ADVERTISEMENT
Thursday, May 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರ್ನಾಟಕಕ್ಕೆ ಮಿಡತೆ ಹಾವಳಿ ಸಾಧ್ಯತೆ ತೀರಾ ಕಡಿಮೆ : ರೈತರು ಗಾಬರಿಗೊಳ್ಳುವ ಅವಶ್ಯಕತೆಯಿಲ್ಲ; ಕೃಷಿ ಸಚಿವ ಬಿ.ಸಿ.ಪಾಟೀಲ್

admin by admin
May 28, 2020
in Newsbeat, Samagra karnataka, ರಾಜ್ಯ
h-vishwanath
Share on FacebookShare on TwitterShare on WhatsappShare on Telegram

ಬೆಂಗಳೂರು, ಮೇ.28 :  ಕೋಲಾರದಲ್ಲಿ ಕಂಡುಬಂದಿರುವುದು ಸಾಮಾನ್ಯ ಎಕ್ಕೆಗಿಡದ ಮಿಡತೆಯಾಗಿದ್ದು, ಲೋಕ್ಟಸ್ ಮಿಡತೆಗೂ ಇದಕ್ಕೂ ಸಂಬಂಧವಿಲ್ಲ.ಕರ್ನಾಟಕಕ್ಕೆ ಲಾಕ್ಟಸ್ ಮಿಡತೆ ಹಾವಳಿ ಸಾಧ್ಯತೆ ತೀರಾ ಕಡಿಮೆಯಿದ್ದು, ರೈತರು ಯಾವುದೇ ಕಾರಣಕ್ಕೂ ಗಾಬರಿಗೊಳ್ಳುವ ಅವಶ್ಯಕತೆಯಿಲ್ಲ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಮಧ್ಯಪ್ರದೇಶ, ಮಹಾರಾಷ್ಟ್ರ ರಾಜಸ್ಥಾನ ಸೇರಿದಂತೆ ಇತರೆ ರಾಜ್ಯಗಳಲ್ಲಿ ರೈತರನ್ನು ಬಾಧಿಸಿರುವ ಲೋಕ್ಟಸ್ ಮಿಡತೆ ಹಾವಳಿ ರಾಜ್ಯಕ್ಕೆ ಬಾಧಿಸದಂತೆ ತೆಗೆದುಕೊಳ್ಳಬಹುದಾದ ಕ್ರಮಗಳು ಮುನ್ನೆಚ್ಚರಿಕೆಗಳ ಕುರಿತು ಕೃಷಿ ಸಚಿವರಾದ ಬಿ.ಸಿ.ಪಾಟೀಲರು ವಿಕಾಸಸೌಧದಲ್ಲಿಂದು, ಕೃಷಿ ಅಧಿಕಾರಿಗಳು, ಕೃಷಿ ವಿಶ್ವವಿದ್ಯಾಲಯದ ಸಂಶೋಧಕರು ಹಾಗೂ ಕೀಟಶಾಸ್ತ್ರಜ್ಞರೊಂದಿಗೆ ಮಹತ್ವದ ಸಭೆ ನಡೆಸಿದರು.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷಿಸಚಿವರು, ಮಿಡತೆ ಗಾಳಿಯನ್ನು ಅವಲಂಬಿಸಿರುವುದರಿಂದ ಗಾಳಿಯ ದಿಕ್ಕು ಬದಲಾದಂತೆ ಮಿಡತೆಗಳು ಪಸರಿಸುವುದು ಬದಲಾಗುತ್ತದೆ. ಕೃಷಿ ತಜ್ಞರ ಪ್ರಕಾರ ಕರ್ನಾಟಕಕ್ಕೆ ಮಿಡತೆ ಹಾವಳಿ ಸಾಧ್ಯತೆ ಕಡಿಮೆಯಿದೆ. ಮೇ.26 ರಿಂದ ಎರಡು ದಿನಗಳು ಮಾತ್ರ ದಕ್ಷಿಣಾಭಿಮುಖವಾಗಿ ಗಾಳಿ ಬೀಸುತ್ತಿದ್ದು, ಎರಡು ದಿನಗಳ ಬಳಿಕ ಅಂದರೆ ಮೇ.30 ರಷ್ಟೊತ್ತಿಗೆ ಅದರ ದಿಕ್ಕು ಬದಲಾಗುವ ಸಾಧ್ಯತೆಯಿದೆ. ಹೀಗಾಗಿಮಿಡತೆಗಳು ಕರ್ನಾಟಕ ಮುಟ್ಟುವ ಸಾಧ್ಯತೆ ಕಡಿಮೆಯಿದೆ. ಬೀದರ್ ಗಡಿಯಿಂದ ಮಿಡತೆಗಳು ಸುಮಾರು 450 ಕಿ.ಮೀ.ದೂರದಲ್ಲಿರುವುದರಿಂದ ರಾಜ್ಯ ಮುಟ್ಟುವ ಸಾಧ್ಯತೆ ಬಹಳಷ್ಟು ಕಡಿಮೆ ಇದೆ ಎಂದರು.

Related posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

May 7, 2026
ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

May 7, 2026

ಗಾಳಿಯ ದಿಕ್ಕು ಬದಲಾಗಿದೆ;

ಒಂದು ವೇಳೆ ಕಾರಣಾಂತರಗಳಿಂದ ಗಾಳಿ ದಿಕ್ಕು ಬದಲಾಗದೇ ಮಿಡತೆಗಳು ಕರ್ನಾಟಕ ಮುಟ್ಟಿದಲ್ಲಿ ಯಾವ ಮುಂಜಾಗ್ರತೆ ವಹಿಸಬೇಕು ಎನ್ನುವ ಬಗ್ಗೆ ಡೆವಲಪ್ಮೆಂಟ್ ಕಮಿಷನರ್ ಅವರ ನೇತೃತ್ವದಲ್ಲಿ ಸಭೆ ನಡೆಸಿದ್ದು, ಎಸ್ ಓಪಿ(STANDARD OPERATING PROCEDURE)ಸಿದ್ಧಗೊಳಿಸಲಾಗಿದೆ. ಅದೇ ರೀತಿ ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಮುನ್ನೆಚ್ಚರಿಕೆ ನೀಡಿದ್ದು, ಅಗತ್ಯಬಿದ್ದಲ್ಲಿ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಅವಶ್ಯಕಕ್ರಮಗಳಲ್ಲಿ ಮುಖ್ಯವಾಗಿ ಮೊದಲನೆಯದಾಗಿ ರೈತರು ತಮ್ಮ ಜಮೀನುಗಳಲ್ಲಿ ಮಿಡತೆ ಬಾದೆ ಕಂಡುಬಂದಲ್ಲಿ ಶಬ್ದ ಮಾಡುವ ಮೂಲಕ ದೂರ ಓಡಿಸಬಹುದು. ಇಂತಹ ಬೆಳೆಗಳು ದುಬಾರಿ ಬೆಳೆಗಳಾಗಿದ್ದಲ್ಲಿ ಅವುಗಳ ರಕ್ಷಣೆಗೋಸ್ಕರ ಬೇವು ಆಧಾರಿತ ಕೀಟನಾಶಕಗಳನ್ನು ರೈತರೇ ಸಿಂಪಡಿಸಿಕೊಳ್ಳಬೇಕಾಗುತ್ತದೆ. ಮಿಡತೆಗಳು ಅವುಗಳ ಹಾರುವ ಕ್ರಮದಲ್ಲಿ ಸಾಮಾನ್ಯವಾಗಿ ಸಂಜೆ ವೇಳೆಗೆ ಯಾವುದಾದರೂ ಮರ ಗಿಡಗಳ ಮೇಲೆ ಕೂರುವುದು ಹೆಚ್ಚಿರುವುದರಿಂದ ಅಂತಹ ಸಂದರ್ಭಗಳಲ್ಲಿ ಇವುಗಳ ಹತೋಟಿಗಾಗಿ ಕ್ಲೋರ್ ಫೈರಿಫಾಸ್ ಅಥವಾ ಲಾಮ್ಡಾಸಿಹಲೋತ್ರಿನ್ ಔಷಧಿಗಳನ್ನು ಸರಿಯಾದ ಪ್ರಮಾಣದಲ್ಲಿ ಸಿಂಪಡಣೆ ಮಾಡುವುದು ಎಂದು ತೀರ್ಮಾನಿಸಲಾಗಿದೆ. ಇದಕ್ಕಾಗಿ ಅವಶ್ಯಕವಾದಂತಹ ಸಿಂಪಡಣಾ ವ್ಯವಸ್ಥೆಗಾಗಿ ಫೈರ್ ಇಂಜಿನ್ಸ್, ಟ್ರ್ಯಾಕ್ಟರ್ ಚಾಲಿತ ಸ್ಪ್ರೇಯರ್ ಗಳು ಹಾಗೂ ಡ್ರೋಣ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತ ಕ್ರಮವಾಗಿ ಮಹಾರಾಷ್ಟ್ರದ ಕೃಷಿ ಆಯುಕ್ತರೊಂದಿಗೆ ನಮ್ಮ ರಾಜ್ಯದ ಕೃಷಿ ಆಯುಕ್ತರು ಪ್ರತಿಗಂಟೆಗೊಮ್ಮೆ ಮಿಡತೆಗಳ ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ನಿರ್ವಹಣಾ ಕ್ರಮಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು.

ನಿರ್ವಹಣಾ ಕ್ರಮಗಳು:ಜಿಲ್ಲಾಮಟ್ಟದಲ್ಲಿ ಕೀಟನಾಶಕ ನಿರ್ವಹಣಾ ಸಮಿತಿ:

ಜಿಲ್ಲಾಮಟ್ಟದಲ್ಲಿ ಕೀಟನಾಶಕ ನಿರ್ವಹಣೆ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮಿತಿಯಿದ್ದು, ಸಮಿತಿಯಲ್ಲಿ ಜಂಟಿ ಕೃಷಿ ನಿರ್ದೇಶಕರು,ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ತೋಟಗಾರಿಕಾ ಉಪನಿರ್ದೇಶಕರು, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆಯನ್ನೊಳಗೊಂಡ ಸಮಿತಿಯಿದೆ. ಮಿಡತೆಗಳು ಹಗಲಿಗಿಂತ ರಾತ್ರಿವೇಳೆ ಹೆಚ್ಚು ಸಂಚರಿಸುವುದರಿಂದ ರಾತ್ರಿವೇಳೆ ಮರ,ಗಿಡಗಳ ಮೇಲೆ ಔಷಧಿ, ಕ್ರಿಮಿನಾಶಕ ಸಿಂಪಡಣೆ ಮಾಡಿ ನಾಶಮಾಡಬಹುದಾಗಿದೆ.
ಗಾಳಿಯ ದಿಕ್ಕು ಆಧರಿಸಿ ಲೋಕ್ಟಸ್ ಮಿಡತೆಗಳು ಚಲಿಸುವುದರಿಂದ ಇವುಗಳ ಚಲನವಲನಗಳ ಮೇಲೆ ನಿಗಾವಹಿಸಲು ಭಾರತೀಯ ಹವಾಮಾನ ಸಂಸ್ಥೆಯಿಂದ ಸತತವಾಗಿ ಗಾಳಿಯ ವೇಗ ಹಾಗೂ ದಿಕ್ಕಿನ ಮಾಹಿತಿ ಸಂಗ್ರಹಿಸಿ ಅದರಾಧರದ ಮೇಲೆ ಮುನ್ಸೂಚನೆ ನೀಡುವುದು.
ಹೋಗುತ್ತಿರುವ ದಾರಿಯಲ್ಲಿ ಹೊಗೆ ಹಚ್ಚಿಸಿ ಮಿಡತೆಗಳನ್ನು ಮಂಕಾಗಿಸಿ ಶಬ್ದಮಾಡಿ ನಾಶ ಮಾಡುವುದು.ರಾತ್ರಿ ಮರದಲ್ಲಿ ಇವು ವಿಶ್ರಮಿಸುವುದರಿಂದ ರಾಸಾಯನಿಕ ಸಿಂಪಡಣೆ ಬಳಸಿ ನಿಯಂತ್ರಿಸಬಹುದು.

ರಾಜ್ಯಮಟ್ಟದ ತಂಡ:
ಮುಂಜಾಗ್ರತಾ ಕ್ರಮವಾಗಿ ರಾಜ್ಯಮಟ್ಟದಲ್ಲಿ ಕೃಷಿ ಮತ್ತು ತೋಟಗಾರಿಕಾ ನಿರ್ದೇಶಕರು ಹಾಗೂ ಉನ್ನತಮಟ್ಟದ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿದ್ದು, ಈ ತಂಡ ಬೀದರ್, ಕೊಪ್ಪಳ, ಗುಲ್ಬರ್ಗಾ,ಯಾದಗಿರಿ ಜಿಲ್ಲೆಗಳಿಗೆ ಭೇಟಿ ನೀಡಿ ಮಿಡತೆ ನಿಯಂತ್ರಣ ಮುನ್ನೆಚ್ಚರಿಕೆ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲು ಸೂಚನೆ ನೀಡಲಾಗಿದೆ.

ರಾಜ್ಯವಿಪತ್ತು ನಿರ್ವಹಣಾ ನಿಧಿಯಲ್ಲಿ ಶೇ.25 ರಷ್ಟನ್ನು ಮಿಡತೆ ನಿರ್ವಹಣೆಗೆ ಬಳಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದರು.

ಈ ಸಂದರ್ಭದಲ್ಲಿ ತೋಟಗಾರಿಕಾ ಸಚಿವ ನಾರಾಯಣಗೌಡ ಸಹ ಉಪಸ್ಥಿತರಿದ್ದರು.

Tags: grasshopper
ShareTweetSendShare
Join us on:

Related Posts

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

ಕೋಮುವಾದಿಗಳಿಗೆ ನೋ ಎಂಟ್ರಿ: ಕಠಿಣ ಷರತ್ತಿನೊಂದಿಗೆ ಟಿವಿಕೆ ಜೊತೆ ಕೈಜೋಡಿಸಿದ ಕಾಂಗ್ರೆಸ್

by Shwetha
May 7, 2026
0

ಚೆನ್ನೈ: ತಮಿಳುನಾಡಿನ ರಾಜಕೀಯ ಚಿತ್ರಣ ಈಗ ಸಂಪೂರ್ಣವಾಗಿ ಬದಲಾಗಿದೆ. ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ ನೇತೃತ್ವದ ತಮಿಳುಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷಕ್ಕೆ ಸರ್ಕಾರ...

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

ಬಂಗಾಳದಲ್ಲಿ ಮಮತಾ ಆಡಳಿತದ ಅಂತ್ಯ ದೀದಿ ಕೃಪೆಯಲ್ಲಿದ್ದ ಅಧಿಕಾರಿಗಳಿಗೆ ಶಾಶ್ವತ ಗೇಟ್ ಪಾಸ್

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ಬಿರುಗಾಳಿ ಎದ್ದಿದೆ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಮಮತಾ ಬ್ಯಾನರ್ಜಿ ಸರ್ಕಾರದ ಪ್ರಭಾವಿ ಅಧಿಕಾರಿಗಳ ಆಟಕ್ಕೆ ಬ್ರೇಕ್ ಬಿದ್ದಿದೆ ಮಮತಾ...

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ:  ಸಮರ್ಥ್ ಶಾಮನೂರು

ಅಜ್ಜನಂತೆಯೇ ಅಜಾತಶತ್ರು ಆಗುವುದೇ ನನ್ನ ಗುರಿ, ದಾವಣಗೆರೆ ದಕ್ಷಿಣದ ಸಮಗ್ರ ಅಭಿವೃದ್ಧಿಗೆ ನಾನು ಬದ್ಧ: ಸಮರ್ಥ್ ಶಾಮನೂರು

by Shwetha
May 7, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ನನ್ನ ಮೇಲೆ ಅಪಾರ ನಂಬಿಕೆ ಇಟ್ಟು ಈ ಬಾರಿ ಐತಿಹಾಸಿಕ ಜಯ ತಂದುಕೊಟ್ಟಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡುವ ಸಾಮರ್ಥ್ಯ ನನ್ನಲ್ಲಿದೆ...

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಬಂಗಾಳದ ಮಣ್ಣಲ್ಲಿ ಅರಳಿದ ಕೇಸರಿ ಕಮಲ: ಪ್ರಧಾನಿ ಮೋದಿ ವಿಶ್ವನಾಯಕ ಎಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

by Shwetha
May 7, 2026
0

ಭಾರತದ ರಾಜಕೀಯ ನಕಾಶೆಯಲ್ಲಿ ಪಶ್ಚಿಮ ಬಂಗಾಳದ ಗೆಲುವು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಭಾರತೀಯ ಜನತಾ ಪಕ್ಷವು ಬಂಗಾಳದ ನೆಲದಲ್ಲಿ ಸಾಧಿಸಿದ ಈ ಅಸಾಧಾರಣ ವಿಜಯವು ಕೇವಲ ಭಾರತಕ್ಕೆ...

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

ಡಿಕೆಶಿಗೆ ಸಿಗುತ್ತಾ ಮುಖ್ಯಮಂತ್ರಿ ಪಟ್ಟದ ಗಿಫ್ಟ್? ಡಿಕೆ ಸುರೇಶ್ ಹೇಳಿಕೆಯ ಹಿಂದಿನ ನಿಗೂಢತೆ ಏನು?

by Shwetha
May 7, 2026
0

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಸಂಭ್ರಮಕ್ಕೆ ಈ ಬಾರಿ ದೆಹಲಿ ಹೈಕಮಾಂಡ್‌ನಿಂದ ವಿಶೇಷ ಕೊಡುಗೆ ಸಿಗುವ ಸಾಧ್ಯತೆ ಇದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram