ಕೊನೆ ಪಂದ್ಯದಲ್ಲೂ ರುತುರಾಜ್ ಗಿಲ್ಲ ಸ್ಥಾನ.. ಟೀಂ ಇಂಡಿಯಾ ಉಳಿಸಿಕೊಳ್ಳುತ್ತಾ ಮಾನ
ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡದಲ್ಲಿ ನಿರೀಕ್ಷೆಯಂತೆ ಬದಲಾವಣೆಗಳನ್ನು ಮಾಡಲಾಗಿದೆ. ಬ್ಯಾಟಿಂಗ್ ವಿಭಾಗದಲ್ಲಿ ಸೂರ್ಯ ಕುಮಾರ್ ಯಾವದ್ ಅವಕಾಶ ನೀಡಲಾಗಿದೆ.
ಆಲ್ ರೌಂಡರ್ ವಿಭಾಗದಲ್ಲಿ ಶರ್ದೂಲ್ ಬದಲಿಗೆ ದೀಪಕ್ ಚಹಾರ್ ಗೆ, ಸ್ಪಿನ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್ ಬದಲಿಗೆ ಜಯಂತ್ ಯಾದವ್ ಗೆ, ವೇಗದ ಬೌಲಿಂಗ್ ವಿಭಾಗದಲ್ಲಿ ಭುವನೇಶ್ವರ್ ಕುಮಾರ್ ಬದಲಿಗೆ ಕನ್ನಡಿಗ ಪ್ರಸಿದ್ ಕೃಷ್ಣಗೆ ಅವಕಾಶ ನೀಡಲಾಗಿದೆ. ಆದ್ರೆ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಅವರಿಗೆ ಈ ಪಂದ್ಯದಲ್ಲೂ ಅವಕಾಶ ಸಿಕ್ಕಿಲ್ಲ.
ಮೂರು ಮ್ಯಾಚ್ ಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಎರಡು ಪಂದ್ಯಗಳನ್ನು ಸೋಲುವ ಮೂಲಕ ಸರಣಿಯನ್ನು ಬಿಟ್ಟುಕೊಟ್ಟು ಭಾರಿ ಟೀಕೆಗೆ ಒಳಗಾಗಿದೆ. ಅದರಲ್ಲೂ ಪ್ಲೇಯಿಂಗ್ ಇಲೆವೆನ್ ಸೆಲೆಕ್ಷನ್ ಬಗ್ಗೆ ಹಿರಿಯ ಆಟಗಾರರು ಹಿಗ್ಗಾಮುಗ್ಗಾ ಟೀಕೆಗಳ ಸುರಿಮಳೆ ಗೈದಿದ್ದಾರೆ.
ಮುಖ್ಯವಾಗಿ ಇನ್ ಫಾರ್ಮ್ ಆಟಗಾರ ರುತುರಾಜ್ ಗಾಯಕ್ವಾಡ್ ಅವರಿಗೆ ಚಾನ್ಸ್ ನೀಡಬೇಕು. ಅವರನ್ನು ಆರಂಭಿಕರನ್ನಾಗಿ ಕಣಕ್ಕಿಳಿಸಿ, ರಾಹುಲ್ ಮಿಡಲ್ ಆರ್ಡರ್ ನಲ್ಲಿ ಬ್ಯಾಟ್ ಬೀಸಬೇಕು ಎಂದು ಸಲಹೆಗಳನ್ನು ನೀಡಿದ್ದರು.
ಇತ್ತ ಸೋಶಿಯಲ್ ಮೀಡಿಯಾದಲ್ಲಿಯೂ ಕೂಡ ರುತುರಾಜ್ ಗಾಯಕ್ವಾಡ್ ಪರ ಅಭಿಮಾನಿಗಳು ಬ್ಯಾಟ್ ಬೀಸಿದ್ದರು. ಆದ್ರೆ ಇದ್ಯಾವುದಕ್ಕೂ ಬೆಲೆ ಕೊಡದ ಕೆ.ಎಲ್ ರಾಹುಲ್, ಮತ್ತೆ ರುತುರಾಜ್ ಗಾಯಕ್ವಾಡ್ ಅವರನ್ನು ಬೆಂಜ್ ಕಾಯುವಂತೆ ಮಾಡಿದ್ದಾರೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.
ಇನ್ನು ಈ ಪಂದ್ಯ ಟೀಂ ಇಂಡಿಯಾಗೆ ಮಾನ ಉಳಿಸಿಕೊಳ್ಳಲು ಇರುವ ಕೊನೆಯ ಅವಕಾಶವಾಗಿದೆ. ಈಗಾಗಲೇ ಎರಡು ಪಂದ್ಯಗಳನ್ನು ಸೋತಿರುವ ಭಾರತ ಈ ಪಂದ್ಯ ಗೆದ್ದು, ಮಾನ ಉಳಿಸಿಕೊಳ್ಳುವ ತವಕದಲ್ಲಿದೆ.
ಭಾರತ ತಂಡ : ಕೆ.ಎಲ್.ರಾಹುಲ್. ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ದೀಪಕ್ ಚಹಾರ್, ಜಯಂತ್ ಯಾದವ್, ಬುಮ್ರಾ, ಪ್ರಸಿದ್ಧ್ ಕೃಷ್ಣ, ಚಹಾಲ್








