ಕರೋನಾ ನಿಯಂತ್ರಣಕ್ಕೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ತೀರ್ಮಾನ – ಸುಧಾಕರ್
ಕರೋನ ನಿಯಂತ್ರಣಕ್ಕಾಗಿ ವೈಜ್ಞಾನಿಕ ನೆಲೆಗಟ್ಟಿನಲ್ಲಿ ನಿಯಮಗಳನ್ನ ತೆಗೆದುಕೊಂಡಿದ್ದೇವೆ. ಇದನ್ನು ಅವೈಜ್ಞಾನಿಕ ನಿಯಮ ಎಂದು ಯಾರಾದರೂ ಹೇಳಿದರೆ ಅದು ಕಾಂಗ್ರೆಸ್ ನಾಯಕರು ಮಾತ್ರ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿರುಗೇಟು ನೀಡಿದರು.
ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಕೆ ಸುಧಾಕರ್ ಮೊದಲನೇ ಅಲೆಯಲ್ಲಿ ನೂರು ಕೋವಿಡ್ ಪ್ರಕರಣಗಳು ದೃಢಪಟ್ಟ ತಕ್ಷಣ ಲಾಕ್ಡೌನ್ ಮಾಡಿದ್ದೆವು. ಎರಡನೇ ಅಲೆಯಲ್ಲಿ ಸೋಂಕಿನ ಪ್ರಕರಣಗಳು ಮೂರು ಸಾವಿರ ದಾಟಿದ ತಕ್ಷಣ ನಾವು ಲಾಕ್ಡೌನ್ ಮಾಡಿದ್ದೆವು.
ಇವೆಲ್ಲವನ್ನು ವೈಜ್ಞಾನಿಕವಾಗಿ ಯೋಚನೆ ಮಾಡಿ ತೀರ್ಮಾನ ಕೈಗೊಂಡಿದ್ದೆವು ಮೂರನೆ ಅಲೆಯಲ್ಲಿ ತೀವ್ರತೆ ಇಲ್ಲ ಎನ್ನುವ ಕಾರಣಕ್ಕೆ ವೀಕೆಂಡ್ ಕರ್ಫ್ಯೂ ವಾಪಸ್ ಪಡೆದಿದ್ದೇವೆ. ಒಂದು ವೇಳೆ ಕೊರೊನಾ ಮೂರನೇ ಅಲೆ ತೀವ್ರತೆ ಹೆಚ್ಚಾದರೆ ಕಠಿಣ ರೂಲ್ಸ್ ಮತ್ತೆ ಜಾರಿ ಮಾಡುತ್ತೇವೆ ಎಂದು ಸುಧಾಕರ್ ಸ್ಪಷ್ಟಪಡಿಸಿದ್ದೇವೆ.
ಮೊದಲನೇ ಡೋಸ್ ಲಸಿಕೆಯನ್ನ 100 % ಜನರಿಗೆ ನೀಡಿದ್ದೇವೆ. ಇದಕ್ಕಾಗಿ ಆರೋಗ್ಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.ಎರಡನೇ ಡೋಸ್ 85% ಆಗಿದೆ. ಕೊರೊನಾ ನಿಯಂತ್ರಣ ಮಾಡುವಲ್ಲಿ ಸರ್ಕಾರ ಯಶಸ್ಸು ಕಂಡಿದೆ ಎಂದು ಹೇಳಿಕೆ ನೀಡಿದರು.