Up Election | ಕನ್ಹಯ್ಯಗೆ ನೀಡಿದ ಗೌರವದಷ್ಟೂ ಖರ್ಗೆಯವರಿಗೆ ನೀಡಿಲ್ಲ : ಬಿಜೆಪಿ
ಬೆಂಗಳೂರು : ಉತ್ತರಪ್ರದೇಶ ಚುನಾವಣೆಗೆ ಕಾಂಗ್ರೆಸ್ ಭರದಿಂದ ಸಿದ್ಧತೆ ಮಾಡಿಕೊಂಡಿದ್ದು, ಇಂದು ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರ ಹೆಸರು ಮಿಸ್ ಆಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಎಐಸಿಸಿಯನ್ನು ಕುಟುಕಿದೆ.
ಬಿಜೆಪಿ ತನ್ನ ಟ್ವಟ್ಟರ್ ಖಾತೆಯಲ್ಲಿ..
ರಾಜ್ಯದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉತ್ತರ ಪ್ರದೇಶ ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈ ಬಿಡಲಾಗಿದೆ. ದಲಿತ ನಾಯಕ ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಅಷ್ಟೊಂದು ಹಗುರವೇ?
ಉತ್ತರ ಪ್ರದೇಶದ ಚುನಾವಣೆಗೆ ಕಾಂಗ್ರೆಸ್ ವರಿಷ್ಠರು ಮಲ್ಲಿಕಾರ್ಜುನ್ ಖರ್ಗೆ ಅವರ ಹಿರಿತನ, ಅನುಭವವನ್ನು ಕಡೆಗಣನೆ ಮಾಡಿದ್ದಾರೆ.
ನಕಲಿ ಗಾಂಧಿ ಕುಟುಂಬಕ್ಕೆ ನಿಷ್ಠರಾಗಿದ್ದರೂ ಎಲ್ಲಿಂದಲೋ ಬಂದ ಹಾರ್ದಿಕ್, ಕನ್ಹಯ್ಯಗೆ ನೀಡಿದ ಗೌರವದಷ್ಟೂ ಖರ್ಗೆಯವರಿಗೆ ನೀಡಿಲ್ಲ. ಇದು ದಲಿತ ನಾಯಕನಿಗೆ ಅವಮಾನವಲ್ಲದೆ ಮತ್ತೇನು ಎಂದು ಪ್ರಶ್ನಿಸಿದೆ.
ರಾಜ್ಯದಲ್ಲಿ ದಲಿತ ನಾಯಕರನ್ನು ಮುಖ್ಯಮಂತ್ರಿ ಹುದ್ದೆಗೆ ಪರಿಗಣಿಸುತ್ತೇನೆ ಎಂಬ ಭರವಸೆಯನ್ನು ಕಾಂಗ್ರೆಸ್ ವರಿಷ್ಠರು ಇದುವರೆಗೆ ನೀಡಿಲ್ಲ.
ಡಾ.ಜಿ. ಪರಮೇಶ್ವರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಘೋಷಣೆಯ ನಿರೀಕ್ಷೆ ಮಾಡಲು ಸಾಧ್ಯವೇ? #ದಲಿತವಿರೋಧಿಕಾಂಗ್ರೆಸ್ ಪಕ್ಷದಿಂದ ಇದು ಅಸಾಧ್ಯ ಎಂದು ಕುಟುಕಿದೆ.









