ಕರೋನಾ ಲಸಿಕೆ ಹಾಕಿಸಿಕೊಳ್ಳುವಂತೆ ವ್ಯಕ್ತಿಗೆ ಒತ್ತಾಯಿಸುವಂತಿಲ್ಲ – ಸುಪ್ರೀಂ ಕೋರ್ಟ್
ಯಾವುದೇ ವ್ಯಕ್ತಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಒತ್ತಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯ ಪಟ್ಟಿದೆ. ಆರ್ಟಿಕಲ್ 21 ರ ಅಡಿಯಲ್ಲಿ ಅನುಮತಿಯಿಲ್ಲದೆ, ವ್ಯಕ್ತಿಯ ದೈಹಿಕ ಸಮಗ್ರತೆಯನ್ನು ಉಲ್ಲಂಘಿಸಲಾಗುವುದಿಲ್ಲ ಎಂಬುದನ್ನ ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್ ಮತ್ತು ಬಿಆರ್ ಗವಾಯಿ ಅವರ ಪೀಠ ಗಮನಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಲಸಿಕೆ ಹಾಕಿಸಿಕೊಳ್ಳದೇ ಇರುವವರನ್ನ ನಿಷೇಧಿಸುವ ಕೆಲವು ರಾಜ್ಯ ಸರ್ಕಾರಗಳ ನಿಯಮಗಳು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದಲ್ಲದೆ, ಕೋವಿಡ್-19 ವ್ಯಾಕ್ಸಿನೇಷನ್ನ ದುಷ್ಪರಿಣಾಮಗಳ ಕುರಿತು ಮಾಹಿತಿಯನ್ನ ಸಾರ್ವಜನಿಕಗೊಳಿಸುವಂತೆ ಸುಪ್ರೀಂ ಕೇಂದ್ರಕ್ಕೆ ನಿರ್ದೇಶನ ನೀಡಿದೆ.
ಜನವರಿ 17, 2022 ರಂದು, ಕರೋನಾ ವ್ಯಾಕ್ಸಿನೇಷನ್ ಕುರಿತು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿತ್ತು. ದೇಶಾದ್ಯಂತ ಕರೋನಾ ಲಸಿಕೆ ಕಡ್ಡಾಯವಲ್ಲ ಅಥವಾ ಲಸಿಕೆ ಪಡೆಯಲು ಯಾರ ಮೇಲೂ ಯಾವುದೇ ಒತ್ತಡವಿಲ್ಲ ಎಂದು ಕೇಂದ್ರವು ತನ್ನ ಅಫಿಡವಿಟ್ನಲ್ಲಿ ತಿಳಿಸಿದೆ.
ದೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ಜನರು ಕೊರೊನಾದಿಂದ ಸಾವು
ಇಲ್ಲಿಯವರೆಗೆ, ದೇಶದಲ್ಲಿ ಒಟ್ಟು 43 ಮಿಲಿಯನ್ ಜನರು ಕರೋನಾ ಸೋಂಕಿಗೆ ಒಳಗಾಗಿದ್ದರೆ, 5.2 ಲಕ್ಷ ಜನರು ಸಾವನ್ನಪ್ಪಿದ್ದಾರೆ. ಆರೋಗ್ಯ ಸಚಿವಾಲಯದ ಪ್ರಕಾರ, ದೇಶದಲ್ಲಿ 4.2 ಕೋಟಿ ಜನರು ಕರೋನಾದಿಂದ ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ 3,157 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.








