ಭಾರತದ ಸಹಾಯ ಕೇಳಿದ ಉಕ್ರೇನ್ – Saaksha Tv
ನವದೆಹಲಿ: ಉಕ್ರೇನ್ನ ಮೇಲೆ ರಷ್ಯಾ ದಾಳಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಸಹಾಯವನ್ನು ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ರಷ್ಯಾ 1 ಲಕ್ಷಕ್ಕೂ ಹೆಚ್ಚು ಸೈನಿಕರಿಂದ ದಾಳಿ ಮಾಡುತ್ತಿದೆ. ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ವಿವರಿಸಿದ್ದೇನೆ. ಜೊತೆಗೆ ಶಾಂತಿಯುತ ಪ್ರಯತ್ನಗಳಿಗೆ ಭಾರತ ಸರ್ಕಾರ ಸಹಕರಿಸಲು ಸಿದ್ಧ ಎಂದು ತಿಳಿಸಿದೆ ಎಂದು ಉಕ್ರೇನ್ ಅಧ್ಯಕ್ಷ ತಿಳಿಸಿದ್ದಾರೆ.\
Spoke with 🇮🇳 Prime Minister @narendramodi. Informed of the course of 🇺🇦 repulsing 🇷🇺 aggression. More than 100,000 invaders are on our land. They insidiously fire on residential buildings. Urged 🇮🇳 to give us political support in🇺🇳 Security Council. Stop the aggressor together!
— Volodymyr Zelenskyy / Володимир Зеленський (@ZelenskyyUa) February 26, 2022
ಈ ಬಗ್ಗೆ ಪ್ರಧಾನಿ ಕಚೇರಿ ಪ್ರಕಟನೆ ಹೊರಡಿಸಿದ್ದು, ಉಕ್ರೇನ್ ರಷ್ಯಾ ನಡುವಿನ ಯುದ್ಧದಲ್ಲಿ ಉಂಟಾದ ಸಾವು, ನೋವು ಆಸ್ತಿ-ಪಾಸ್ತಿ ಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದರು. ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಕಾಳಜಿ ವ್ಯಕ್ತಪಡಿಸಿ, ಅವರನ್ನು ತವರಿಗೆ ಕರೆತರಲು ಉಕ್ರೇನ್ ಅಧಿಕಾರಿಗಳ ಸಹಾಯವನ್ನು ಕೋರಿದರು ಎಂದು ತಿಳಿಸಿದೆ.








