ಉಕ್ರೇನ್ ಬಿಕ್ಕಟ್ಟು – ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನೇತೃತ್ವದಲ್ಲಿ ಸತತ ಸಭೆ
ಉಕ್ರೇನ್ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆಯಿತು. ಉಕ್ರೇನ್ ಬಿಕ್ಕಟ್ಟು ಶುರುವಾದಾಗಿನಿಂದ ಮೋದಿ ಸತತ ಸಭೆಗಳನ್ನ ನಡೆಸುವ ಮೂಲಕ ಪರಿಸ್ಥಿಯನ್ನ ಅವಲೋಕಿಸುತ್ತಿದ್ದಾರೆ.
ಈ ಸಭೆಯಲ್ಲಿ ಕೇಂದ್ರ ಸಚಿವರಾದ ಡಾ ಎಸ್ ಜೈಶಂಕರ್ ಮತ್ತು ಪಿಯೂಷ್ ಗೋಯಲ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಎರಡು ದಿನಗಳ ಹಿಂದೆ, ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಇದೇ ರೀತಿಯ ಸಭೆ ನಡೆಸಿದ್ದರು. ಸಂಘರ್ಷದ ಆರಂಭದಿಂದಲೂ ಉಕ್ರೇನ್ ಬಿಕ್ಕಟ್ಟಿನ ಕುರಿತು ಅವರು ನಿರಂತರವಾಗಿ ಉನ್ನತ ಮಟ್ಟದ ಸಭೆಗಳನ್ನು ನಡೆಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ನಾಯಕ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ರಷ್ಯಾದ ಆಕ್ರಮಣಕಾರಿ ಪಡೆಗಳಿಂದ ಮುತ್ತಿಗೆ ಹಾಕಿದ ಉಕ್ರೇನ್ನ ಸುಮಿ ನಗರದಿಂದ ಸ್ಥಗಿತಗೊಂಡಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಿಸುವಿಕೆಯನ್ನು ಪ್ರಾರಂಭಿಸುವ ಮಾರ್ಗಗಳನ್ನು ಚರ್ಚಿಸಿದರು.








