ಉಕ್ರೇನ್ ವಿರುದ್ಧದ ರಷ್ಯಾದ ‘ಆಕ್ರಮಣ’ವನ್ನು ಖಂಡಿಸುವ UNSC ನಿರ್ಣಯಕ್ಕೆ ಭಾರತ ಗೈರು – Saaksha Tv
ನವದೆಹಲಿ: ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಆಕ್ರಮಣವನ್ನು ಮತ್ತು ಉಕ್ರೇನ್ ದೇಶದಿಂದ ರಷ್ಯಾ ತನ್ನ ಪಡೆಗಳನ್ನು ತಕ್ಷಣ ಬೇಷರತ್ತಾಗಿ ಹಿಂತೆಗೆದುಕೊಳ್ಳುವಂತೆ ನಿರ್ಣಯದಲ್ಲಿ ಮತದಾನಕ್ಕೆ ಭಾರತ ಶನಿವಾರ ಗೈರು ಹಾಜರಾಗಿದೆ.
ಈ ನಿರ್ಣಯದ ಮತದಾನಕ್ಕೆ ಯುಎಸ್ ಮತ್ತು ಅಲ್ಬೇನಿಯಾ ಪ್ರಾಯೋಜಿಸಿದ ಕರಡು ನಿರ್ಣಯದ ಮೇಲೆ ಮತ ಚಲಾಯಿಸಿತು ಮತ್ತು ಪೋಲೆಂಡ್, ಇಟಲಿ, ಜರ್ಮನಿ, ಎಸ್ಟೋನಿಯಾ, ಲಕ್ಸೆಂಬರ್ಗ್ ಮತ್ತು ನ್ಯೂಜಿಲೆಂಡ್ ಸೇರಿದಂತೆ ಹಲವಾರು ಇತರ ರಾಷ್ಟ್ರಗಳು ಮತ ಚಲಾಯಿಸಿದವು.
ಇದಕ್ಕೆ 11 ದೇಶಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ ಭಾರತ ಚೀನಾ, ಯುನೈಟೆಡ್ ಅರಬ್ ಎಮಿರೇಟ್ಸ್ ದೇಶಗಳು ಮತ ಚಲಾವಣೆಯಿಂದ ದೂರ ಉಳಿದಿದೆ.
ಯುಎನ್ಎಸ್ಸಿ ಸಭೆಯಲ್ಲಿ ಭಾಗವಹಿಸಿದ್ದ ಭಾರತ ಹಿಂಸಾಚಾರ ಮತ್ತು ದ್ವೇಷವನ್ನು ತಕ್ಷಣವೇ ನಿಲ್ಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕೆಂದು ಭಾರತವು ಒತ್ತಾಯಿಸಿದ್ದು, ವಿವಾದಗಳನ್ನು ಇತ್ಯರ್ಥ ಮಾಡಲು ಮಾತುಕತೆಯೊಂದೇ ದಾರಿ ಎಂದಿದೆ.
ವಿಶ್ವಸಂಸ್ಥೆಯಲ್ಲಿ ಭಾರತ ಕಾಯಂ ಪ್ರತಿನಿಧಿಯಾದ ಟಿ ಎಸ್ ತಿರುಮೂರ್ತಿ ಮಾತನಾಡಿ, ಉಕ್ರೇನ್ನಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಭಾರತವು ವಿಚಲಿತವಾಗಿದೆ. ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಉತ್ತಮ ಮಾರ್ಗವನ್ನು ಕಂಡುಕೊಳ್ಳಬೇಕಾಗಿದೆ. ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳನ್ನು ಇತ್ಯರ್ಥಗೊಳಿಸಲು ಮಾತುಕತೆಯೊಂದೇ ಉತ್ತರವಾಗಿದೆ ಎಂದು ಹೇಳಿದ್ದಾರೆ.
ರಷ್ಯಾ ಮತ್ತು ಉಕ್ರೇನ್ ವಿಚಾರದಲ್ಲಿ ರಾಜತಾಂತ್ರಿಕ ಮಾತುಕತೆಯ ಮಾರ್ಗವನ್ನು ಕೈಬಿಟ್ಟಿರುವುದು ವಿಷಾದದ ಸಂಗತಿಯಾಗಿದೆ. ನಾವು ರಾಜತಾಂತ್ರಿಕ ಮಾರ್ಗವನ್ನು ಆಯ್ದುಕೊಳ್ಳಬೇಕು. ಈ ಎಲ್ಲಾ ಕಾರಣಗಳಿಗಾಗಿ, ಭಾರತವು ಈ ನಿರ್ಣಯದಿಂದ ದೂರವಿರಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಭಾರತೀಯ ಸಮುದಾಯದ ಬಗ್ಗೆ ಕಳವಳ: ಉಕ್ರೇನ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ವಿದ್ಯಾರ್ಥಿಗಳಿದ್ದು, ಅವರನ್ನು ಒಳಗೊಂಡ ಭಾರತೀಯ ಸಮುದಾಯದ ಸುರಕ್ಷತೆಯ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಉಕ್ರೇನ್ನಲ್ಲಿರುವ ಸುಮಾರು 16 ಸಾವಿರ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪ್ರಧಾನಮಂತ್ರಿ ಕಚೇರಿ ಹೇಳಿದೆ.








