ಇಬ್ರಾಹಿಂ ಸುತಾರ ಅವರು ಇನ್ನಿಲ್ಲ…
ಬಾಗಲಕೋಟೆ: ಕನ್ನಡದ ಕಬೀರ ಎಂದೇ ಹೆಸರಾಗಿದ್ದ ಇಬ್ರಾಹಿಂ ಸುತಾರ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಇಬ್ರಾಹಿಂ ಸುತಾರಅವರು (76) ಬೆಳಗ್ಗೆ 6.30ಕ್ಕೆ ಹೃದಯಾಘಾತದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ನಿಧನರಾದರು. ಇಬ್ರಾಹಿಂ ಸುತಾರ ಎದೆ ನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆದಿದ್ದರು. ಇಂದು ಬೆಳಿಗ್ಗೆ ಮತ್ತೆ ಲಘು ಹೃದಯಾಘಾತವಾಗಿದೆ. ತಕ್ಷಣ ಇಬ್ರಾಹಿಂ ಸುತಾರ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಇಬ್ರಾಹಿಂ ಸುತಾರ್ ಕೊನೆಯುಸಿರೆಳೆದಿದ್ದಾರೆ.
ಕೇಸರಿ ಶಾಲು ಧರಿಸಿ ವಿದ್ಯಾರ್ಥಿಯರ ಮೆರವಣಿಗೆ…
ಉಡುಪಿ : ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿನಿಯರು ಕೇಸರಿ ಶಾಲುಗಳನ್ನು ತೊಟ್ಟು ಕಾಲೇಜಿಗೆ ಬಂದಿದ್ದಾರೆ.. ಕೇಸರಿ ಶಾಲುಗಳನ್ನು ತೊಟ್ಟು ಮೆರವಣಿಗೆ ಮಾಡಿದ್ದಾರೆ. ಅಲ್ಲದೇ ಹಿಜಾಬ್ ಕಳಚುವ ತನಕ ಕೇಸರಿ ತೊಡುತ್ತೇವೆ. ಅವರಿಗೊಂದು ನ್ಯಾಯ ನಮಗೊಂದು ನ್ಯಾಯ ಬೇಡ ಎಂದು ಜೈ ಶ್ರೀರಾಮ್ ಹರಹರಮಹದೇವ ಘೋಷಣೆ ಕೂಗಿರೋದು ಕಂಡುಬಂದಿದೆ..
ದೇಶದಲ್ಲಿ ಕೊರೊನಾ ಪ್ರಕರಣಗಳು
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 1,27,952 ಲಕ್ಷ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕೊರೊನಾ ದಿನದ ಏರಿಕೆ ಪ್ರಮಾಣವು 7.98ರಷ್ಟಿದ್ದು, ವಾರದ ಏರಿಕೆ ಪ್ರಮಾಣವು ಶೇ 11.21 ರಷ್ಟಿದೆ. ಇನ್ನೂ ಕಳೆದ 24 ಗಂಟೆಯಲ್ಲಿ 2,30,814 ಲಕ್ಷ ಜನರು ಚೇತರಿಸಿಕೊಂಡಿದ್ದಾರೆ. ಚೇತರಿಕೆ ಪ್ರಮಾಣವು ಶೇ 95.64 ರಷ್ಟಿದೆ. ಸಕ್ರಿಯ ಪ್ರಕರಣಗಳು 13,31,648 ಲಕ್ಷ ಇದ್ದು, ಇದರ ಪ್ರಮಾಣವು ಶೇ 3.16 ರಷ್ಟಿದೆ. ಕಳೆದ 24 ಗಂಟೆಯಲ್ಲಿ 1059 ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
Punjab Election – 1304 ಅಭ್ಯರ್ಥಿಗಳು ಕಣಕ್ಕೆ…
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ 117 ಸ್ಥಾನಗಳಿಗೆ ಒಟ್ಟು 1304 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣಾ ಆಯೋಗ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಲುಧಿಯಾನ ಜಿಲ್ಲೆಯ ಸಾಹ್ನೆವಾಲ್ ಮತ್ತು ಪಟಿಯಾಲಾ ಗ್ರಾಮಾಂತರ ಪ್ರದೇಶಗಳಲ್ಲಿ ಗರಿಷ್ಠ 19 ಮಂದಿ ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಏರುಪೇರು….
ಕಳೆದ ತಿಂಗಳು ಸ್ವಲ್ಪ ಸುಧಾರಣೆ ಕಂಡಿದ್ದ ಲತಾ ಮಂಗೇಶ್ಕರ್ ಅವರ ಆರೋಗ್ಯ ಮತ್ತೊಮ್ಮೆ ಹದಗೆಟ್ಟಿದೆ. ಗಾನ ಕೋಗಿಲೆ ಇನ್ನೂ ಕೆಲದಿನಗಳ ಕಾಲ ವೈದ್ಯರ ಮೇಲ್ವಿಚಾರಣೆಯಲ್ಲಿ ಐಸಿಯುನಲ್ಲಿ ಉಳಿಯುಲಿದ್ದಾರೆ. ಲತಾ ಮಂಗೇಶ್ಕರ್ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈನಲ್ಲಿ ಜಿಯೋ ಸೇವೆ ಮತ್ತೊಮ್ಮೆ ಸ್ಥಗಿತ
ಕಳೆದ ನಾಲ್ಕು ತಿಂಗಳಲ್ಲಿ 2ನೆ ಬಾರಿ ಮುಂಬೈನಲ್ಲಿ, ರಿಲಯನ್ಸ್ ಜಿಯೋ ಸೇವೆ ಮತ್ತೊಮ್ಮೆ ಸ್ಥಗಿತಗೊಂಡಿದೆ. ಮುಂಬೈ ನಗರದ ಬಳಕೆದಾರರು ಕರೆಗಳನ್ನು ಮಾಡಲು ಅಥವಾ ಇಂಟರ್ನೆಟ್ ಬಳಸಲು ಸಾಧ್ಯವಾಗುತ್ತಿಲ್ಲ.
ಹೈದರಾಬಾದ್ಗೆ ಮೋದಿ ಭೇಟಿ
11ನೇ ಶತಮಾನದ ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರನ್ನು ಸ್ಮರಿಸುವ ‘ಸಮಾನತೆಯ ಪ್ರತಿಮೆ’ಯನ್ನು ಅನಾವರಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ತೆಲಂಗಾಣದ ಹೈದರಾಬಾದ್ಗೆ ಭೇಟಿ ನೀಡಿದ್ದಾರೆ.
‘ಲವ್ ಮಾಕ್ಟೇಲ್ 2’
‘ಲವ್ ಮಾಕ್ಟೇಲ್ 2’ ಸಿನಿಮಾ ಇದೇ 11ರಿಂದ ರಾಜ್ಯದಾದ್ಯಂತ ಬೆಳ್ಳಿ ಪರದೆ ಮೇಲೆ ರಾರಾಜಿಸಲಿದೆ. ಡಾರ್ಲಿಂಗ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಚಿತ್ರದ ಬಿಡುಗಡೆ ಬಗ್ಗೆ ಸಂತಸದ ವಿಚಾರ ಹಂಚಿಕೊಂಡಿದ್ದಾರೆ. ಇನ್ನು ಲವ್ ಮಾಕ್ಟೇಲ್ 2 ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದಿದೆ
ಜೇಮ್ಸ್ ಚಿತ್ರತಂಡದಿಂದ ಹೊಸ ಅಪ್ ಡೇಟ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯದ ಜೇಮ್ಸ್ ಚಿತ್ರತಂಡದಿಂದ ಹೊಸ ಅಪ್ ಡೇಟ್ ಬಂದಿದೆ. ಅದೇನಂದರೇ ಇದೇ 11 ರಂದು ಜೇಮ್ಸ್ ಸಿನಿಮಾದ ಟೀಸರ್ ರಿಲೀಸ್ ಆಗಲಿದೆ. ಇದನ್ನ ಸ್ವತಃ ರಾಘಣ್ಣ ಅವರೇ ಟ್ವಿಟ್ಟರ್ ನಲ್ಲಿ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
‘ದಕ್ಷಿಣ ಆಫ್ರಿಕಾ ಪ್ರವಾಸ ಉತ್ತಮ ಪಾಠ ಕಲಿಸಿದೆ’
”ದಕ್ಷಿಣ ಆಫ್ರಿಕಾ ಪ್ರವಾಸ ಉತ್ತಮ ಪಾಠ ಕಲಿಸಿದೆ. ಪ್ರತಿ ಒಬ್ಬ ಆಟಗಾರರನ್ನು ಮಾತನಾಡಿ ತಂಡವನ್ನು ಗಟ್ಟಿಗೊಳಿಸುತ್ತೇವೆ. ಇನ್ನು ನಾಯಕತ್ವದ ವಿಚಾರಕ್ಕೆ ಬಂದರೆ… ವಿರಾಟ್ ನಾಯಕನಾಗಿದ್ದಾಗ ನಾನು ಉಪನಾಯಕನಾಗಿದ್ದೆ. ನಮ್ಮಿಬ್ಬರ ಆಲೋಚನೆಗಳು ಬಹುತೇಕ ಒಂದೇ ಆಗಿವೆ ಎಂದು ರೋಹಿತ್ ಹೇಳಿದ್ದಾರೆ.
ರೋಹಿತ್ ಶರ್ಮಾ ಜೊತೆ ಇಶಾನ್ ಕಿಶಾನ್
ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆ ಇಶಾನ್ ಕಿಶಾನ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇದನ್ನ ಸ್ವತಃ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಸ್ಪಷ್ಟಪಡಿಸಿದ್ದಾರೆ.
International: ಅನುಮಾನಾಸ್ಪದವಾಗಿ ಓಡಾಡುವ ಕೋಳಿಯನ್ನು ವಶಕ್ಕೆ ಪಡೆದ ಪೊಲೀಸರು
ನಂಬಿಕೆ ದ್ರೋಹ ಮಾಡಿದವನಿಗೆ ಚಳಿ ಬಿಡಿಸಿದ್ದ NTR
Pushkar films | ಸೂಪರ್ ಸ್ಟಾರ್ ಆಗಲಿದ್ದಾರೆ ಪುಷ್ಕರ್ ಮಲ್ಲಿಕಾರ್ಜುನಯ್ಯ
Punjab Election – 117 ಕ್ಷೇತ್ರಗಳಿಂದ 1304 ಅಭ್ಯರ್ಥಿಗಳು ಕಣಕ್ಕೆ…
U-19 WorldCup | ಫೈನಲ್ ನಲ್ಲಿ ಗೆಲುವು ಯಾರಿಗೆ..?












