ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರ ಜನ್ಮ ದಿನಕ್ಕೆ ಮಾಜಿ ಸಿ.ಎಂ ಹೆಚ್.ಡಿ.ಕುಮಾರಸ್ವಾಮಿ ಶುಭ ಕೋರಿದ್ದಾರೆ. ಟ್ವೀಟ್ ಮಾಡುವ ಮೂಲಕ ಶುಭಾಶಯಗಳು ತಿಳಿಸಿದ ಅವರು, ದೇಶದ ಅತ್ಯುನ್ನತ, ಅಸಾಮಾನ್ಯ ಹುದ್ದೆಯನ್ನು ಸಾಮಾನ್ಯನೂ ಅಲಂಕರಿಸಬಹುದು ಎಂಬುದು ಭಾರತದ ಪ್ರಜಾಪ್ರಭುತ್ವದ ಸೌಂದರ್ಯ. ಈ ಮಾತನ್ನು, ಹಳ್ಳಿಯ ಮಣ್ಣಿಂದ ಬಂದು, ರಾಷ್ಟ್ರೀಯ ಪಕ್ಷದ ಹಿನ್ನೆಲೆ ಇಲ್ಲದೇ ಸಾಧಿಸಿ ತೋರಿಸಿದವರು ಹೆಚ್.ಡಿ. ದೇವೇಗೌಡರು. ಅವರ ಬದ್ಧತೆ, ಛಲ, ಪರಿಶ್ರಮ, ಹೋರಾಟ ಮತ್ತು ನಾಡಿಗೆ ಹೆಗ್ಗುರುತಾಗಿದೆ ಎಂದು ಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಹೊಗಳಿದ್ದಾರೆ. ಜೊತೆಗೆ ಜನ್ಮ ದಿನದ ಶುಭಾಶಯಗಳನ್ನು ತಿಳಿಸಿದ್ದಾರೆ.
ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...








