ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾ ಪ್ರತಿಷ್ಠಿತ ಜೀ5ಗೆ ಒಟಿಟಿಯಲ್ಲಿ ಸ್ಟ್ರೀಮ್ ಆಗಲು ಸಜ್ಜಾಗಿದೆ. ಕಾಶ್ಮೀರ ಪಂಡಿತರ ಮೇಲಾದ ದೌರ್ಜನ್ಯ, ನಿರಾಶ್ರಿತರ ಹತ್ಯೆ ಕುರಿತು ತಯಾರಿಸಿದ್ದ ಈ ಸಿನಿಮಾ ಬಾಕ್ಸಾಫೀಸ್ನ್ನು ಕೊಳ್ಳೆ ಹೊಡೆದಿತ್ತು.
ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರು, ಸೆಲೆಬ್ರಿಟಿಗಳು, ಜನಸಾಮಾನ್ಯರು ಸಿನಿಮಾ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಎಲ್ಲೆಡೆಯಿಂದ ಪ್ರಶಂಶೆಯ ಸುರಿಮಳೆ ಬಂದಿದೆ.. ಇದೀಗ ದೆಹಲಿ ಫೈಲ್ಸ್ ಸಿನಿಮಾವನ್ನ ಕೈಗೆತ್ತುಕೊಂಡಿದ್ಧಾರೆ. ಆದ್ರೆ ಈ ಸಿನಿಮಾವನ್ನ ಸಿಂಗಾಪುರದಲ್ಲಿ ಬ್ಯಾನ್ ಮಾಡಲಾಗಿದ್ದು ನಿರ್ದೇಶಕರು ಅಸಮಾಧಾನ ಹೊರಹಾಕಿದ್ದಾರೆ..








