TOP 10 NEWS – ಈ ದಿನದ ಪ್ರಮುಖ ಸುದ್ದಿಗಳು…!!
1 ಜುಲೈ 2008 ರಲ್ಲಿ ಅಹಮದಾಬಾದ್ ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ನ್ಯಾಯಲಯ 49 ಅಪರಾಧಿಗಳಲ್ಲಿ 38 ಮಂದಿಗೆ ಮರಣದಂಡನೆ ವಿಧಿಸಿದ್ದು, 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
2 ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 25,920 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. 66,254 ಜನರು ಗುಣಮುಖರಾಗಿದ್ದು, ಸಕ್ರೀಯ ಪ್ರಕರಣಗಳು 2,92,092 ಲಕ್ಷದಷ್ಟಿದೆ. ಕಳೆದ 24 ಗಂಟೆಯಲ್ಲಿ 492 ಜನರು ಸೋಂಕಿಗೆ ಮರಣ ಹೊಂದಿದ್ದಾರೆ.
3 ಭಾರತೀಯ ನೌಕಾಪಡೆಯ ಯುದ್ಧನೌಕೆ INS ವಿಶಾಖಪಟ್ಟಣಂ ಪಶ್ಚಿಮ ಕರಾವಳಿಯಿಂದ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಪರೀಕ್ಷಾರ್ಥವಾಗಿ ಯಶಸ್ವಿಯಾಗಿ ಉಡಾಯಿಸಲಾಗಿದೆ.
4 ಫೆಬ್ರವರಿ 20 ರಂದು ನಡೆಯಲಿರುವ ಪಂಜಾಬ್ ಚುನಾವಣೆ ಪ್ರಚಾರಕ್ಕೆ ಇಂದು ಕೊನೆಯ ದಿನ. ಕೊನೆಯ ದಿನದ ಪ್ರಯುಕ್ತ ಎಲ್ಲಾ ರಾಜಕೀಯ ಪಕ್ಷಗಳು ಮತದಾರರ ಬೆಂಬಲ ಪಡೆಯಲು ಕೊನೆಯ ಕಸರತ್ತು ನಡೆಸುತ್ತಿವೆ.
5 ನಾನು ಹಿಜಾಬ್ ಪಜಾಬ್ ಜೊತೆ ಇಲ್ಲ. ನಮಗೆ ನಾಡಿನ ಜನರ ಬದುಕು ಮುಖ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಕುಮಾರಸ್ವಾಮಿ, ಯಾವ ಜಾತಿಯ ಜನರಿರಲಿ ಜನರ ಬದುಕು ಮುಖ್ಯ. ನಾಡಿನಲ್ಲಿ ಶಾಂತಿ ವಾತಾವರಣ ಹಾಳು ಮಾಡಬಾರದು. ನಾನು ಹಿಜಾಬ್ ಪಜಾಬ್ ಜೊತೆ ಇಲ್ಲ. ನಮಗೆ ನಾಡಿನ ಜನರ ಬದುಕು ಮುಖ್ಯ ಎಂದರು.
6 ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ನಾವು ಆ ಬಚಲು ಬಾಯಿ ಈಶ್ವರಪ್ಪ ರಾಜೀನಾಮೆ ಕೇಳ್ತಾಯಿಲ್ಲ. ಈಶ್ವರಪ್ಪ ಅವರದ್ದು ರಾಷ್ಟ್ರ ದ್ರೋಹದ ಹೇಳಿಕೆ. ಸ್ವತಃ ಸಿಎಂ ಬೊಮ್ಮಾಯಿ ಅಥವಾ ರಾಜ್ಯಪಾಲರ ಅವರೇ ಈಶ್ವರಪ್ಪ ಅವರನ್ನು ಡಿಸ್ಮಿಸ್ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
07 IPL-2022 ಋತುವಿನ ಆರಂಭಕ್ಕೂ ಮುನ್ನ, ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಭಾರೀ ಆಘಾತ ಎದುರಾಗಿದೆ. ತಂಡದ ಸಹಾಯಕ ಕೋಚ್ ಸೈಮನ್ ಕ್ಯಾಟಿಚ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
08 ಸುರೇಶ್ ರೈನಾ ಕಳೆದ ಎರಡು ಐಪಿಎಲ್ ಸೀಸನ್ಗಳಲ್ಲಿ ವೈಯಕ್ತಿಕ ಕಾರಣಗಳಿಂದ ಪಂದ್ಯಗಳಿಂದ ದೂರ ಉಳಿದಿದ್ದರು. ಅವರು ಎಂ.ಎಸ್.ಧೋನಿ ಮತ್ತು ಫ್ರಾಂಚೈಸಿಯ ನಂಬಿಕೆಯನ್ನು ಉಳಿಸಿಕೊಂಡಿಲ್ಲ. ಹೀಗಾಗಿ ಅವರನ್ನ ಹರಾಜಿನಲ್ಲಿ ಖರೀದಿಸಲಿಲ್ಲ ಎಂದು ಸೈಮನ್ ಡೋಲ್ ಹೇಳಿದ್ದಾರೆ.
09 ತೆಲುಗು ನಟ ಅಕ್ಕಿನೇನಿ ನಾಗಾರ್ಜುನ ತಂದೆ ನಾಗೇಶ್ವರ್ ರಾವ್ ಅವರ ನೆನಪಿಗಾಗಿ ವಿಶೇಷ ಕಾರ್ಯಕ್ಕೆ ಕೈ ಹಾಕಿದ್ದಾರೆ. ಈ ಹಿಂದೆ ಭರವಸೆ ನೀಡಿದಂತೆ ತೆಲಂಗಾಣದ ಮೇಡಚಲ್ ಜಿಲ್ಲೆಯ ಚೆಂಗಿಚೆರ್ಲಾದಲ್ಲಿ 1,080 ಎಕರೆ ಅರಣ್ಯ ಭೂಮಿಯನ್ನು ದತ್ತು ಪಡೆದಿದ್ದಾರೆ.
10 ಅಕ್ಷಯ್ ಕುಮಾರ್ ನಟನೆಯ ಬಹು ನಿರೀಕ್ಷಿತ ಬಚ್ಚನ್ ಪಾಂಡೆ ಟ್ರೇಲರ್ ಬಿಡುಗಡೆಯಾಗಿದೆ. ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ಕೃತಿ ಸನೋನ್ ನಟನೆಯ ಬಚ್ಚನ್ ಪಾಂಡೆ ಯನ್ನ ಫರ್ಹಾದ್ ಸಾಮ್ಜಿ ನಿರ್ದೇಶನ ಮಾಡಿದ್ದಾರೆ. 2014 ರಲ್ಲಿ ಬಿಡುಗಡೆಯಾದ ತಮಿಳು ಚಿತ್ರ ಜಿಗರ್ತಾಂಡದ ರಿಮೇಕ್ ಆಗಿದ್ದು. ಬಚ್ಚನ್ ಪಾಂಡೆ ಮಾರ್ಚ್ 18 ರಂದು ತೆರೆಗೆ ಬರಲಿದೆ.








