ಜಮ್ಮು, ಮೇ 18 : ಭಾನುವಾರ ಜಮ್ಮು ಕಾಶ್ಮೀರದ ದೋಡ ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರ ಮೃತಪಟ್ಟಿದ್ದು, ಸೇನಾಪಡೆಯ ಯೋಧನೊಬ್ಬ ಹುತಾತ್ಮನಾಗಿದ್ದಾನೆ. ಭಾರತೀಯ ಸೇನಾಪಡೆ, ದೋಡಾ ಪಟ್ಟಣದಿಂದ 26 ಕಿ.ಮೀ. ದೂರದ ಗುಂಡಾನ ವಲಯದ ಪೋಸ್ಟಾ ಪೋತ್ರಾ ಹಳ್ಳಿಯಲ್ಲಿ ಉಗ್ರರು ತಂಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಚರಣೆ ನಡೆಸಿತ್ತು. ಕಾರ್ಯಚರಣೆ ವೇಳೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕನೊಬ್ಬ ಹತನಾಗಿದ್ದಾನೆ. ಈ ಸಂದರ್ಭದಲ್ಲಿ ಸೇನಾ ಪಡೆಯ ಯೋಧ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಉಗ್ರರ ತೆರವಿಗೆ ಸೇನಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಜಮ್ಮು ವಲಯದ ಐಜಿಪಿ ಮುಖೇಶ್ ಸಿಂಗ್ ತಿಳಿಸಿದ್ದಾರೆ.
ಈ ನಡುವೆ ಭಾನುವಾರ ಬೆಳಗ್ಗೆ ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಸೇನಾ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ಸೇನಾಪಡೆಗಳು ಗುಂಡಿನ ದಾಳಿ ನಡೆಸಿದೆ. ಸಾವು ನೋವಿನ ಬಗ್ಗೆ ಯಾವುದೇ ವರದಿಯಾಗಿಲ್ಲ ಎಂದು ಸೇನಾಪಡೆಯ ವಕ್ತಾರರು ತಿಳಿಸಿದ್ದಾರೆ.
ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...








