ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ದೇಶಾದ್ಯಂತ ಜೂನ್ 1ರಿಂದ ನಾನ್ ಎಸಿ ರೈಲು ಸಂಚಾರ

admin by admin
May 20, 2020
in International, Newsbeat, ದೇಶ - ವಿದೇಶ
suicide
Share on FacebookShare on TwitterShare on WhatsappShare on Telegram

ಹೊಸದಿಲ್ಲಿ, ಮೇ 20 : ಕೇಂದ್ರ ಸರ್ಕಾರ ಜೂನ್ 1ರಿಂದ ನಾನ್ ಎಸಿ ರೈಲು ಸಂಚಾರ ನಡೆಸಲು ನಿರ್ಧರಿಸಿದ್ದು, ರೈಲ್ವೇ ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದೆ.‌ ದೇಶಾದ್ಯಂತ‌ ಜೂನ್ 1ರಿಂದ 200 ನಾನ್ ಎಸಿ ರೈಲುಗಳು ಸಂಚಾರ ಪ್ರಾರಂಭಿಸಲಿದ್ದು, ನಿಗದಿತ ವೇಳಾಪಟ್ಟಿಯಂತೆ ರೈಲುಗಳ ಓಡಾಟ ನಡೆಯಲಿದೆ. ಶೀಘ್ರದಲ್ಲಿ ಆನ್‌ಲೈನ್ ಬುಕಿಂಗ್ ತೆರೆಯಲ್ಪಡುತ್ತದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಲಾಕ್ ಡೌನ್ ಪರಿಣಾಮದಿಂದ ದೇಶದಾದ್ಯಂತ ಸಿಲುಕಿ ಹಾಕಿಕೊಂಡಿರುವ ವಲಸೆ ಕಾರ್ಮಿಕರಿಗಾಗಿ 200 ಶ್ರಮಿಕ್ ರೈಲುಗಳನ್ನು ಓಡಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು ಗಮನಾರ್ಹವಾಗಿ ಹೆಚ್ಚಿಸಲಾಗುವುದು ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ. ‌

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

August 14, 2026

ಮುಂದಿನ ಎರಡು ದಿನಗಳಲ್ಲಿ ಭಾರತೀಯ ರೈಲ್ವೆ, ಶ್ರಮಿಕ್ ವಿಶೇಷ ರೈಲುಗಳ ಸಂಖ್ಯೆಯನ್ನು ದಿನಕ್ಕೆ 400 ಕ್ಕೆ ಹೆಚ್ಚಿಸಲಾಗುತ್ತದೆ. ಎಲ್ಲಾ ವಲಸಿಗರು ತಾವು ಇರುವ ಸ್ಥಳದಲ್ಲಿಯೇ ಇರಬೇಕೆಂದು ಕೋರಲಾಗಿದ್ದು, ಭಾರತೀಯ ರೈಲ್ವೆ ಮುಂದಿನ ಕೆಲವು ದಿನಗಳಲ್ಲಿ ಅವರನ್ನು ಮನೆಗೆ ಕಳುಹಿಸಲಿದೆ ಎಂದು ಸಚಿವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ದೇಶದಲ್ಲಿ ಶ್ರಮಿಕ್ ರೈಲುಗಳು ಮಾತ್ರ ಓಡಾಡುತ್ತಿದ್ದು, ಮೇ 1 ರಿಂದ ಇಲ್ಲಿಯ ತನಕ ಸುಮಾರು 1600 ಶ್ರಮಿಕ ವಿಶೇಷ ರೈಲುಗಳು ಸಂಚರಿಸಿದ್ದು, 21.5 ಲಕ್ಷ ಕಾರ್ಮಿಕರನ್ನು ಬೇರೆ ಊರುಗಳಿಂದ ಅವರವರ ಊರಿಗೆ ತಲುಪಿಸಿದೆ. ಉತ್ತರ ಪ್ರದೇಶದಲ್ಲಿ 837 ರೈಲು, ಬಿಹಾರದಲ್ಲಿ 428 ರೈಲು ಮತ್ತು ಮಧ್ಯಪ್ರದೇಶದಲ್ಲಿ 100 ವಿಶೇಷ ರೈಲುಗಳು ಸಂಚರಿಸಿದೆ.

ಆದರೆ ಶ್ರಮಿಕ್ ರೈಲು ಮತ್ತು ವಿಶೇಷ ರೈಲುಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಪ್ರಯಾಣಿಕರ ರೈಲು ಸಂಚಾರ ಇನ್ನೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಪ್ರಾರಂಭಿಸಿಲ್ಲ.

ಭಾರತೀಯ ರೈಲ್ವೇ ಹೊರಡಿಸಿರುವ ಹೊಸ ಆದೇಶದ ಪ್ರಕಾರ ವಲಸೆ ಕಾರ್ಮಿಕರನ್ನು ವಾಪಸು ಕಳುಹಿಸಲು ಶ್ರಮಿಕ ವಿಶೇಷ ರೈಲುಗಳಿಗೆ ರಾಜ್ಯಗಳ ಅನುಮತಿ ಬೇಕಿಲ್ಲ. ಒಂದು ರಾಜ್ಯ ಕಾರ್ಮಿಕರನ್ನು ವಾಪಸ್ ಕಳಿಸಲು ಪಟ್ಟಿ ನೀಡಿದರೆ ಸಾಕು, ಪಟ್ಟಿ ಕೊಟ್ಟ ರಾಜ್ಯದಿಂದ ರೈಲನ್ನು ಓಡಿಸಲಾಗುತ್ತದೆ ಎಂದು ಭಾರತೀಯ ರೈಲ್ವೇ ಇಲಾಖೆ ಸ್ಪಷ್ಟಪಡಿಸಿದೆ.‌

ಕೇಂದ್ರ ಗೃಹ ಸಚಿವಾಲಯವು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಜೊತೆಗಿನ ಸಂಘರ್ಷದ ಬಳಿಕ, ಶ್ರಮಿಕ್‌ ರೈಲುಗಳ ಸಂಚಾರದ ಕುರಿತು ರೈಲ್ವೆ ಸಚಿವಾಲಯವು ಗೃಹ ಸಚಿವಾಲಯದ ಜತೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಬಹುದು ಎಂದು ತಿಳಿಸಿದೆ. ಶ್ರಮಿಕ್‌ ರೈಲುಗಳ ಓಡಾಟಕ್ಕೆ ಸಂಬಂಧಿಸಿ ರಾಜ್ಯ ಸರಕಾರಗಳು ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಬೇಕು. ಅಲ್ಲದೇ ರಾಜ್ಯ ಸರ್ಕಾರಗಳು ನಿಗದಿತ ರೈಲು ವೇಳಾಪಟ್ಟಿಗೆ ಸರಿಯಾಗಿ ರೈಲು ನಿಲ್ದಾಣ ತಲುಪಲು ಕಾರ್ಮಿಕರಿಗೆ ಬಸ್‌ ವ್ಯವಸ್ಥೆಯನ್ನು ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಿದ್ದಾರೆ. ರೈಲ್ವೆ ಪ್ರಯಾಣಿಕರ ವಿಶ್ರಾಂತಿ ‌ಸ್ಥಳಗಳಲ್ಲಿ ಸ್ಯಾನಿಟೈಸರ್ ಲಭ್ಯವಿರುವಂತೆ ಮತ್ತು ಆಹಾರ, ನೀರು ಪೂರೈಕೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಸುರಕ್ಷತೆಗೆ ಅಗತ್ಯವಾದ ಸುರಕ್ಷಾ ಕ್ರಮಗಳನ್ನು ‌ಕೈಗೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ತಮ್ಮ ಊರಿಗೆ ಮರಳಲಾಗದೆ ಪ್ರಮುಖ ನಗರಗಳಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ಅಂತಹ ಲಕ್ಷಾಂತರ ವಲಸೆ ಕಾರ್ಮಿಕರನ್ನು, ವಿದ್ಯಾರ್ಥಿಗಳನ್ನು ಅವರವರ ಊರಿಗೆ ವಾಪಸು ಕಳುಹಿಸಲು ಭಾರತೀಯ ರೈಲ್ವೆ ಇಲಾಖೆ ಶ್ರಮಿಕ್ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ರಾಜ್ಯದಲ್ಲಿರುವ ವಲಸೆ ಕಾರ್ಮಿಕರನ್ನು ಅವರ ಊರಿಗೆ ಶ್ರಮಿಕ್​​ ರೈಲಿನ ಮೂಲಕ ಕಳಿಸುವ ವ್ಯವಸ್ಥೆ ಮಾಡುತ್ತಿದೆ.

Tags: central government
ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram