Karnataka Politics : ನಿಖಿಲ್ ಕುಮಾರಸ್ವಾಮಿಯನ್ನು ರಾಜಕಾರಣಕ್ಕೆ ತರುವುದಕ್ಕೆ ನನಗೆ ಇಷ್ಟವಿರಲಿಲ್ಲ : ಹೆಚ್ ಡಿಕೆ
ಮೈಸೂರು : ನಿಖಿಲ್ ಕುಮಾರಸ್ವಾಮಿಯನ್ನು ರಾಜಕಾರಣಕ್ಕೆ ತರುವುದು ನನಗೆ ಇಷ್ಟವಿರಲಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.. ಮೈಸೂರಿನಲ್ಲಿ ಮಾತನಾಡಿರೋ ಅವರು , ಪಕ್ಷದ ಮುಖಂಡರ ಒತ್ತಡದ ಮೇರೆಗೆ ನಿಖಿಲ್ ಕುಮಾರಸ್ವಾಮಿಯನ್ನು ರಾಜಕಾರಣಕ್ಕೆ ತಂದೆ.
ಕುಟುಂಬ ರಾಜಕಾರಣದ ವಿಚಾರದಲ್ಲಿ ನಾನು ಈಗ ಕೇವಲ ನನ್ನ ಕುಟುಂಬದ ಬಗ್ಗೆ ಮಾತ್ರ ಮಾತ್ನಾಡುತ್ತೇನೆ. ನಾನು ನಮ್ಮ ಸಹೋದರರು ಬೇರೆಯಾಗಿದ್ದೇವೆ. ಹಾಗಾಗಿ ನಾನು, ನನ್ನ ಪತ್ನಿ, ನನ್ನ ಮಗನ ಬಗ್ಗೆ ಮಾತ್ರ ಪ್ರಸ್ತಾಪ ಮಾಡುತ್ತಿದ್ದೇನೆ.
ಒಟ್ಟಾರೆ ಹೆಚ್.ಡಿ ದೇವೇಗೌಡರ ಕುಟುಂಬದ ಬಗ್ಗೆ ನಾನು ಮಾತ್ನಾಡುತ್ತಿಲ್ಲ. ನನ್ನ ಕುಟುಂಬದ ಬಗ್ಗೆ ಮಾತನಾಡುತ್ತಿದ್ದೇನೆ ಎಂದಿದ್ದಾರೆ.