ಹುಬ್ಬಳ್ಳಿ ಗಲಭೆ ಪ್ರಕರಣ | ಠಾಣೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ
ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆ ಸಂಬಂಧ ಬಂಧಿತನಾಗಿದ್ದ, ಆರೋಪಿ ಮೊಹಮ್ಮದ್ ಆರೀಫ್ ಜೈಲಿನಲ್ಲಯೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಹಳೆ ಹುಬ್ಬಳ್ಳಿಯ ಠಾಣೆಯಲ್ಲಿ ಈತನು ಟರ್ಪಂಟೈನ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ವರದಿಯಾಗಿದೆ. ಆರೋಪಿ ಮೊಹಮ್ಮದ್ ಆರೀಫ್ ತನ್ನ ಕಾಲಿಗೆ ಗಾಯವಾಗಿದೆ ಟರ್ಪಂಟೈನ್ ಕೊಡಿ ಎಂದು ಪೊಲೀಸರ ಬಳಿ ಕೇಳಿದ್ದ. ಹೀಗಾಗಿ ಪೊಲೀಸರು ಟರ್ಪಂಟೈನ್ ತಂದು ಕೊಟ್ಟಿದ್ದರು.
ಬಳಿಕ ಮೊಹಮ್ಮದ್ ಆರೀಫ್ ಟರ್ಪಂಟೈನ್ ನ್ನು ಕುಡಿದಿದ್ದಾನೆ. ಆರೀಫ್ ಟರ್ಪಂಟೈನ್ ಕುಡಿಯುವಾಗ ಜೊತೆಗಿದ್ದ ಇನ್ನೊಬ್ಬ ಆರೋಪಿ ಎಐಎಂಐಎಂ ಕಾರ್ಪೋರೇಟರ್ ನಜೀರ್ ಅಹಮದ್ ಹೊನ್ಯಾಳ್ ಆರೋಫ್ ನನ್ನು ತಡೆದಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿದ್ದಾನೆ. ಕೂಡಲೇ ಮೊಹಮ್ಮದ್ ಆರೀಫ್ ನನ್ನು ಕಿಮ್ಸ್ ಆಸ್ಪತ್ರಗೆ ದಾಖಲು ಮಾಡಲಾಗಿದೆ.
ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ 100ಕ್ಕೂಅಧಿಕ ಜನರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ 10-12 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹಾಗೇ ಪ್ರಕರಣದ ಪ್ರಮುಖ ಆರೋಪಿ ಮೌಲ್ವಿ ವಾಸೀಂ ಪಠಾಣ್ ಈಗಾಗಲೇ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಗಲಭೆಯನ್ನು ಸೃಷ್ಟಿಸುವ ಉದ್ದೇಶವಿರಲಿಲ್ಲ ಎಂದಿದ್ದಾನೆ.
ಹಾಗೇ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕು ಎಂದು ನಾನು ಕರೆಕೊಟ್ಟಿದ್ದೆ. ಹೆಚ್ಚಿನ ಜನರನ್ನು ಸೇರಿಸಿ ಪ್ರತಿಭಟನೆ ಮಾಡುವ ಉದ್ದೇಶ ನನ್ನದಾಗಿತ್ತು. ಆದರೆ ಅನೇಕರು ಬರುವಾಗ ಕಲ್ಲು ಹಿಡಿದುಕೊಂಡೆ ಬಂದಿದ್ದರು. ನನಗೆ ಅದು ಅನಿರೀಕ್ಷಿತವಾಗೇ ಇತ್ತು ಹೇಳಿಕೆ ಕೊಟ್ಟಿದ್ದಾನೆ.