ವಿಶ್ವಸಂಸ್ಥೆ ಘೋಷಿತ ಜಾಗತಿಕ ಉಗ್ರ ಹಾಗು 26/11 ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಮೊನ್ನೆ ತಾನೆ ಶಿಕ್ಷೆಗೆ ಒಳಗಾಗಿ ಜೈಲು ಸೇರಿದ್ದ. ನಂತರ ನಡೆದ ಹೈಡ್ರಾಮ ಪರಿಣಾಮದಿಂದ ಕೂಡಲೇ ಜೈಲಿನಿಂದ ಬಿಡುಗಡೆ ಆಗುವ ಸುದ್ದಿ ತಿಳಿದುಬಂದಿದೆ. ಪಾಕ್ ನ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆ (ಎಫ್ಎಟಿಎಫ್) ತೀರ್ಪಿನ ನಂತರ ಆತನನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪಾಕಿಸ್ತಾನದ ನ್ಯಾಯಾಲಯ ಹಫೀಜ್ ಸಯೀದ್ ಗೆ ಭಯೋತ್ಪಾದನೆಗೆ ಸಂಬಂಧಿಸಿದಂತೆ ಜೈಲು ಶಿಕ್ಷೆ ವಿಧಿಸಿತ್ತು. ಎಫ್ಎಟಿಎಫ್ ಪಾಕಿಸ್ತಾನದ ವಿಷಯದಲ್ಲಿ ತೀರ್ಮಾನ ಕೈಗೊಂಡ ನಂತರ ಪಾಕ್ ನ ಭಯೋತ್ಪಾದನೆ ನಿಗ್ರಹ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಹಫೀಜ್ ಸಯೀದ್ ನ ವಕೀಲರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಹಫೀಜ್ ಸಯೀದ್ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಒಟ್ಟಿನಲ್ಲಿ ಪಾಕ್ ಸರ್ಕಾರದ ಮೇಲೆ ಪ್ರಬಲ ಹಿಡಿತವನ್ನು ಹೊಂದಿರುವ ಉಗ್ರ ಹಫೀಜ್ ಗೆ ಪಾಕ್ ನ್ಯಾಯಾಂಗ ವ್ಯವಸ್ಥೆಯಿಂಧ ಏನೂ ಮಾಡಲು ಸಾಧ್ಯವಿಲ್ಲ ಎನ್ನುವ ಚರ್ಚೆಗಳು ನಡೆಯುತ್ತಿವೆ.
ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.
ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ಶಾಂತಿಯನ್ನು ಹುಡುಕುತ್ತಾ ಅಲೆದಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಮನಸ್ಸಿನ ಶಾಂತಿ ಎಲ್ಲಿದೆ? ಒಬ್ಬ ಋಷಿ ತನ್ನ ಶಿಷ್ಯನಿಗೆ...








