ಹೌದು ಕೆಲವು ಅನಿರೀಕ್ಷಿತ ಬದಲಾವಣೆಗಳಿಂದ ನಮ್ಮ ಪಕ್ಷ ನೆಲಕಚ್ಚಿದೆ ನಿಜ. ಆದರೆ ಮುಂದೆ ಮತ್ತೆ ಅಧಿಕಾರ ಹೇಗೆ ವಾಪಸ್ ಪಡೆದುಕೊಳ್ಳಬೇಕು ಎಂಬುದು ನಮಗೆ ಗೊತ್ತಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೆಗೌಡರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ನಾನು ಸೋತಿದ್ದೇನೆ ನಮ್ಮ ಪಕ್ಷವು ಸೋತಿದೆ, ಆದ ಮಾತ್ರಕ್ಕೆ ದೇವೆಗೌಡ ಮನೆಯಲ್ಲಿ ಸೈಲೆಂಟಾಗಿ ಕುಳಿತುಕೊಳ್ಳುವುದಿಲ್ಲ. ಮುಂದಿನ ಚುನಾವಣೆಗಳಲ್ಲಿ ತಳ ಮಟ್ಟದಿಂದ ಕೆಲಸ ಮಾಡಿ ಗೆಲ್ಲುತ್ತೇವೆ ಎಂದರು. ಸೋತ ಮಾತ್ರಕ್ಕೆ ನನ್ನ ಹುಮ್ಮಸ್ಸು ಕಡಿಮೆಯಾಗಿದೆ ಎಂದುಕೊಳ್ಳಬೇಡಿ, ಜೀವನ ಪೂರ್ತಿ ಹೋರಾಟ ಮಾಡಿ ಬಂದ ನನಗೆ ಪಕ್ಷವನ್ನು ತಳ ಮಟ್ಟದಿಂದ ಪಕ್ಷವನ್ನು ಕಟ್ಟಿ ಮತ್ತೆ ಅಧಿಕಾರ ಪಡೆಯುವ ಗುರಿ ಹೊಂದಿದ್ದೇನೆ ಎಂದರು.
2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ
ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...








