ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Champion | ವೀರಯೋಧರಿಂದ “ಚಾಂಪಿಯನ್” ಹಾಡುಗಳ ಲೋಕಾರ್ಪಣೆ

Mahesh M Dhandu by Mahesh M Dhandu
March 19, 2022
in Cinema, Newsbeat, ಮನರಂಜನೆ
"Champion" kannada film songs release saaksha tv
Share on FacebookShare on TwitterShare on WhatsappShare on Telegram

Champion | ವೀರಯೋಧರಿಂದ “ಚಾಂಪಿಯನ್” ಹಾಡುಗಳ ಲೋಕಾರ್ಪಣೆ

ಸ್ನೇಹಿತನಿಂದ ಸ್ನೇಹಿನಿಗಾಗಿ ನಿರ್ಮಾಣವಾಗಿರುವ ಸಿನಿಮಾ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

ಅದು ನಿಜಕ್ಕೂ ಸಿನಿಮಾ ಸಮಾರಂಭ ಅನಿಸುತ್ತಿರಲಿಲ್ಲ. ಅಲ್ಲಿ ಸಿನಿಮಾ ಮಂದಿಗಿಂತ ಹೆಚ್ಚಿದವರು ಸೇನೆಯಲ್ಲಿ‌ ಕಾರ್ಯ ನಿರ್ವಹಿಸುವ ಸೇನಾನಿಗಳು.

ಸೇನಾ ವಿಭಾಗದ ಉತ್ಕೃಷ್ಟ ಪ್ರಶಸ್ತಿಗಳಾದ ಪರಮವೀರ ಚಕ್ರ ‌ಪಡೆದ ಯೋಗೇಂದ್ರ ಸಿಂಗ್ ಯಾದವ್ ಹಾಗೂ ಮಹಾವೀರ ಚಕ್ರ ಪಡೆದಿರುವ ಪಿ.ಎಸ್.ಗಣಪತಿ ಅವರು ಆ ಸಮಾರಂಭದ ಮುಖ್ಯ ಅತಿಥಿಗಳು.

ಈ ಎಲ್ಲಾ ಅದ್ಭುತ ಕ್ಷಣಗಳು ಸಾಕ್ಷಿಯಾಗಿದ್ದು, ಶಿವಾನಂದ ಎಸ್ ನೀಲಣ್ಣನವರ ನಿರ್ಮಾಣದ, ಶಾಹುರಾಜ್ ಶಿಂಧೆ ನಿರ್ದೇಶನದ “ಚಾಂಪಿಯನ್” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ.

ಸಚಿನ್ ಧನಪಾಲ್ ಹಾಗೂ ಅದಿತಿ ಪ್ರಭುದೇವ ನಾಯಕ-ನಾಯಕಿಯಾಗಿ ನಟಿಸಿರುವ, ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಯೋಗೇಂದ್ರ ಸಿಂಗ್ ಯಾದವ್, ಪಿ.ಎಸ್.ಗಣಪತಿ ಹಾಗೂ ಲಹರಿ ಸಂಸ್ಥೆಯ ವೇಲು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಕೊರೋನ ಪೂರ್ವದಲ್ಲಿ ನಮ್ಮ ಚಿತ್ರ ಆರಂಭವಾಯಿತು. ಮಾತಿನ ಭಾಗದ ಚಿತ್ರೀಕರಣ ಮುಗಿಯಿತು. ಐದು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿತ್ತು. ಆಗ ಕೊರೋನ ಆಗಮನವಾಯಿತು. ಇದೇ ಸಮಯದಲ್ಲಿ ಅನಿರೀಕ್ಷಿತವೆಂಬಂತೆ ನಮ್ಮ ನಿರ್ದೇಶಕರಾದ ಶಾಹುರಾಜ್ ಶಿಂಧೆ ಸಹ ದೈವಾಧೀನರಾದರು. ಅವರ ನಿಧನದ ನೋವು ಇನ್ನೂ ಮರೆಯಲಾಗುತ್ತಿಲ್ಲ. ನಂತರ ನೃತ್ಯ ನಿರ್ದೇಶಕರ ಸಾಹಾಯದಿಂದ ಹಾಡುಗಳ ಚಿತ್ರೀಕರಣ ಮುಗಿಸಿದ್ದೆವು. ಈಗ ಟೀಸರ್ ಬಿಡುಗಡೆ ಮಾಡಿದ್ದೇವೆ.

"Champion" kannada film songs release saaksha tv

ನಾನು ಬೆಳಗಾವಿಯವನು. ನನ್ನ ತಂದೆ ಸಹ ಆರ್ಮಿಯಲ್ಲಿ ಸೇವೆ ಸಲ್ಲಿಸಿದ್ದರು. ಹಾಗಾಗಿ ಇಂದು ಈ ಸಮಾರಂಭಕ್ಕೆ ಆರ್ಮಿ ಅಧಿಕಾರಿಗಳು ಬಂದಿರುವುದು ನನಗೆ ಹೆಮ್ಮೆ. ನಾನು ಬೆಂಗಳೂರಿಗೆ ಬಂದಾಗ ನನ್ನ ಸ್ನೇಹಿತನ ರೂಮಿನಲ್ಲಿ ಇರುತ್ತಿದೆ. ಸುರದ್ರೂಪಿ ಯುವಕ ಅವನು. ನಾನು ಅವನಿಗೆ ಹೇಳುತ್ತಿದ್ದೆ. ನನಗೇನಾದರೂ ಹೆಚ್ಚು ದುಡ್ಡು ಬಂದರೆ, ನಿನ್ನನ್ನು ನಾಯಕನನ್ನಾಗಿ ಮಾಡುತ್ತೇನೆ ಎಂದು. ಹದಿನಾಲ್ಕು ವರ್ಷಗಳ ನಂತರ ಆ ಕಾಲ ಕೂಡಿ ಬಂದಿದೆ. ಕೊಟ್ಡ ಮಾತಿನಂತೆ ನನ್ನ ಗೆಳೆಯ ಸಚಿನ್ ಧನಪಾಲ್ ನನ್ನು ನಾಯಕನನ್ನಾಗಿ ಮಾಡಿದ್ದೇನೆ ಎಂದು ತಮ್ಮ ಸ್ನೇಹದ ಮಹತ್ವ ಸಾರಿದ ನಿರ್ಮಾಪಕ ಶಿವಾನಂದ ಎಸ್ ನೀಲಣ್ಣನವರ ಸಿನಿಮಾ ಕುರಿತು ಮಾಹಿತಿ ಹಂಚಿಕೊಂಡರು.

ನನ್ನ ಅಪ್ಪ, ಅಣ್ಣ ಎಲ್ಲಾ ಆರ್ಮಿಯಲ್ಲಿ ಸೇವೆ ಸಲ್ಲಿಸಿದವರು. ನಾನು ಆ ಕುರಿತು ಅನೇಕ ಪರೀಕ್ಷೆ ಬರೆದಿದ್ದೇನೆ. ಮಾಡೆಲಿಂಗ್ ನಲ್ಲೂ ಆಸಕ್ತಿ. ಬ್ಯಾಂಕ್ ಉದ್ಯೋಗ ಬಿಟ್ಟು ಈಗ ಚಿತ್ರರಂಗಕ್ಕೆ ಆಗಮಿಸಿದ್ದೇನೆ. ಏನು ಇಲ್ಲದ ಕಾಲದಲ್ಲಿ ನನ್ನ ಹೀರೋ ಮಾಡುತ್ತೀನಿ ಅಂದಿದ್ದ ಗೆಳೆಯ, ಇಷ್ಟು ವರ್ಷಗಳ ನಂತರ ತನ್ನ ಬಳಿ ದುಡ್ಡು ಬಂದಾಗ, ಹೇಳಿದ ಮಾತಿನಂತೆ ನಡೆದುಕೊಂಡಿರುವುದಕ್ಕೆ ಆತನ ವ್ಯಕ್ತಿತ್ವದ ಬಗ್ಗೆ ಎಷ್ಟು ಹೇಳಿದರು ಕಡಿಮೆ. ಆತನಿಗೆ ನಾನು ಜೀವನ ಪೂರ್ತಿ ಆಭಾರಿ ಎಂದ ನಾಯಕ ಸಚಿನ್ ಧನಪಾಲ್, ಚಿತ್ರದಲ್ಲಿ ಅಭಿನಯಸಲು ಮಾಡಿಕೊಂಡಿದ್ದ ತಯಾರಿ ಬಗ್ಗೆ ತಿಳಿಸಿದರು.

ಛಾಯಾಗ್ರಾಹಕ ಸರ್ವಣನ್ ನಟರಾಜನ್ ಹಾಗೂ ಸಂಭಾಷಣೆ ಬರೆದಿರುವ ರಘು ನಿಡುವಳ್ಳಿ ತಮ್ಮ ಕಾರ್ಯದ ಬಗ್ಗೆ ಮಾತನಾಡಿದರು.

ಕ್ರೀಡಾ ಉತ್ಸಾಹಿ ಮಲೆನಾಡಿನ ಹುಡುಗನೊಬ್ಬ ಕಷ್ಟಪಟ್ಟು ನ್ಯಾಷನಲ್ ಚಾಂಪಿಯನ್ ಆಗುವುದೇ ಚಿತ್ರದ ಕಥಾಹಂದರ.

ಸಚಿನ್ ಧನಪಾಲ್ ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಅದಿತಿ ಪ್ರಭುದೇವ. ದೇವರಾಜ್, ಸುಮನ್, ಪ್ರದೀಪ್ ರಾವತ್, ಅವಿನಾಶ್, ರಂಗಾಯಣ ರಘು, ಚಿಕ್ಕಣ್ಣ, ಆದಿ ಲೋಕೇಶ್, ಅರುಣಾ ಬಾಲರಾಜ್, ಗಿರಿ, ಪ್ರಶಾಂತ್ ಸಿದ್ದಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಹೆಸರಾಂತ ನಟಿ ಸನ್ನಿಲಿಯೋನ್ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.

Tags: #Saaksha TVChampionfilmKannada
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram