ಪ್ರಧಾನಿ ಹೊರತುಪಡಿಸಿ ಉಳಿದ ಎಲ್ಲಾ ಸಂಸತ್ತಿನ ಸಚಿವರು ರಾಜಿನಾಮೆ !!
ಶ್ರೀಲಂಕಾ : ಶ್ರೀಲಂಕಾ ಆರ್ಥಿಕತೆ ಸಂಪೂರ್ಣವಾಗಿ ಕುಸಿದಿದ್ದು, ಜನರು ಸರಕಾರದ ವಿರುದ್ಧ ಪ್ರತಿಭಟಿಸುತ್ತಿರುವ ಬೆನ್ನಲ್ಲೆ, ಭಾನುವಾರ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ಹೊರತುಪಡಿಸಿ ಉಳಿದ ಎಲ್ಲಾ ಸಂಸತ್ತಿನ ಸಚಿವರು ರಾಜಿನಾಮೆ ನೀಡಿದ್ದಾರೆ.
ದೇಶದ ಆರ್ಥಿಕತೆ ದಿವಾಳಿಯಾಗಿದ್ದು, ವಿದ್ಯುತ್, ಪೆಟ್ರೋಲ್-ಡಿಸೇಲ್, ಆಹಾರ ಮತ್ತು ದಿನನಿತ್ಯ ಬಳಕೆಯ ವಸ್ತುಗಳು ಸಿಗದೆ ಜನರು ಪರದಾಡುತ್ತಿದ್ದಾರೆ. ಇದರಿಂದ ರೋಸಿ ಹೋದ ಜನರು ಸರಕಾರದ ವಿರುದ್ಧ ಪ್ರತಿಭಟಿಸುತ್ತಿದ್ದು, ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅಧಿಕಾರದಿಂದ ಕೆಳಗಿಯಬೇಕೆಂದು ಬಿತ್ತಿಚಿತ್ರ ಹಿಡಿದು ಅವರ ಮನೆಯನ್ನು ಮುತ್ತಿಗೆ ಹಾಕಿದ್ದರು.
I have informed the sec. to the President of my resignation from all portfolios with immediate effect, in hope that it may assist HE & PMs decision to establish stability for the people & the govt of #LKA. I remain committed to my voters, my party & the people of #Hambanthota.
— Namal Rajapaksa (@RajapaksaNamal) April 3, 2022
ಈ ಸಂಬಂಧ ದೇಶದಲ್ಲಿ ತುರ್ತು ಪರೀಸ್ಥಿತಿ ಘೋಷಣೆ ಮಾಡಿದ್ದು, ಈ ನಿಯಮವನ್ನು ಉಲ್ಲಂಘಿಸಿದ 644ರನ್ನು ಪೊಲೀಸರು ಬಂಧಿಸಿದ್ದಾರೆ. ಈ ಮಧ್ಯೆ ಪ್ರಮುಖ ರಾಜಕೀಯ ಬೆಳವಣಿಗೆ ನಡೆದಿದ್ದು, ಮಹಿಂದಾ ರಾಜಪಕ್ಸೆ ಅವರು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರನ್ನು ಭೇಟಿ ಮಾಡಿದ್ದಾರೆ. ಈ ಸಭೆಯಿಂದಾಗಿ ಮಹಿಂದಾ ರಾಜಪಕ್ಸೆ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ವಂದತಿಗಳು ಕೇಳಿಬರುತ್ತಿವೆ. ಅಲ್ಲದೇ ಈ ಸಭೆಯಲ್ಲಿ ಹಲವಾರು ಪ್ರಮುಖ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಮತ್ತೊಂದೆಡೆ ಕ್ರೀಡಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಮಲ್ ರಾಜಪಕ್ಸೆ ಅವರು, ಎಲ್ಲ ಖಾತೆಗಳಿಗೆ ನನ್ನ ರಾಜೀನಾಮೆಯನ್ನು ತಕ್ಷಣವೇ ಜಾರಿಗೆ ಬರುವಂತೆ ಅಧ್ಯಕ್ಷರಿಗೆ ತಿಳಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಶ್ರೀಲಂಕಾದ ಮಾಜಿ ಸಚಿವ ವಿಮಲ್ ವೀರವಾಂಸ ಅವರು ಅಧ್ಯಕ್ಷರನ್ನು ಭೇಟಿ ಮಾಡಿ, ದೇಶದಲ್ಲಿ ಪ್ರಸ್ತುತ ಬಿಕ್ಕಟ್ಟನ್ನು ಸುಧಾರಿಸಲು ಸರ್ವಪಕ್ಷಗಳೊಂದಿಗೆ ಮಧ್ಯಂತರ ಸರ್ಕಾರವನ್ನು ನೇಮಿಸುವುದರ ಬಗ್ಗೆ ಪ್ರಸ್ತಾಪಿಸಿದರು.








