ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರದಿಂದ ಶ್ರೀ ನಾರಾಯಣ ಗುರುಗಳ ಅಪಮಾನ ಖಂಡನೀಯ: ಬಿ ಕೆ ಹರಿಪ್ರಸಾದ್‌

Mahesh M Dhandu by Mahesh M Dhandu
January 16, 2022
in Newsbeat, Politics, ರಾಜಕೀಯ
B K Hariprasad slams shri ramulu at chatradurga

B K Hariprasad slams shri ramulu at chatradurga

Share on FacebookShare on TwitterShare on WhatsappShare on Telegram

ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರದಿಂದ ಶ್ರೀ ನಾರಾಯಣ ಗುರುಗಳ ಅಪಮಾನ ಖಂಡನೀಯ: ಬಿ ಕೆ ಹರಿಪ್ರಸಾದ್‌

ಬೆಂಗಳೂರು : ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್, ಮಹಾತ್ಮಾಗಾಂಧಿ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರಿಂದ ಗೌರವಿಸಲ್ಪಟ್ಟ ಶ್ರೀ ನಾರಾಯಣ ಗುರುಗಳನ್ನು ಇಂದಿನ ಸಂಘ ಪರಿವಾರ ನಿಯಂತ್ರಿತ ಕೇಂದ್ರ ಸರ್ಕಾರ ಅಪಮಾನಿಸಿರುವುದು ಖಂಡನೀಯ ಎಂದು ಕಾಂಗ್ರೆಸ್‌ ಹಿರಿಯ ಮುಖಂಡರು ಹಾಗೂ ವಿಧಾನಪರಿಷತ್‌ ಸದಸ್ಯರಾದ ಬಿ ಕೆ ಹರಿಪ್ರಸಾದ್‌ ಆಕ್ರೋಶವ್ಯಕ್ತಪಡಿಸಿದ್ದಾರೆ.

Related posts

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

July 30, 2026
ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

July 30, 2026

ಇಂದು ಬೆಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ದೇಶದ ಸಾಂಸ್ಕೃತಿಕ, ಧಾರ್ಮಿಕ ಐತಿಹಾಸಿಕ, ಅಭಿವೃದ್ದಿ ಮತ್ತು ಮಿಲಿಟರಿ ಸಾಮರ್ಥ್ಯವನ್ನು ಪ್ರತಿ ಬಿಂಬಿಸುವ ಸ್ತಬ್ದ ಚಿತ್ರಗಳ ಪ್ರದರ್ಶನವನ್ನ ಏರ್ಪಡಿಸಲಾಗುತ್ತದೆ. ಹಾಗೆಯೇ, ರಾಜ್ಯಗಳು ತಮ್ಮ ನೆಲದ ಹೆಮ್ಮೆಯನ್ನು ಪ್ರತಿಬಿಂಬಿಸುವ ಸ್ಥಬ್ದ ಚಿತ್ರಗಳನ್ನು ಕಳುಹಿಸುವ ಪರಿಪಾಠವಿದೆ.

ಅದರಂತೆ, ಕೇರಳ ರಾಜ್ಯ ಕಳುಹಿಸಿದ್ದ ತನ್ನ ನೆಲದ ಹೆಮ್ಮೆಯನ್ನು ಪ್ರತಿಬಿಂಬಿಸುವ ಕ್ರಾಂತಿಕಾರಿ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಈ ಮೂಲಕ ಭಾರತದ ಚಾರಿತ್ರಿಕ, ಮಹತ್ವದ ಕ್ರಾಂತಿಕಾರಿ ಸಮಾಜ ಸುಧಾರಕನಿಗೆ ಅಪಮಾನಿಸಿದೆ. ಜೊತೆಗೆ ಶೋಷಣೆ, ಮಹಿಳಾ ಅಸಮಾನತೆ, ಜಾತಿ ಪ್ರತಿಪಾದನೆಯನ್ನು ಪರೋಕ್ಷವಾಗಿ ಕೇಂದ್ರ ಸರ್ಕಾರ ಉತ್ತೇಜಿಸಿದಂತಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

B K Hariprasad talks Insult of Sri Narayana Guru by Central Government saaksha tv

ನಾರಾಯಣ ಗುರುಗಳು ಮೂಲತಃ ಕೇರಳ ರಾಜ್ಯದವರು ಎಂಬುದಕ್ಕೆ ಪರಿಪೂರ್ಣವಾದ ದಾಖಲೆ ಲಭ್ಯವಿದೆ. ಅಲ್ಲದೆ, ಶತಮಾನಗಳ ಹಿಂದಿನ ಅವರ ಸಮಾಜ ಸುಧಾರಣೆಯ ಬಗ್ಗೆ ನೂರಾರು ದಾಖಲೆಗಳು ಲಭ್ಯವಿವೆ. ಶೋಷಣೆ, ಜಾತೀಯತೆ, ಅಸಮಾನತೆ ನಿಮ್ನ ವರ್ಗದವರ ಅಪಮಾನಿಸುವುದರ ವಿರುದ್ದ ಸಿಡಿದು ನಿಂತು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಸಾರಿದ್ದಲ್ಲದೆ ಸಮಾಜದಲ್ಲಿ ಸಮಾನತೆಗಾಗಿ ಬದುಕಿನುದ್ದಕ್ಕೂ ಶ್ರೀ ನಾರಾಯಣ ಗುರುಗಳು ಶ್ರಮಿಸಿದ್ದಾರೆ.

ನಾರಾಯಣ ಗುರುಗಳ ಕ್ರಾಂತಿಕಾರಿ ಸುಧಾರಣೆಯ ಮಾಹಿತಿ ತಿಳಿದಂತಹ ಮಹಾತ್ಮಾಗಾಂಧಿ ಅವರು ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿ ನಾರಾಯಣಗುರುಗಳ ವೈಕಂ ಹೋರಾಟವನ್ನು ಬೆಂಬಲಿಸಿ ಗೌರವಿಸಿದ್ದರು. ಭಾರತಕ್ಕೆ ರಾಷ್ಟ್ರಗೀತೆ ಯನ್ನು ನೀಡಿದ ರಾಷ್ಟ್ರಕವಿ ರವೀಂದ್ರನಾಥ ಠ್ಯಾಗೂರ್ ಮತ್ತು ಭಾರತಕ್ಕೆ ಸಂವಿಧಾನ ನೀಡಿದ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರಿಂದ ಶ್ರೀ ನಾರಾಯಣ ಗುರುಗಳು ಗೌರವಿಸಲ್ಪಟ್ಟಿದ್ದಾರೆ. ಆದರೆ, ಇಂದಿನ ಸಂಘ ಪರಿವಾರದ ನಿಯಂತ್ರಣದಲ್ಲಿರುವ ಕೇಂದ್ರ ಸರಕಾರ ಅವರ ಸ್ತಬ್ದ ಚಿತ್ರವನ್ನು ತಿರಸ್ಕರಿಸುವ ಮೂಲಕ ಅವರನ್ನು ಅಪಮಾನಿಸಿರುವುದು ತೀವ್ರ ಖಂಡನೀಯ ಎಂದರು.

ಇಂತಹ ಸಮ ಸಮಾಜದ ಹೋರಾಟಗಾರನಿಗೆ ಕೇಂದ್ರ ಬಿಜೆಪಿ ಸರ್ಕಾರ ರಚಿಸಿರುವ ಆಯ್ಕೆ ಸಮಿತಿ ಅಪಮಾನ ಮಾಡಿದೆ. ಈ ತಿರಸ್ಕಾರ ನಾರಾಯಣ ಗುರುಗಳಿಗೆ ಮಾತ್ರವಲ್ಲ ದೇಶದ ಕೋಟ್ಯಂತರ ಶೋಷಿತ ಸಮಾಜಕ್ಕೆ ಮಾಡಿರುವ ಅವಮಾನ ಆಗಿದೆ ಎಂದು ಬಿ ಕೆ ಹರಿಪ್ರಸಾದ್‌ ಆಕ್ರೋಶವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತಕ್ಷಣ ತನ್ನ ಪ್ರಮಾದ ಮತ್ತು ತಪ್ಪಿಗೆ ದೇಶದ ಜನತೆಯ ಕ್ಷಮೆ ಕೋರುವುದರ ಜೊತೆಗೆ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಈ ಬಾರಿಯ ಗಣರಾಜ್ಯೋತ್ಸವ ಮೆರವಣಿಗೆಯಲ್ಲಿ ಸೇರ್ಪಡೆ ಗೊಳಿಸಬೇಕೆಂದು ಬಿ ಕೆ ಹರಿಪ್ರಸಾದ್‌ ಒತ್ತಾಯಿಸಿದ್ದಾರೆ.

Tags: #Saaksha TVB K Hari[rasadbangaloreCongressGuru narayana
ShareTweetSendShare
Join us on:

Related Posts

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

ಅತ್ಯಾಚಾರಿಗಳ ಪರ ನಿಂತ ಜೋಶಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆತಗ್ಗಿಸುವ ವಿಚಾರ: ಪ್ರಲ್ಹಾದ ಜೋಶಿ ವಿರುದ್ಧ ಸಿದ್ಧರಾಮಯ್ಯ ತೀವ್ರ ವಾಗ್ದಾಳಿ

by Shwetha
July 30, 2026
0

ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಕನ್ನಡಿಗ ಹಾಗೂ ಸಂಸದ...

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

ತಮಿಳುನಾಡಿಗೆ ನೀರು ಬಿಟ್ಟರೆ ಬೀದಿಗಿಳಿದು ಹೋರಾಟ: ದರ್ಶನ್ ಪುಟ್ಟಣ್ಣಯ್ಯ

by Shwetha
July 30, 2026
0

ಕಾವೇರಿ ನೀರು ನಿರ್ವಹಣಾ ಮಂಡಳಿ (CWMA) ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ನಿರ್ದೇಶನದ ಕುರಿತು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

ಗೃಹ ಇಲಾಖೆ ಕೇವಲ ಭಾಷಣ ಮಾಡ್ತಿದ್ಯಾ? ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಚಾಟಿ ಬೀಸಿದ ಕೋರ್ಟ್.

by Shwetha
July 30, 2026
0

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಹಾವಳಿ ಮಿತಿಮೀರುತ್ತಿದ್ದರೂ, ರಾಜ್ಯ ಗೃಹ ಇಲಾಖೆ ಕಣ್ಮುಚ್ಚಿ ಕುಳಿತಿದೆಯೇ ಎಂಬ ಗಂಭೀರ ಪ್ರಶ್ನೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿದೆ. ಅಕ್ರಮ...

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

‘ವಿದ್ಯಾರ್ಥಿ ಚಳವಳಿಯಲ್ಲಿ ಇದ್ದರೆ ಬಂಧನಕ್ಕೂ ಸಿದ್ಧರಿರಬೇಕು’: ಜೆ.ಪಿ. ನಡ್ಡಾ

by Shwetha
July 30, 2026
0

ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಚಳವಳಿ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಬಂಧನ...

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

by Shwetha
July 30, 2026
0

ನವದೆಹಲಿ: 2026ರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ನೂತನ ಪರೀಕ್ಷಾ ಸುಧಾರಣಾ ಸಮಿತಿ ಇದೀಗ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram