ಮಂಗಳೂರು : ಬುದ್ದಿವಂತರ ನಾಡಿನಲ್ಲಿ ಪೊಲೀಸ್ ರಿಗೆ ಕಂಟಕವಾದ ಮುಂಬೈ ನಿಂದ ಬಂದ ವ್ಯಕ್ತಿ. ಮುಂಬೈ ನಿಂದ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಆತನ ಸಂಪರ್ಕದಲ್ಲಿದ್ದ ಬಂಟ್ವಾಳ ತಾಲ್ಲೂಕಿನ, ವಿಟ್ಲ ಪೊಲೀಸ್ ಠಾಣೆ ಪೇದೆಗೆ ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಆ ಮೂಲಕ ಇಂದು ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಒಂದು ಕೊರೊನಾ ಪಾಸಿಟಿವ್ ಪ್ರಕರಣವಾಗಿದೆ. ಮೇ 14 ರಂದು ಮಹರಾಷ್ಟ್ರದ ರಾಯಗಡದಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಸೋಂಕಿತ ವ್ಯಕ್ತಿ ಕ್ವಾರಂಟೈನ್ ಗೆ ಹೋಗುವ ಮುನ್ನ ಪೊಲೀಸ್ ಠಾಣೆಗೆ ಹೋಗಿದ್ದನು. ಹಾಗಾಗಿ ಪೋಲಿಸ್ ರಿಗೆ ಕೊರೊನಾ ವೈರಸ್ ಕಾಣಿಸಿಕೊಂಡಿದೆ. ಅಲ್ಲದೆ ಇನ್ನೂ ಕೆಲ ಜನರಿಗೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಪಾಸಿಟಿವ್ ಕಾಣಿಸಿಕೊಂಡ ಪೊಲೀಸ್ ಸಂಪರ್ಕದಲ್ಲಿದ್ದವರನ್ನು ಕ್ವಾರೆಂಟೈನ್ ಮಾಡಲಾಗಿದೆ.
ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?
ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...








