ಭಾರತ

ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಸೋಲಿನ ಬಳಿಕ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಟೀಂ ಇಂಡಿಯಾ ಐದನೇ ಸ್ಥಾನಕ್ಕೆ ಕುಸಿದು ಬಿದ್ದಿದೆ.  ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಬಳೀಕ  ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಪಡೆ ಐದನೇ ಸ್ಥಾನಕ್ಕೆ ಕುಸಿದಿದೆ.

  1. ಜೈಪುರ್ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಬಡ್ತಿ

ದೀಪಕ್ ಹೂಡಾ ಹಾಗೂ ಅರ್ಜುನ್ ದೇಶ್ವಾಲ್  ಸೊಗಸಾದ ಆಟದ ನೆರವಿನಿಂದ ಎಂಟನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ನ 53ನೇ ಪಂದ್ಯದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ 38-28 ರಿಂದ ಮಾಜಿ ಚಾಂಪಿಯನ್ ಪಾಟ್ನಾ ಪೈರೇಟ್ಸ್ ತಂಡವನ್ನು ಸೋಲಿಸಿತು. ಈ ಗೆಲುವಿನ ಮೂಲಕ ಜೈಪುರ್ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.

Tags: #saakshatvcovid19 updatesfilmindiakarnatakamekedatutop news
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram