ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಮಸಮಾಜಕ್ಕಾಗಿ ಹೋರಾಟ ನಡೆಸಿದ್ದ ಮನುಷ್ಯಪ್ರೇಮಿಗಳೆಲ್ಲರೂ ನನಗೆ ಆದರ್ಶ

Mahesh M Dhandu by Mahesh M Dhandu
January 21, 2022
in Newsbeat, Politics, ರಾಜಕೀಯ
karnataka election 2023 bjp-strategy-to-defeat-siddaramaiah

karnataka election 2023 bjp-strategy-to-defeat-siddaramaiah

Share on FacebookShare on TwitterShare on WhatsappShare on Telegram

ಸಮಸಮಾಜಕ್ಕಾಗಿ ಹೋರಾಟ ನಡೆಸಿದ್ದ ಮನುಷ್ಯಪ್ರೇಮಿಗಳೆಲ್ಲರೂ ನನಗೆ ಆದರ್ಶ

ಬೆಂಗಳೂರು : ನಾರಾಯಣ ಗುರುಗಳ ಸ್ತಬ್ಧ ಚಿತ್ರ ನಿರಾಕರಣೆ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ನೀವು ಅಧಿಕಾರದಲ್ಲಿದ್ದಾಗ ಟಿಪ್ಪು ಸುಲ್ತಾನ್ ಸ್ತಬ್ಧ ಚಿತ್ರ ಕಳುಹಿಸಿದ್ದು ಯಾಕೆ ಎಂಬ ಸಚಿವ ಸುನಿಲ್ ಕುಮಾರ್ ಅವರ ಪ್ರಶ್ನೆಗೆ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳ ಮೂಲಕ ತಿರುಗೇಟು ನೀಡಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಗಣರಾಜ್ಯೋತ್ಸವದ ಪರೇಡ್ ಗೆ ಟಿಪ್ಪು ಸುಲ್ತಾನ್ ಸ್ತಬ್ಧ ಚಿತ್ರ ಕಳಿಸಿದ್ದು ನಿಜ. ಅವಕಾಶ ಸಿಕ್ಕಿದ್ದರೆ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನೂ ಕಳುಹಿಸುತ್ತಿದ್ದೆ. ಟಿಪ್ಪು ವಿರೋಧಿಸುತ್ತಿರುವವರು ನಾರಾಯಣ ಗುರುಗಳನ್ನೂ ವಿರೋಧಿಸುತ್ತಿರುವುದು ಯಾಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಮಾತ್ರವಲ್ಲ, ಅಪ್ರತಿಮ ದೇಶಪ್ರೇಮಿ ಸುಭಾಷ್ ಚಂದ್ರ ಬೋಸ್ ಅವರ ಸ್ತಬ್ದಚಿತ್ರವನ್ನೂ ಕೇಂದ್ರ ಬಿಜೆಪಿ ಸರ್ಕಾರ ತಿರಸ್ಕರಿಸಿದೆ. ಇದು ಯಾವ ಧರ್ಮಪ್ರೇಮ? ಯಾವ ದೇಶಪ್ರೇಮ?

2017ರಲ್ಲಿ ಕರ್ನಾಟಕ ವಿಧಾನಮಂಡಲದ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟಿಪ್ಪು ಸುಲ್ತಾನ್ ಅವರನ್ನು ಸ್ವಾತಂತ್ರ್ಯಯೋಧ ಎಂದು ಹಾಡಿ ಹೊಗಳಿದ್ದಾಗ @karkalasunil ಮತ್ತು ಇತರೆ @BJP4Karnataka ನಾಯಕರು ಎಲ್ಲಿ ಅಡಗಿಕೊಂಡಿದ್ದರು?
5/8#BJPHatesNarayanaguru pic.twitter.com/MPNlDSgp25

— Siddaramaiah (@siddaramaiah) January 21, 2022

 ಟಿಪ್ಪು ಸುಲ್ತಾನ್ ಅವರನ್ನು ಹಾಡಿ ಹೊಗಳಿ ದೊಡ್ಡ ಗ್ರಂಥವನ್ನೇ ರಚಿಸಿದ್ದು ಜಗದೀಶ್ ಶೆಟ್ಟರ್  ನೇತೃತ್ವದ ಬಿಜೆಪಿ ಸರ್ಕಾರ. ಅದನ್ನು ಪ್ರಕಟಿಸಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಬೇರೆಯವರ ಮೇಲೆ ಆರೋಪಿಸಲು ದೊಡ್ಡಬಾಯಿ ಬಿಡುವ ಸುನಿಲ್ ಕುಮಾರ್ ಆಗ ಬಾಯಿ ಮುಚ್ಚಿಟ್ಟುಕೊಂಡಿದ್ದು ಯಾಕೆ ಎಂದು ಕಿಡಿಕಾರಿದ್ದಾರೆ.

ಈ ಹಿಂದೆ ಬಿಜೆಪಿ ಸರ್ಕಾರವೇ ಪ್ರಕಟಿಸಿದ್ದ ಟಿಪ್ಪು ಸುಲ್ತಾನ್ ಕುರಿತ ಗ್ರಂಥ ಈಗಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗ್ರಂಥಾಲಯದಲ್ಲಿದೆ. ಈ ಗ್ರಂಥ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಈಗ ಸಚಿವರಾಗಿರುವ ಸುನಿಲ್ ಕುಮಾರ್ ಗಮನಕ್ಕೆ ಇನ್ನೂ ಬಂದಿಲ್ಲವೇ? ಯಾಕೆ ಈ ಆತ್ಮವಂಚನೆ?

2017ರಲ್ಲಿ ಕರ್ನಾಟಕ ವಿಧಾನಮಂಡಲದ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟಿಪ್ಪು ಸುಲ್ತಾನ್ ಅವರನ್ನು ಸ್ವಾತಂತ್ರ್ಯಯೋಧ ಎಂದು ಹಾಡಿ ಹೊಗಳಿದ್ದಾಗ ಸುನಿಲ್ ಕುಮಾರ್ ಮತ್ತು ಇತರೆ ಬಿಜೆಪಿ ನಾಯಕರು ಎಲ್ಲಿ ಅಡಗಿಕೊಂಡಿದ್ದರು?

ನಾರಾಯಣ ಗುರು ಸ್ತಬ್ಧ ಚಿತ್ರದ ವಿವಾದ ಹುಟ್ಟಿಕೊಂಡ ದಿನದಿಂದ ನರೇಂದ್ರ ಮೋದಿ ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಸುಳ್ಳುಗಳ ಮೂಟೆ ಉರುಳಿಸುತ್ತಿರುವ ಸಚಿವ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಪ್ರಹ್ಲಾದ್ ಜೋಶಿ ರಂಥವರು ನಾರಾಯಣ ಗುರುಗಳನ್ನು ತಾವು ಒಪ್ಪುವುದಿಲ್ಲ ಎಂಬ ಒಂದು ಸತ್ಯವನ್ನು ಯಾಕೆ ಹೇಳಬಾರದು.

ನಾರಾಯಣ ಗುರುಗಳು ನನ್ನ ಸೈದ್ಧಾಂತಿಕ ಗುರುಗಳು. ಆ ಗೌರವದ ಕಾರಣಕ್ಕಾಗಿಯೇ ನಾನು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ನಾರಾಯಣ ಗುರುಗಳ ಜಯಂತಿಯನ್ನು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸುವ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದೆ. ಇದರಿಂದಾಗಿ ಗುರುಗಳ ಸಂದೇಶ ಮನೆಮನೆಗಳನ್ನು ಮುಟ್ಟುವಂತಾಗಿದೆ.

ಟಿಪ್ಪು ಸುಲ್ತಾನ್ ಮಾತ್ರವಲ್ಲ ಸಮಸಮಾಜಕ್ಕಾಗಿ ಹೋರಾಟ ನಡೆಸಿದ್ದ ಮನುಷ್ಯಪ್ರೇಮಿಗಳೆಲ್ಲರೂ ನನಗೆ ಆದರ್ಶಪ್ರಾಯರು. ಮುಖ್ಯಮಂತ್ರಿಯಾಗಿ ನಾನು ಈ ಮಹಾಪುರುಷರ ಚಿಂತನೆಗೆ ಸರ್ಕಾರದ ಯೋಜನೆಗಳ ರೂಪಕೊಟ್ಟು ಅನುಷ್ಠಾನಗೊಳಿಸಿದ್ದೆ. ನಾನು BJP ನಾಯಕರಂತೆ ಆತ್ಮವಂಚಕನಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಬೆಂಕಿಕಾರಿದ್ದಾರೆ.

Tags: #Saaksha TVBJPCongressnarayana guruSiddaramaiah
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram