Hijab Controvercy : ಕೇಸರಿ ಶಾಲು ಧರಿಸಬೇಡಿ, ಹಿಜಾಬ್ ತೆಗೆದು ತರಗತಿಗೆ ಹಾಜರಾಗಿ – ರಘುಪತಿ ಭಟ್ ಮನವಿ
ಉಡುಪಿ : ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದ ಸಂಬಂಧ ಹೈಕೋರ್ಟ್ ವಿಚಾರಣೆ ಮುಂದೂಡಿದೆ.. ಆದ್ರೆ ಮುಂದಿನ ಆದೇಶದ ವರೆಗೂ ಯಾರೂ ಸಹ ಧಾರ್ಮಿಕ ವಸ್ತ್ರಗಳನ್ನು ಧರಿಸದಂತೆ ಸೂಚನೆ ನೀಡಿದೆ.. ಈ ಸಂಬಂಧ ಉಡುಪಿ ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದಾರೆ.. ಉಡುಪಿಯಲ್ಲಿ ಮಾತನಾಡಿರುವ ಅವರು, ಕೋರ್ಟ್ ನಿಂದ ಉತ್ತಮ ಆದೇಶ ಹೊರ ಬಂದಿದೆ. ನಾವೆಲ್ಲರೂ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ಮುಂದಿನ ವಾರದಿಂದ ಪ್ರತಿದಿನ ವಿಚಾರಣೆ ನಡೆಯುತ್ತದೆ. ಇದೊಂದು ಜವಾಬ್ದಾರಿಯುತ ನಿರ್ಣಯ.
ಮಕ್ಕಳ ಭವಿಷ್ಯಕ್ಕೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಈ ಆದೇಶ ನೀಡಲಾಗಿದೆ. ಮುಂದಿನ ಒಂದುವರೆ ತಿಂಗಳಿನಲ್ಲಿ ಪರೀಕ್ಷೆ ಪ್ರಾರಂಭ ಆಗುತ್ತದೆ. ಇನ್ನೂ ಹೆಚ್ಚು ರಜೆ ನೀಡಿದರೆ ಮಕ್ಕಳ ಭವಿಷ್ಯಕ್ಕೆ ತೊಂದರೆ ಆಗುತ್ತದೆ. ಈ ಹಿನ್ನಲೆಯಲ್ಲಿ ಕೋರ್ಟ್ ಇಂತಹ ಆದೇಶ ಹೊರಡಿಸಿತು. ಹಿಂದೆ ನಡೆದ ಘಟನೆಗಳನ್ನು ಮರೆಯೋಣ. ಕಾಲೇಜು ಆರಂಭಿಸಲು ಎಲ್ಲರೂ ಸಹಕರಿಸೋಣ. ನಮ್ಮ ಧಾರ್ಮಿಕ ಆಚರಣೆಗಳನ್ನು ಮನೆಯಲ್ಲಿ ಆಚರಿಸೋಣ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಮುಖ್ಯವಾಗಿದೆ. ಈಗಾಗಲೇ ಅಂತರಾಷ್ಟ್ರೀಯ ಮಟ್ಟದಲ್ಲಿ ಈ ವಿಚಾರ ಚರ್ಚೆ ಆಗಿದೆ . ನಾವು ಏನೇ ಇದ್ದರೂ ಒಟ್ಟಾಗಿದ್ದೇವೆ ಎಂಬ ಸಂದೇಶ ನೀಡೋಣ . ಸರಕಾರ ನಾಳೆಯಿಂದ ಕ್ಲಾಸ್ ಗಳನ್ನು ಪ್ರಾರಂಭಿಸಲಿ. ಕೇಸರಿ ಶಾಲು ಧರಿಸಬೇಡಿ, ಹಿಜಾಬ್ ಅನ್ನು ಕ್ಲಾಸ್ ನ ಒಳಗೆ ತೆಗೆದು ಬನ್ನಿ ಎಂದು ಮನವಿ ಮಾಡಿದ್ದಾರೆ..









