ದೇಶದೆಲ್ಲೆಡೆ ಸಿಎಎ ಮತ್ತು ಎನ್.ಪಿ.ಆರ್ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಿರುವಾಗಲೇ ಬಿಜೆಪಿ ಆಡಳಿತವಿರುವ ತ್ರಿಪುರಾ ರಾಜ್ಯ ಸೈಲೆಂಟಾಗಿ ಎನ್.ಪಿ.ಆರ್ ಘೋಷಣೆ ಮಾಡಿದೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಜಾರಿಗೊಳಿಸಲು ಸಿದ್ದವಾದ ರಾಜ್ಯ ಎಂಬ ಖ್ಯಾತಿಗೆ ಪಾತ್ರವಾಗಲಿದೆ. ಇದಾಗಲೇ ತ್ರಿಪುರಾದಲ್ಲಿ ಎನ್ಪಿಆರ್ ತಯಾರಿಸಲು ಅಗತ್ಯವಾದ ದತ್ತಾಂಶವನ್ನು ಸಂಗ್ರಹಕ್ಕೆ ಸಿದ್ದತೆ ನಡೆದಿದೆ, ಮೇ 16 ರಂದು ಮೊದಲ ಹಂತದ ಕೆಲಸಗಳು ಪ್ರಾರಂಭಗೊಳ್ಳಲಿದ್ದು, ಜೂನ್ 30 ರಂದು ಮುಕ್ತಾಯಗೊಳ್ಳಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇನ್ನು ಆ್ಯಪ್ ಮೂಲಕ ಡೇಟಾವನ್ನು ಸಂಗ್ರಹಿಸಲು ರಾಜ್ಯಾದ್ಯಂತ 11,000 ಅಧಿಕಾರಿಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಈ ಅಧಿಕಾರಿಗಳು ಜನಸಂಖ್ಯಾ ಪಟ್ಟಿ & ಬಯೋಮೆಟ್ರಿಕ್ ವಿವರಗಳೊಂದಿಗೆ ಪ್ರತಿಯೊಬ್ಬರ ಡೇಟಾಬೇಸ್ ಅನ್ನು ಕಲೆಹಾಕುವ ಕೆಲಸ ಮಾಡಲಿದ್ದಾರೆ.
5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸೈಟ್ ಜಪ್ತಿ:ಮೂಲಸೌಕರ್ಯವಿಲ್ಲದೆ ಮನೆ ಕಟ್ಟಲು ಹೇಗೆ ಸಾಧ್ಯ?ಸರ್ಕಾರದ ಹೊಸ ನಿಯಮಕ್ಕೆ ಬೆಂಗಳೂರಿಗರ ತೀವ್ರ ಆಕ್ರೋಶ
ಖಾಲಿ ನಿವೇಶನಗಳನ್ನು ಹೊಂದಿರುವ ಮಾಲೀಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಐದು ವರ್ಷಗಳ ಒಳಗಾಗಿ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಸರ್ಕಾರವೇ ವಾಪಸ್ ಪಡೆಯುವುದು ಅಥವಾ...








