ಎರಡನೇ ಬಾರಿಗೆ ಉತ್ತರ ಪ್ರದೇಶದ ಚುಕ್ಕಾಣಿ ಹಿಡಿಯಲು ಸಜ್ಜಾದ ಯೋಗಿ
ನವದೆಹಲಿ: ಎರಡನೇ ಬಾರಿಗೆ ಉತ್ತರ ಪ್ರದೇಶದ ಚುಕ್ಕಾಣಿ ಹಿಡಿಯಲು ಸಚ್ಚಾದ ಯೋಗಿ ಆದಿತ್ಯನಾಥ್ ಮಾರ್ಚ 25 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮೂಲಗಳ ಪ್ರಕಾರ ಸಮಾರಂಭವು ಮಾರ್ಚ್ 25 ರಂದು ಸಂಜೆ 4 ಗಂಟೆಗೆ ಲಕ್ನೋದ ಶಹೀದ್ ಪಥದಲ್ಲಿರುವ ಇಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸಮಾರಂಭಕ್ಕೂ ಮುನ್ನ, ಚುನಾವಣೆಯಲ್ಲಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ ಯೋಗಿ ಆದಿತ್ಯನಾಥ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗುವುದು. ಇದು ಆದಿತ್ಯನಾಥ್ ಅವರ ಸತತ ಎರಡನೇ ಅಧಿಕಾರ ಅವಧಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಎನ್ನಲಾಗುತ್ತಿದೆ.
ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳಲ್ಲದೆ, ಪಕ್ಷದ ಮುಖಂಡರು ಮತ್ತು ಪಕ್ಷದ ಪದಾಧಿಕಾರಿಗಳು ಸಹ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ, ವಿರೋಧ ಪಕ್ಷಗಳ ಉನ್ನತ ನಾಯಕರಿಗೂ ಆಹ್ವಾನಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್, ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಸೇರಿದಂತೆ ವಿರೋಧ ಪಕ್ಷಗಳ ಪ್ರಮುಖರನ್ನು ಆಹ್ವಾನಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.








