ದೇಶದಲ್ಲಿ ಲಾಕ್ ಡೌನ್ ಮೇ 31 ರವರೆಗೂ ಮುಂದುವರೆದಿದೆ. ಲಾಕ್ ಡೌನ್ 4.0 ವಿಸ್ತರಣೆ ಬಳಿಕ ಕೇಂದ್ರ ಸರ್ಕಾರ ಕೆಲ ನಿರ್ಧಾರಗಳನ್ನು ರಾಜ್ಯಗಳ ಅನುಕೂಲತೆಗೆ ತಕ್ಕಂತೆ ತೆಗೆದುಕೊಳ್ಳಲು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು 11 ಗಂಟೆಗೆ ಹಿರಿಯ ಸಚಿವರು ಮತ್ತು ಉನ್ನತ ಅಧಿಕಾರಗಳ ಮಹತ್ವದ ಸಭೆ ಕರೆದಿದ್ದಾರೆ. ಸಭೆಯಲ್ಲಿ ಸರ್ಕಾರಿ ಸಾರಿಗೆ ಬಸ್ಸುಗಳ ಸಂಚಾರ ಪುನರ್ ಪ್ರಾರಂಭದ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಅಂತರ ರಾಜ್ಯ ಬಸ್ ಸಂಚಾರ ಪ್ರಾರಂಭಿಸುವ ಬಗ್ಗೆ ರಾಜ್ಯ ಸರ್ಕಾರಗಳು ಮಾತುಕತೆ ನಡೆಸಿ ತೀರ್ಮಾನಕ್ಕೆ ಬರಬಹುದು. ಜೊತೆಗೆ ರಾಜ್ಯದೊಳಗೆ ಬಸ್ ಸಂಚಾರ ಆರಂಭಿಸಲು ಅವಕಾಶ ನೀಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ನೀಡಿದೆ. ಹಾಗಾಗಿ ಈ ಸಭೆ ಸಾಕಷ್ಟು ಮಹತ್ವ ಪಡೆದಿದೆ. ಜೊತೆಗೆ ಸಾರ್ವಜನಿಕರಲ್ಲಿ ಕುತೂಹಲ ಮೂಡಿಸಿದೆ.
ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು
ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...








