ಮಠಕ್ಕೆ ಅನುದಾನ ಬಿಡುಗಡೆಯಾಗಬೇಕು ಎಂದ್ರೂ ಕಮಿಷನ್ ಕೊಡಬೇಕು – ದಿಂಗಾಲೇಶ್ವರ ಸ್ವಾಮೀಜಿ
ಸರ್ಕಾರದ ವಿರುದ್ಧ ಗುತ್ತಿಗೆದಾರರು ಕಮಿಷನ್ ಆರೋಪ ಮಾಡಿದ ಬಳಿಕ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸಹ ಕಮಿಷನ್ ಬಾಂಬ್ ಸಿಡಿಸಿದ್ದಾರೆ. ಮಠಗಳಿಗೆ ನೀಡುವ ಅನುದಾನದಲ್ಲಿಯೂ ಕಮಿಷನ್ ನೀಡಬೇಕು ಎಂದು ದಿಂಗಾಲೇಶ್ವರ ಸ್ವಾಮಿಜಿ ಹೇಳಿಕೆ ನೀಡಿದ್ದಾರೆ.
ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿ ನಡೆದ ಎಸ್ ಆರ್ ಪಾಟೀಲ ನೇತೃತ್ವದಲ್ಲಿ ನಡೆದಿರುವ ಟ್ರ್ಯಾಕ್ಟರ್ ರ್ಯಾಲಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿರುವ ದಿಂಗಾಲೇಶ್ವರ ಸ್ವಾಮೀಜಿ, ಸರ್ಕಾರ ಮಠಗಳಿಗೆ ಕೊಡುವ ಅನುದಾನದಲ್ಲಿ ಶೇ. 30 ಕಮಿಷನ್ ಕೊಡಬೇಕು ಅಂತ ಹೇಳಿದ್ದಾರೆ.30 ಪರ್ಸೆಂಟೇಜ್ ಕೊಟ್ರೆ ಮಾತ್ರ ಮಠಗಳ ಕಟ್ಟಡ ಶುರು ಆಗುತ್ತವೆ ಎಂದು ಅಧಿಕಾರಿಗಳು ಬಂದು ಹೇಳುತ್ತಾರೆ.
ದೆಹಲಿ, ಬೆಂಗಳೂರಿನಂತಹ ಊರಿನಲ್ಲಿ ಐಸ್ ಕ್ರೀಂ ಬಿಡುಗಡೆಯಾದರೆ ನಮ್ಮ ಉತ್ತರ ಕರ್ನಾಟಕಕ್ಕೆ ಬರೋದು ಐಸ್ ಕ್ರೀಂ ಕಡ್ಡಿ ಮಾತ್ರ. ಎಂದು ಐಸ್ ಕ್ರೀಂ ಮುಂದಿಟ್ಟುಕೊಂಡು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ. ಪರ್ಸೆಂಟೇಜ್ ಕಟ್ ಮಾಡದೇ ಅನುದಾನ ಬಿಡುಗಡೆ ಸಾಧ್ಯವಿಲ್ಲ ಅಂತ ಅಧಿಕಾರಿಗಳು ಹೇಳ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.