ತನ್ನ ಮಗುವಿನೊಂದಿಗೆ ತಂದೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಅಮಾನುಷ ಘಟನೆ ನೇತ್ರಾವತಿ ನದಿ ಸೇತುವೆ ಬಳಿ ನಡೆದಿದೆ. ಗೋಪಾಲಕೃಷ್ಣ ರೈ (45) ಮತ್ತು ಮಗ ನಮೀಶ್ ರೈ (6) ಶವವಾಗಿ ಕಂಡು ಬಂದಿದ್ದು, ಸಾವಿಗೆ ನಿಖರವಾದ ಕಾರಣ ಕಂಡು ಬಂದಿಲ್ಲ.ಇನ್ನು ಮೃತರು ಮೂಲತಃ ಬಂಟ್ವಾಳದ ಬಾಳ್ತಿಲ ನಿವಾಸಿಗಳೆಂದು ತಿಳಿದು ಬಂದಿದೆ. ಗೋಪಾಲಕೃಷ್ಣ ರೈ ಅವರ ಕಾರು ಉಳ್ಳಾಲ ನೇತ್ರಾವತಿ ನದಿ ಸೇತುವೆ ಬಳಿ ಪತ್ತೆಯಾಗಿದ್ದು, ಮಹಾರಾಷ್ಟ್ರ ನೋಂದಣಿಯ ಈ ಕಾರಿನಲ್ಲಿ ಯಾರು ಇಲ್ಲದ್ದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರ ಪರಿಶೀಲನೆ ನಂತರ ಈ ದುರ್ಘಟನೆ ಬೆಳಕಿಗೆ ಬಂದಿದೆ.
ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?
ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...








