ದೇಶದೆಲ್ಲೆಡೆ ಸಿಎಎ ಮತ್ತು ಎನ್.ಪಿ.ಆರ್ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಿರುವಾಗಲೇ ಬಿಜೆಪಿ ಆಡಳಿತವಿರುವ ತ್ರಿಪುರಾ ರಾಜ್ಯ ಸೈಲೆಂಟಾಗಿ ಎನ್.ಪಿ.ಆರ್ ಘೋಷಣೆ ಮಾಡಿದೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಜಾರಿಗೊಳಿಸಲು ಸಿದ್ದವಾದ ರಾಜ್ಯ ಎಂಬ ಖ್ಯಾತಿಗೆ ಪಾತ್ರವಾಗಲಿದೆ. ಇದಾಗಲೇ ತ್ರಿಪುರಾದಲ್ಲಿ ಎನ್ಪಿಆರ್ ತಯಾರಿಸಲು ಅಗತ್ಯವಾದ ದತ್ತಾಂಶವನ್ನು ಸಂಗ್ರಹಕ್ಕೆ ಸಿದ್ದತೆ ನಡೆದಿದೆ, ಮೇ 16 ರಂದು ಮೊದಲ ಹಂತದ ಕೆಲಸಗಳು ಪ್ರಾರಂಭಗೊಳ್ಳಲಿದ್ದು, ಜೂನ್ 30 ರಂದು ಮುಕ್ತಾಯಗೊಳ್ಳಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇನ್ನು ಆ್ಯಪ್ ಮೂಲಕ ಡೇಟಾವನ್ನು ಸಂಗ್ರಹಿಸಲು ರಾಜ್ಯಾದ್ಯಂತ 11,000 ಅಧಿಕಾರಿಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಈ ಅಧಿಕಾರಿಗಳು ಜನಸಂಖ್ಯಾ ಪಟ್ಟಿ & ಬಯೋಮೆಟ್ರಿಕ್ ವಿವರಗಳೊಂದಿಗೆ ಪ್ರತಿಯೊಬ್ಬರ ಡೇಟಾಬೇಸ್ ಅನ್ನು ಕಲೆಹಾಕುವ ಕೆಲಸ ಮಾಡಲಿದ್ದಾರೆ.
ಚಿನ್ನಸ್ವಾಮಿ ದುರಂತಕ್ಕೆ ನಾವು ಹೊಣೆಗಾರರಲ್ಲ: ಹೈಕೋರ್ಟ್ನಲ್ಲಿ ಆರ್ಸಿಬಿ ವಾದ
ಬೆಂಗಳೂರಿನ ಎಮ್. ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದೆ. ಸ್ಟೇಡಿಯಂ...








