Chethan kumar Ahimsa : ‘ಟ್ವೀಟ್’ ಸಂಕಷ್ಟದಲ್ಲಿ ಚೇತನ್ ಅಹಿಂಸಾ : 14 ದಿನಗಳ ನ್ಯಾಯಾಂಗ ಬಂಧನ
ನ್ಯಾಯಾಂಗ ನಿಂದನೆ ಆರೋಪದಡಿ ನಟ ಹಾಗೂ ಸಾಮಾಜಿಕ ಹೋರಾಟಗಾರ ನಟ ಆದಿನಗಳು ಚೇತನ್ ಪೊಲೀಸರಿಂದ ಅರೆಸ್ಟ್ ಇದೀಗ ಅವರನ್ನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಹೌದು ಸದಾ ಒಂದಿಲ್ಲಾ ಒಂದು ವಿಚಾರದಲ್ಲಿ ಸುದ್ದಿಯಲ್ಲಿರುವ ವಿವಾದಗಳನ್ನ ಬೆನ್ನಿಗೆ ಎಳೆದುಕೊಳ್ಳು ನಟ ಚೇತನ್ ಅವರು ಇತ್ತೀಚೆಗೆ ಹಿಜಾಬ್ ಕೇಸ್ ನ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ವಿರುದ್ಧ ಮಾತನಾಡಿದ್ದಾಗಿ ಕೆಲ ಸಂಘಟನೆಗಳು ದೂರಿದ್ದವು..
ಚೇತನ್ ಅವರ ಟ್ವೀಟ್ ಆಧರಿಸಿ ದೂರು ದಾಖಲಿಸಲಾಗಿತ್ತು.. ನ್ಯಾಯಾಂಗ ನಿಂದನೆ ಆರೋಪದಡಿ ನಟ ಚೇತನ್ರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ನಂತರ ನಟನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಚೇತನ್ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 8ನೇ ಎಸಿಎಂಎಂ ನ್ಯಾಯಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಮತ್ತೊಂದೆಡೆ ವಕೀಲ ಕೆ.ಬಾಲನ್ ಅವರು ಚೇತನ್ ಪರವಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಇಂದು ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹಿಜಾಬ್ ಅರ್ಜಿ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಟ್ಟೀಟ್ ಮೂಲಕ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಸಂಭಂದ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಟ್ಟೀಟ್ ಆರೋಪದಡಿ ನಟ ಚೇತನ್ ರನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದರು.
ಚೇತನ್ ಕುಮಾರ್ ಅಹಿಂಸಾ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ ಜನಾಂಗದವರಿಗೆ ಕಾನೂನು ಮತ್ತು ಸುವ್ಯವಸ್ಥೆ, ನ್ಯಾಯಾಲಯ, ಸರ್ಕಾರ ಮತ್ತು ನಮ್ಮ ದೇಶದ ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ, ಆಕ್ರೋಶ ಬರುವ ಹಾಗೆ ಟ್ವೀಟ್ ಮಾಡಿದ್ದಾರೆ. ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ ಹಾಗೂ ಇತ್ಯಾದಿಗಳನ್ನು ಮಾಡುವಂತೆ ಪ್ರಚೋದಿಸುತ್ತಿದ್ದಾರೆ ಎಂದು ಚೇತನ್ ಅವರ ವಿರುದ್ಧ ಆರೋಪಿಸಲಾಗಿದೆ








