ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಜನರ ಆತಂಕಕ್ಕೆ ಕಾರಣವಾಗಿರುವ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯ ಪಿಸಿಸಿಎಫ್ ಅಜಯ ಮಿಶ್ರಾ ಅವರು ಅನುಮತಿ ನೀಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಕಡಬೂರು,ಚಿರಕನಹಳ್ಳಿ, ಕುಂದಕರೆ, ಉಪಕಾರ ಹಾಗೂ ಬೊಮ್ಮನಹಳ್ಳಿಗಳಲ್ಲಿ ಹುಲಿ ಕಾಣಿಸಿಕೊಂಡಿದ್ದು, ಇದುವರೆಗೂ 19 ಜಾನುವಾರುಗಳನ್ನು ಬಲಿಪಡೆದಿದೆ. ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಹುಲಿ ಕಾಣಿಸಿಕೊಂಡಿದ್ದು, ಜನರು ಮನೆಗಳಿಂದ ಆಚೆ ಬರಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸಾರ್ವಜನಿಕರು ಅರಣ್ಯ ಇಲಾಖೆಗೆ ಹುಲಿಯನ್ನು ಸೆರೆ ಹಿಡಿಯುವಂತೆ ಮನವಿ ಮಾಡಿಕೊಂಡಿದ್ದರು. ಜನರ ಮನವಿಗೆ ಸ್ಪಂದಿಸಿರುವ ಅರಣ್ಯ ಇಲಾಖೆ ಇದೀಗ ಹುಲಿ ಸೆರೆಗೆ ಮುಂದಾಗಿದೆ.
ಪಾದಚಾರಿಗಳೇ ಬೆಂಗಳೂರಿನ ಬಾಸ್ – ಹೆದರಬೇಡಿ ನಾನು ನಿಮ್ಮ ಬೆನ್ನಿಗಿದ್ದೇನೆ: ಫುಟ್ ಪಾತ್ ತೆರವಿಗೆ ಅಧಿಕಾರಿಗಳಿಗೆ ಅಭಯ ನೀಡಿದ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು ನಗರದ ಸೌಂದರ್ಯ ಮತ್ತು ಪಾದಚಾರಿಗಳ ಸುರಕ್ಷತೆಗೆ ಅಡ್ಡಿಯಾಗಿರುವ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈಗ ಯುದ್ಧೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತಿದಿನ...








