ಹುಬ್ಬಳ್ಳಿಯ ಕೆ.ಎಲ್.ಇ ಎಂಜಿನಿಯರಿಂಗ್ ಕಾಲೇಜಿನ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿದ್ದು, ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಹುಬ್ಬಳ್ಳಿಯ ಗೋಕುಲ ರಸ್ತೆಯ ಕೆ.ಎಲ್.ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೇಂದ್ರ ಸರಕಾರದ ಕೋಟಾದಡಿಯಲ್ಲಿ ಪ್ರವೇಶ ಪಡೆದಿದ್ದ ಕಾಶ್ಮೀರದ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎನ್ನುವ ಘೋಷಣೆ ಕೂಗಿದ ವಿಡಿಯೋ ವೈರಲ್ ಆಗಿತ್ತು. ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಮೀರ್ ಮೊಹಿದ್ದೀನ್ ವಾನಿ, ಬಾಸೀತ್ ಆಸೀಫ್ ಸೋಫಿ ಮತ್ತು ತಾಲಿಬ್ ಮಜೀದ್ ಘೋಷಣೆ ಕೂಗಿದ ವಿದ್ಯಾರ್ಥಿಗಳಾಗಿದ್ದು, ಪೊಲೀಸರು ಅವರ ವಿರುದ್ಧ ದೇಶದ್ರೋಹ ಮತ್ತು ಕೋಮು ಸೌಹಾರ್ದ ಕದಡುವ ಆರೋಪದಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.
ಹಾಸ್ಟೆಲ್ ವಿದ್ಯಾರ್ಥಿಗಳಾದ ಇವರು ಪುಲ್ವಾಮಾ ದಾಳಿಯ ಕರಾಳ ದಿನವಾದ ಶುಕ್ರವಾರ ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಪಾಕಿಸ್ತಾನ ಜಿಂದಾಬಾದ್, ಕಾಶ್ಮೀರಿ ಅಜಾದಿ ಕರೇಂಗೆ ಎಂಬಂತಹ ಘೋಷಣೆ ಕೂಗಿದ್ದರು. ಅದನ್ನು ವಿಡಿಯೋ ಮಾಡಿ ತಮ್ಮ ವಾಟ್ಸ್ ಆಪ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದು, ಆ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಇವರ ದೇಶದ್ರೋಹ ಕೃತ್ಯ ಬೆಳಕಿಗೆ ಬಂದಿದೆ. ಕಾಲೇಜು ಆಡಳಿತ ಮಂಡಳಿ ಮೂವರನ್ನೂ ಆಮಾನತುಗೊಳಿಸಿದೆ.
ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ
ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...








