ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದಿನ ವಿಧಾನಸಭಾ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತು

Namratha Rao by Namratha Rao
February 16, 2022
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಇಂದಿನ ವಿಧಾನಸಭಾ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮಾತು

ಗ್ರಾಮೀಣಾಭಿವೃದ್ಧಿ ಸಚಿವರಾದ ಈಶ್ವರಪ್ಪನವರು ಈ ತಿಂಗಳ 9 ರಂದು ರಾಷ್ಟ್ರ ಧ್ವಜದ ಬಗ್ಗೆ ನೀಡಿರುವ ಹೇಳಿಕೆ 10ನೇ ತಾರೀಖಿನಂದು ಸುದ್ದಿ ಮಾಧ್ಯಮಗಳಲ್ಲಿ, ಪತ್ರಿಕೆಗಳಲ್ಲಿ ಪ್ರಸಾರವಾಗಿರುವುದನ್ನು ನಾವೆಲ್ಲಾ ನೋಡಿದ್ದೇವೆ, ಓದಿದ್ದೇವೆ. 2006 ರಿಂದಲೂ ಸಚಿವರಾಗಿದ್ದವರು, ಅನುಭವಿಗಳು, ಹಿರಿಯರು ಆದ ಅವರು ಗೌರವದಿಂದ ಮಾತನಾಡುತ್ತಾರೆ ಎಂದು ಭಾವಿಸಿದ್ದೆ, ಆದರೆ ಅವರು ಸಂವಿಧಾನ, ರಾಷ್ಟ್ರ ಧ್ವಜ, ರಾಷ್ಟ್ರ ಗೀತೆ ಬಗೆಗೆ ಬಹಳ ಅಗೌರವದಿಂದ ಮಾತನಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಕಿಡಿಕಾರಿದ್ದಾರೆ.

Related posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

August 25, 2026
ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

August 25, 2026

. ಸಂವಿಧಾನದ ಆರ್ಟಿಕಲ್ 51(1) ರಲ್ಲಿ ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ಸ್ಪಷ್ಟವಾಗಿ ತಿಳಿಸಲಾಗಿದೆ. ಅದರಲ್ಲಿ ನಮ್ಮ ರಾಷ್ಟ್ರ ಧ್ವಜ, ರಾಷ್ಟ್ರ ಗೀತೆ, ಸಂವಿಧಾನಕ್ಕೆ ಪ್ರತಿಯೊಬ್ಬರು ಗೌರವ ಕೊಡಬೇಕು ಎಂದಿದೆ. ಇಂಥಾ ರಾಷ್ಟ್ರ ಧ್ವಜವನ್ನು ನೋಡಿದಾಗ ನಮಗೆಲ್ಲ ರೋಮಾಂಚನವಾಗುತ್ತೆ, ಹೋರಾಟದ ಕಿಚ್ಚು ಬರುತ್ತೆ, ಎದ್ದು ನಿಂತು ಗೌರವ ಕೊಡುತ್ತೇವೆ. ಇದು ನಮಗೆ ಸಂವಿಧಾನ ಕಲಿಸಿದೆ.

ಸಚಿವ ಈಶ್ವರಪ್ಪ ಅವರು ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಕೆಂಪುಕೋಟೆಯಲ್ಲಿ ಸದಾ ಕಾಲ ನಮ್ಮ ರಾಷ್ಟ್ರ ಧ್ವಜ ಮಾತ್ರ ಹಾರಾಡುತ್ತದೆ, ಅದು ದೇಶದ ಗೌರವದ ಸಂಕೇತ. ಅದರ ಜಾಗದಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎನ್ನುವುದು ಸಂವಿಧಾನ ಮತ್ತು ದೇಶಕ್ಕೆ ಮಾಡಿದ ಅಪಮಾನವಾಗುತ್ತದೆ. ಈ ಬಗ್ಗೆ ಕಾನೂನುಗಳಿದ್ದಾವೆ, ರಾಷ್ಟ್ರ ಗೌರವದ ಸಂಕೇತಗಳಿಗೆ ಅಗೌರವ ನಿರ್ಬಂಧಿಸುವ ಕಾಯ್ದೆ 1971ರ ಸೆಕ್ಷನ್ ಎರಡರ ಪ್ರಕಾರ ಯಾವುದೇ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಅಥವಾ ಯಾವುದೇ ಜಾಗದಲ್ಲಿ ರಾಷ್ಟ್ರ ಧ್ವಜವನ್ನು ಸುಟ್ಟರೆ, ಹಾಳು ಮಾಡಿದರೆ, ಅಗೌರವ ತೋರಿದರೆ ಅಥವಾ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುವಂತ ಹೇಳಿಕೆ ಅಥವಾ ಬರಹ ಅಥವಾ ಕೃತ್ಯ ಎಸಗಿದರೆ ಅಂಥವರಿಗೆ ಮೂರು ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸುವ ಅಥವಾ ದಂಡ ವಿಧಿಸುವ ಅಥವಾ ಎರಡನ್ನೂ ಶಿಕ್ಷೆ ರೂಪದಲ್ಲಿ ಜಾರಿ ಮಾಡಬಹುದು ಎಂದಿದೆ. ರಾಷ್ಟ್ರ ಗೀತೆ, ರಾಷ್ಟ್ರ ಧ್ವಜ, ರಾಷ್ಟ್ರ ಲಾಂಛನಕ್ಕೆ ತೋರುವ ಅಗೌರವವು ದೇಶದ್ರೋಹ ಪ್ರಕರಣದಡಿ ಬರಲಿದೆ ಎಂದು ಭಾರತೀಯ ದಂಡ ಸಂಹಿತೆಯಲ್ಲಿದೆ.

ಈಶ್ವರಪ್ಪ ನವರು ದೇಶದ್ರೋಹದ ಹೇಳಿಕೆ ನೀಡಿ ವಾರ ಕಳೆದರೂ ಅವರ ಮೇಲೆ ಸರ್ಕಾರ ಯಾವ ರೀತಿಯ ಕ್ರಮ ಕೈಗೊಂಡಿಲ್ಲ. ನನ್ನ ಪ್ರಕಾರ ಮುಖ್ಯಮಂತ್ರಿಗಳೇ ಅವರನ್ನು ಸ್ವಯಂ ಪ್ರೇರಿತರಾಗಿ ಮಂತ್ರಿ ಮಂಡಲದಿಂದ ವಜಾ ಮಾಡಬೇಕಿತ್ತು, ಆದರೆ ಮಾಡಿಲ್ಲ. ದೆಹಲಿಯಲ್ಲಿ ನಡೆಯುತ್ತಿದ್ದ ರೈತ ಚಳವಳಿಯ ಸಂದರ್ಭದಲ್ಲಿ ರಾಷ್ಟ್ರ ಧ್ವಜದ ಕೆಳಗೆ ರೈತ ಧ್ವಜ ಹಾರಿಸಿದ ಕಾರಣಕ್ಕೆ ಅಲ್ಲಿದ್ದ ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು, ಅದೇ ಕೆಲಸವನ್ನು ಈಶ್ವರಪ್ಪ ಅವರ ಮೇಲೂ ಮಾಡಬೇಕಲ್ಲವೇ? ಒಬ್ಬ ಮಂತ್ರಿಯಾಗಿ ರಾಷ್ಟ್ರ ಧ್ವಜಕ್ಕೆ ಗೌರವ ಸೂಚಿಸಲ್ಲ ಎಂದರೆ ನಿಜಕ್ಕೂ ನಾಚಿಕೆಗೇಡಿನ ವಿಚಾರ, ಇಂಥವರಿಗೆ ಒಂದು ಕ್ಷಣವೂ ಆ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇಲ್ಲ.

22 ಜುಲೈ 1947 ರಲ್ಲಿ ಸ್ವಾತಂತ್ರ್ಯ ಬರುವ ಮೊದಲೇ ನಮ್ಮ ದೇಶದ ರಾಷ್ಟ್ರ ಧ್ವಜವನ್ನು ಅಂಗೀಕರಿಸಲಾಗಿತ್ತು. ಈ ಧ್ವಜಕ್ಕೆ ದೊಡ್ಡ ಇತಿಹಾಸವೇ ಇದೆ. ಇದಕ್ಕೂ ಮೊದಲು ಕೇಸರಿ, ಬಿಳಿ, ಹಸಿರು ಮಧ್ಯದಲ್ಲಿ ಚರಕ ಹೊಂದಿರುವ ಧ್ವಜ ರಾಷ್ಟ್ರ ಧ್ವಜವಿತ್ತು. ಆ ನಂತರ ತ್ರಿವರ್ಣ ಧ್ವಜದ ಮಧ್ಯಭಾಗದಲ್ಲಿ ಅಶೋಕ ಚಕ್ರ ಹೊಂದಿರುವ ಧ್ವಜವನ್ನು ರಾಷ್ಟ್ರ ಧ್ವಜವಾಗಿ ಅಂಗೀಕಾರ ಮಾಡಲಾಯಿತು.

ರಾಷ್ಟ್ರ ಧ್ವಜಕ್ಕೆ ಅಪಚಾರ ಎಸಗಿರುವ ಈಶ್ವರಪ್ಪ ಅವರನ್ನು ತಕ್ಷಣ ಸಂಪುಟದಿಂದ ವಜಾಗೊಳಿಸಿ, ಅವರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ, ತನಿಖೆಯಾಗಬೇಕು ಎಂದು ಆಗ್ರಹಿಸುತ್ತೇನೆ.

Tags: #saakshatvpoliticssession 2022siddaramaih
ShareTweetSendShare
Join us on:

Related Posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

by Shwetha
August 25, 2026
0

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್‌ನಲ್ಲಿ SIR-2026,...

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

by Shwetha
August 25, 2026
0

ಹಾಸನ: ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರ ಆಡಳಿತ ವೈಖರಿ ಮತ್ತು ನಡವಳಿಕೆ ವಿರುದ್ಧ ಮಾಜಿ ಸಚಿವ ಹಾಗೂ ಹಾಸನ ಶಾಸಕ ಹೆಚ್.ಡಿ. ರೇವಣ್ಣ ಅವರು ಯುದ್ಧ ಸಾರಿದ್ದಾರೆ....

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

by Shwetha
August 25, 2026
0

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮದ ನಡುವೆಯೇ ಕಿಡಿಗೇಡಿಗಳ ಅತಿರೇಕದ ವರ್ತನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಟಿಪ್ಪು ಸುಲ್ತಾನ್ ಕಟೌಟ್ ಮುಂದೆ ಪಾಕಿಸ್ತಾನಿ...

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

by Shwetha
August 25, 2026
0

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ವಿಧಾನಸಭೆಯಲ್ಲಿ ಹಲವು ಮಹತ್ವದ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿಸ್ತರಿಸುವುದರ ಜೊತೆಗೆ,...

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

by Shwetha
August 25, 2026
0

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ರೈಲ್ವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram