ಬಿಜೆಪಿ ಅವರಿಗೆ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್ Saaksha Tv
ಪಣಜಿ: ಬಿಜೆಪಿ ಅವರಿಗೆ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದು ಗೋವಾದ ಎರಡು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಗೋವಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಾರೆ. ಆದರೆ ಮಾಜಿ ರಾಜ್ಯಪಾಲರು ಕೋವಿಡ್ ಸಮಯದಲ್ಲಿ ಗೋವಾ ಬಿಜೆಪಿ ಸರ್ಕಾರ ಬಹಳಷ್ಟು ಹಗರಣ, ಭ್ರಷ್ಟಾಚಾರ ಮಾಡಿದೆ ಎಂದು ಹೇಳಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರ ನೇಮಿಸಿದ ರಾಜ್ಯಪಾಲರು ಈ ಹೇಳಿಕೆಯನ್ನು ನೀಡಿದ್ದಾರೆ. ಇದಕ್ಕಿಂತ ಏನಾದರೂ ಸಾಕ್ಷಿ ಬೇಕಾ? ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.
ಗೋವಾದ ಪ್ರಬುದ್ಧ ಮತದಾರರು ಭ್ರಮನಿರಸನಗೊಂಡಿದ್ದಾರೆ. ಹತ್ತು ವರ್ಷದಿಂದ ಬಿಜೆಪಿಯವರು ಏನ್ ಮಾತನಾಡಿದ್ದಾರೋ ಅದನ್ನು ಮಾಡಿಲ್ಲ. ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಲು ಜನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಫೆಬ್ರವರಿ 14ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಹೆಚ್ಚು ಪ್ರಚಾರ ನಡೆಸುತ್ತಿದ್ದು, ಗೆಲುವಿನ ಕೇಕೆ ಹಾಕಲು ಹಾತರೊಯುತ್ತಿವೆ. ಇದರೊಂದಿಗೆ ಈ ಬಾರಿ ಶಿವಸೇನೆ, ಆಪ್ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಅಕಾಡ ಮತ್ತಷ್ಟು ರಂಗೇರಿದೆ.









