ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರು ಬ್ರ್ಯಾಂಡ್ ಗೆ ದಕ್ಕೆ- ಸಿಎಂಗೆ ಪತ್ರ ಬರೆದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ 

Naveen Kumar B C by Naveen Kumar B C
May 19, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಬೆಂಗಳೂರು ಬ್ರ್ಯಾಂಡ್ ಗೆ ದಕ್ಕೆ- ಸಿಎಂಗೆ ಪತ್ರ ಬರೆದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ

ಬೆಂಗಳೂರಿನ ಹಲವೆಡೆ ಸುರಿದ ಭಾರಿ ಮಳಯಿಂದಾಗಿ ಬೆಂಗಳೂರಿನ ಬ್ರ್ಯಾಂಡ್ ಗೆ ದಕ್ಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಎಸ್.ಎಂ. ಕೃಷ್ಣ  ಪತ್ರ ಬರೆದಿದ್ದು ಬೆಂಗಳೂರಿಗೆ ಇರುವ  ಇಮೇಜ್ ಉಳಿಸಿಕೊಳ್ಳುವ ಕುರಿತು ಕೆಲವು ಸಲಹೆಗಳನ್ನು ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರಂತರ ಮುಂಗಾರ ಪೂರ್ವ ಮಳೆಯಗುತ್ತಿದ್ದು ಇದರಿಂದ ಹಲವು ಅವಾಂತರಗಳ‌ು ಘಟಿಸಿ‌ ಜನಜೀವನಕ್ಕೆ ತೀವ್ರ ತೊಂದರೆಯನ್ನು ಉಂಟುಮಾಡಿದೆ. ಅದರಲ್ಲೂ ವಿಶ್ವದಲ್ಲಿನ ವೇಗದ ಬೆಳವಣಿಗೆಗಳ ನಗರಗಳ‌ ಸಾಲಿನಲ್ಲಿ ಮುಂಚೂಣಿಯಲ್ಲಿ ಇರುವ ಬೆಂಗಳೂರು ನಗರದಲ್ಲಿನ ಮಳೆ ಅನಾಹುತಗಳು ಆತಂಕ ಹುಟ್ಟಿಸಿದೆ. ಇದು ‘ಬ್ರಾಂಡ್ ಬೆಂಗಳೂರು’ ಹೆಸರಿಗೆ ಆತಂಕ ಸೃಷ್ಟಿಸಿದ್ದು, ಭವಿಷ್ಯತ್ತಿನಲ್ಲಿ ಇದರಿಂದ ಕೈಗಾರಿಕೆಗಳ ಸ್ತಾಪನೆ‌ ಮತ್ತು ರಾಜ್ಯಕ್ಕೆ ಬಂಡವಾಳ ಹೂಡುವ ಹೂಡಿಕೆದಾರರಿಗೆ ತಪ್ಪು ಸಂದೇಶ ರವಾನೆಯಾಗಲಿದೆ. ಅದರಿಂದ ಇಲ್ಲಿ ಪ್ರತಿಷ್ಟಾಪನೆಗೊಳ್ಳಬಹುದಾದ ಕೈಗಾರಿಕಾ ವಸಹಾತುಗಳು ಬೇರೆ ರಾಜ್ಯಗಳ ಪಾಲಗಿ ನಮ್ಮ ರಾಜ್ಯದ ಅಭಿವೃದ್ಧಿಗೆ ತೊಡಕಾಗಲಿದೆ ಎಂದು ಎಸ್.ಎಂ. ಕೃಷ್ಣ ಅವರು ಪತ್ರದಲ್ಲಿ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

Related posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026
ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

August 6, 2026

ನಾನು ಮುಖ್ಯಮಂತ್ರಿಯಾಗಿದ್ದಾಗ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಆದ್ಯತೆ ನೀಡಿ ವಿಪುಲ ಅವಕಾಶಗಳನ್ನು ನೀಡಿದ್ದರಿಂದ ಅಮೆರಿಕದ ಕ್ಯಾಲಿಫೋರ್ನಿಯಾ ನಗರದ ಸಿಲಿಕಾನ್ ವ್ಯಾಲಿಗೆ ಪರ್ಯಾಯವಾಗಿ ಬೆಂಗಳೂರು ನಗರ ಬೆಳೆದು ಯುವ ಜನಾಂಗಕ್ಕೆ ಲಕ್ಷಾಂತರ ಉದ್ಯೋಗ ಸೃಷ್ಟಿಗೆ ಕಾರಣವಾಯಿತು. ಇದರ ಪರಿಣಾಮವಾಗಿ ಬೆಂಗಳೂರು ಇಂದು ಬೃಹದಾಕಾರವಾಗಿ ಬೆಳೆದು ನಗರದ ವಿಸ್ತೀರ್ಣ ನಾಲ್ಕು ಪಟ್ಟು ಹೆಚ್ಚಾಗಿದೆ. ಬೆಂಗಳೂರು ನಗರ ಪಾಲಿಕೆ ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಾಗಿ ಬದಲಾಗಿ ಬೆಂಗಳೂರು ಸುತ್ತಮುತ್ತಲಿನ ಹಲವು ಬಡಾವಣೆಗಳನ್ನು ತನ್ನ ಒಡಲಲ್ಲಿ ಸೇರಿಸಿಕೊಂಡಿದೆ. ಇದರಿಂದ ಬೆಂಗಳೂರಿನ ಆದಾಯ ನಿರೀಕ್ಷೆಗೂ ಮೀರಿ  ಹೆಚ್ಚಾಗಿ ಅದು ಇಂದು ರಾಜ್ಯದ ಬಜೆಟ್ ಗಾತ್ರದಲ್ಲಿ ಅರ್ಧದಷ್ಟು ಭಾಗ ಬೆಂಗಳೂರು ನಗರದಿಂದ ಹರಿದು ಬರುವಂತಾಗಿದೆ.

ಭವಿಷ್ಯದ ಬೆಂಗಳೂರು ಹಾಗೂ ರಾಜ್ಯದ ಅಭಿವೃದ್ಧಿ ಗಮನದಲ್ಲಿ ಇಟ್ಟಕೊಂಡು ದೂರಗಾಮಿ ದೃಷ್ಟಿಯಿಂದ ಶಾಶ್ವತ ಕಾರ್ಯ ಕ್ರಮಗಳನ್ನು ರೂಪಿಸಿ “ಬ್ರಾಂಡ್ ಬೆಂಗಳೂರು” ಹೆಸರನ್ನು ಉಳಿಸಿಕೊಳ್ಳಲು ದಿಟ್ಟ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯವಾಗಿದ್ದು, ಆ ನಿಟ್ಟಿನಲ್ಲಿ ಕೆಳಕಂಡ ಸಲಹೆಗಳನ್ನು ತಮ್ಮ ಅವಗಾಹನೆಗೆ ತರಬಯಸುತ್ತೆನೆ.

  1. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಅಭಿವೃದ್ಧಿಗೆ ರಚಿಸಿದ್ದ ಬೆಂಗಳೂರು ಅಜೆಂಡಾ ಟಾಸ್ಕ್ ಫೋರ್ಸ್ ಸಮಿತಿಯನ್ನು ಪುನರ್ ರಚಿಸಿ ವಿವಿಧ ವಿಭಾಗಗಳ ತಜ್ಞರನ್ನು ಸೇರಿಸಿ ಅವರ ಸಲಹೆಗಳನ್ನು ಪಡೆದು ದೂರಗಾಮಿ ನೆಲೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಗೆ ನೀಲಿನಕ್ಷೆ ತಯಾರಿಸುವುದು.
  2. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಸುಧಾರಿಸಿ ಹೊಸದಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ತಜ್ಞ ಅಧಿಕಾರಿಗಳ ತಂಡ ರಚಿಸುವುದು ಹಾಗೂ ರಾಜಕಾಲುವೆಗಳ ನಿರ್ವಾಹಣೆಗೆ ಆದ್ಯತೆ ಮೇಲೆ ಕ್ರಮ ವಹಿಸಿ ಮುಂಗಾರ ಮಳೆಯ ಆಗಮನಕ್ಕೂ ಮುನ್ನ ಸಮರೋಪದಿಯ ಕಾರ್ಯ ಕೈಗೊಳ್ಳುವುದು.
  3. ಬೆಂಗಳೂರಿಗೆ ಪರ್ಯಾಯವಾಗಿ ಮೈಸೂರು, ತುಮಕೂರು ಮತ್ತು ಹುಬ್ಬಳ್ಳಿಯಂತಹ ನಗರಗಳನ್ನು ಗುರುತಿಸಿ ನೂತನ ಕೈಗಾರಿಕಾ ವಸಹಾತುಗಳ‌ ಸ್ಥಾಪನೆಗೆ ಅವಕಾಶ ಕಲ್ಪಿಸಿ ಬೆಂಗಳೂರಿ ನಗರದ ಮೇಲಿನ ಒತ್ತಡ ಕಡಿಮೆ ಮಾಡುವುದು. ನನ್ನ ಅಧಿಕಾರಾವಧಿಯಲ್ಲಿ ನಿರ್ಮಾಣಗೊಂಡಿದ್ದ ಮೈಸೂರು ಬೆಂಗಳೂರು ಹೆದ್ದಾರಿ ಇಂದು ಹತ್ತು ಪಥಗಳ ರಾಷ್ಟ್ರೀಯ ಹೆದ್ದಾರಿಯಾಗಿ‌ ಮೇಲ್ದರ್ಜೆಗೆ ಏರಿದ್ದು ಇದು ಮೈಸೂರು ನಗರ ಬೆಂಗಳೂರಿಗೆ ಪರ್ಯಾಯವಾಗಿ ಬೆಳವಣಿಗೆ ಹೊಂದಲು ಬಹಳ ಅವಕಾಶ ಕಲ್ಪಿಸುತ್ತದೆ.
  4. ಬೆಂಗಳೂರು ವ್ಯಾಪ್ತಿಯ ಶಾಸಕರು ಸಂಸದರು ಹಾಗೂ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ವಲಯವಾರು ಸಮಸ್ಯೆಗಳನ್ನು ಪತ್ತೆ ಹಚ್ಚಿ ಅವುಗಳ ಶಾಶ್ವತ ಪರಿಹಾರಕ್ಕೆ ಕಾಲ ಮೀತಿಯಲ್ಲಿ ಕಾರ್ಯಕ್ರಮ  ರೂಪಿಸಿ ಅದಕ್ಕೆ ತಕ್ಕ ಅನುದಾನ ಒದಗಿಸುವುದು.

ಮೇಲ್ಕಂಡ ಅಂಶಗಳ ಜೊತೆಗೆ ರಾಜ್ಯದ ಸರ್ವಪಕ್ಷಗಳ ನಾಯಕರ ಸಲಹೆ ಪಡೆದು ರಾಜ್ಯದ ಅಭಿವೃದ್ಧಿ ಮತ್ತು ಭವಿಷ್ಯದ ಜನಾಂಗದ ದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಲು ಕೋರಿದೆ.

ಎಸ್.ಎಂ. ಕೃಷ್ಣ
ಮಾಜಿ ಮುಖ್ಯಮಂತ್ರಿಗಳು

Tags: #SM KrishnaBasavaraj BommaiChief Minister
ShareTweetSendShare
Join us on:

Related Posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

by Shwetha
August 6, 2026
0

ಭಾರತ ಸರ್ಕಾರವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (FCRA) ತರಲು ಉದ್ದೇಶಿಸಿರುವ ನೂತನ ತಿದ್ದುಪಡಿ ಮಸೂದೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಸೂದೆಯನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram