ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ
ದೊಡ್ಡಬಳ್ಳಾಪುರ : ಯಾವುದೇ ಆರೋಗ್ಯ ಸೇವೆಯನ್ನು ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಪಡೆದರೂ, ಈ ಕಾರ್ಡ್ ಹೊಂದಿರುವವರ ಬಿಲ್ ಅನ್ನು ಸರ್ಕಾರವೇ ಭರಿಸಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಯೋಜನೆಯ ಮೂಲಕ ಜನರು 5 ಲಕ್ಷ ರೂಪಾಯಿ ಮೊತ್ತದ ಆರೋಗ್ಯ ವಿಮೆಯನ್ನು ಪಡೆಯುತ್ತಿದ್ದಾರೆ. ಯಾವುದೇ ಆರೋಗ್ಯ ಸೇವೆಯನ್ನು ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಪಡೆದರೂ, ಈ ಕಾರ್ಡ್ ಹೊಂದಿರುವವರ ಬಿಲ್ ಅನ್ನು ಸರ್ಕಾರವೇ ಭರಿಸಲಿದೆ.
ಇದು ಉಚಿತ ಆರೋಗ್ಯ ಸೇವೆಯಾಗಿದ್ದು, ಒಮ್ಮೆ ಕಾರ್ಡ್ ಮಾಡಿಸಿಕೊಂಡರೆ ಜೀವನಪೂರ್ತಿ ಇರಲಿದೆ. ಪ್ರತಿಯೊಬ್ಬರು ಕೂಡ ಆರೋಗ್ಯ ಕಾರ್ಡ್ ಮಾಡಿಸಿಕೊಳ್ಳಬೇಕು.
ಯಾವುದೇ ಅಭಿವೃದ್ಧಿ ಹೊಂದಿದ ರಾಷ್ಟ್ರದಲ್ಲೂ ಉಚಿತ ಆರೋಗ್ಯ ವಿಮೆ ಇಲ್ಲ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಳೆದ 75 ವರ್ಷಗಳಲ್ಲಿ ಯಾವುದೇ ಸರ್ಕಾರ ಯೋಚನೆ ಮಾಡಿರದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ . ಜನೌಷಧ ಕೇಂದ್ರಗಳಲ್ಲಿ ಔಷಧಿಗಳ ಬೆಲೆ 40% ರಿಂದ 80% ಕಡಿಮೆಇದೆ. ಇದರಿಂದ ಬಡ ಜನರಿಗೆ ಉಪಯೋಗವಾಗುತ್ತಿದೆ ಎಂದು ಹೇಳಿದೆ.
ರೈತರಿಗೆ ನೆರವು:
ರೈತರ ಮಕ್ಕಳಿಕೆ ಸರ್ಕಾರ ವಿದ್ಯಾರ್ಥಿವೇತನ ನೀಡುತ್ತಿದೆ. ಇದಕ್ಕಾಗಿ 1000 ಕೋಟಿ ರೂ. ಮೀಸಲಿಡಲಾಗಿದೆ. ಈ ಹಿಂದೆ ಇದು ಪಿಯುಸಿ ಮತ್ತು ಉನ್ನತ ಶಿಕ್ಷಣಕ್ಕೆ ಮಾತ್ರ ಮೀಸಲಾಗಿತ್ತು. ಈಗ ಇದನ್ನು 8, 9, 10ನೇ ತರಗತಿಗಳಿಗೂ ವಿಸ್ತರಿಸಲಾಗಿದೆ. ಆಡಳಿತ, ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕಾರಣ ಮಾಡುವುದಿಲ್ಲ. ರಾಜ್ಯದ ಆರೂವರೆ ಕೋಟಿ ಜನರಿಗಾಗಿ ಸರ್ಕಾರ ಯೋಜನೆಗಳನ್ನು ರೂಪಿಸಿದೆ ಎಂದರು.
ನೀರಾವರಿ ಯೋಜನೆಗೆ ಒತ್ತು:
ದೀಪದ ಕೆಳಗೆ ಕತ್ತಲು ಅನ್ನುವಂತೆ ರಾಜಧಾನಿ ಬೆಂಗಳೂರು ಪಕ್ಕದಲ್ಲೇ ಇದ್ದರೂ, ದೊಡ್ಡಬಳ್ಳಾಪುರ ಹೆಚ್ಚು ಅಭಿವೃದ್ಧಿಯಾಗಿಲ್ಲ. ಚಿಕ್ಕಬಳ್ಳಾಪುರದಿಂದ ದೊಡ್ಡಬಳ್ಳಾಪುರಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಎತ್ತಿನ ಹೊಳೆ ಯೋಜನೆಗೆ ಸರ್ಕಾರ 3000 ಕೋಟಿ ಮೀಸಲಿಟ್ಟಿದೆ. ಶೀಘ್ರದಲ್ಲೇ ಆ ಯೋಜನೆ ಕಾರ್ಯಗತವಾಗಲಿದೆ. ಎತ್ತಿನ ಹೊಳೆ ಯೋಜನೆಗಾಗಿ ಹಲವು ಗ್ರಾಮಗಳಲ್ಲಿ 2534 ಎಕ್ರೆ ಜಮೀನು ಭೂ ಸ್ವಾಧೀನ ಪ್ರಕ್ರಿಯೆಯ ಪ್ರಿಲಿಮಿನರಿ ನೋಟಿಫಿಕೇಶನ್ ಆಗಿದೆ ಎಂದು ಹೇಳಿದರು.
ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಸ್ಪತ್ರೆ ಇಲ್ಲ. ಅಭಿವೃದ್ಧಿಯ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ರಾಜಕಾರಣ ಮತ್ತು ಅಭಿವೃದ್ಧಿಯ ವಿಚಾರ ಬೇರೆ ಬೇರೆ. ವೃಷಭಾವತಿಯಿಂದ ದೊಡ್ಡಬಳ್ಳಾಪುರಕ್ಕೆ ನೀರು ತರುವ ಯೋಜನೆ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ಅಧಿಕಾರಿಗಳು ಎಚ್ಚರಿಕೆಯಿಂದ ಮತ್ತು ಕ್ರಿಯಾಶೀಲತೆಯಿಂದ ಕೆಲಸ ಮಾಡಬೇಕು ಎಂದರು. Dr K Sudhakar | Ayushman Bharat Health Karnataka Project









