ಪ್ರಣಾಳಿಕೆಯಲ್ಲಿ ನೀಡಿದ ವಾಗ್ದಾನ ಈಡೇರಿಸದೇ ಇದ್ದರೆ ಬೀದಿಗೆ ಇಳಿದು ಪ್ರತಿಭಟಿಸುವುದಾಗಿ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಮಧ್ಯ ಪ್ರದೇಶ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಭೋಪಾಲ್ ನಲ್ಲಿ ಮಾತನಾಡಿದ ಸಿಂಧಿಯಾ ಕಾಂಗ್ರೆಸ್ ಭರವಸೆ ನೀಡಿದ ಮೇಲೆ ಅದನ್ನು ಈಡೇರಿಸದೆ ಇರುವುದಿಲ್ಲ. ಹಾಗಾಗಿ ಮುಖ್ಯಮಂತ್ರಿ ಕಮಲ್ ನಾಥ್ ಪ್ರಣಾಳಿಕೆಯಲ್ಲಿ ವಾಗ್ದಾನ ನೀಡಿದಂತೆ ರೈತರ ಸಾಲ, ಶಿಕ್ಷಕರ ಬೇಡಿಕೆ ಈಡೇರಿಸಬೇಕಾಗಿದೆ. ಇಲ್ಲದಿದ್ದರೆ ರೈತರ ಜೊತೆ ಬೀದಿಗೆ ಇಳಿದು ಪ್ರತಿಭಟಿಸುವುದಾಗಿ ಎಚ್ಚರಿಸಿದರು. ಕೆಲ ದಿನಗಳ ಮೊದಲು ಪಕ್ಷದ ನಾಯಕ ಗೋವಿಂದ್ ಸಿಂಗ್ ಸಾಲ ಮನ್ನಾ ಮಾಡಲು ಅಸಾಧ್ಯ ಎಂದಿದ್ದರು.
ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ
ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...








