ಕಿತ್ತಳೆ ಮಾರಿ ಸರಕಾರಿ ಶಾಲೆಯ ಏಳಿಗೆಗಾಗಿ ಶ್ರಮಿಸಿದ ಅಕ್ಷರಸಂತ, ಈ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಹರೇಕಳ ಹಾಜಬ್ಬ ಅವರನ್ನು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೌರವಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್, ಹಾಜಬ್ಬ ಕಟ್ಟಿಸಿದ ಸರಕಾರಿ ಶಾಲೆಗೆ ಭೇಟಿ ನೀಡಿ, ಎಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುವ ಮೂಲಕ ಹಾಜಬ್ಬರ ಕನಸನ್ನು ನನಸು ಮಾಡಬೇಕು ಎಂದರು.
ಅಕ್ಷರ ಸಂತ ಹಾಜಬ್ಬರನ್ನು ಭೇಟಿ ಮಾಡಿ ಸಂತೋಷ ವ್ಯಕ್ತಪಡಿಸಿದ ಸಚಿವರು, ಕಿತ್ತಳೆ ಮಾರಿ ಬಂದ ಆದಾಯದಲ್ಲಿ ಸರಕಾರಿ ಶಾಲೆಯ ಏಳಿಗೆಗಾಗಿ ಶ್ರಮಿಸಿರುವ ಹಾಜಬ್ಬರಂತಹ ಸಾಧಕರಿಗೆ, ಚಾ ಮಾರಿ ಜೀವನ ಸಾಗಿಸಿ ಪ್ರಧಾನಿ ಪದವಿಗೇರಿದ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಪದ್ಮಶ್ರೀ ಸಿಕ್ಕಿರುವುದು ಅತ್ಯಂತ ಸಂತೋಷದ ವಿಷಯ ಎಂದರು.
ಸರಕಾರದ ಪರವಾಗಿ ಹಾಜಬ್ಬ ಅವರನ್ನು ಸಚಿವರು ಗೌರವಿಸಿದರೆ, ಅದಕ್ಕೆ ಪ್ರತಿಯಾಗಿ ಹಾಜಬ್ಬ ಅವರು ಸಚಿವರನ್ನು ಸನ್ಮಾನಿಸಿದರು.
ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು
ಕರ್ನಾಟಕ ರಾಜ್ಯದ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ಚೇತರಿಸಿಕೊಳ್ಳಲಾಗದಂತಹ ಕಹಿ ಸುದ್ದಿ ನೀಡಿದೆ. ಮುಂಬರುವ ಮೇ 1 ರಿಂದ ರಾಜ್ಯಾದ್ಯಂತ ಹೊಸ ಅಬಕಾರಿ ನೀತಿಯು ಜಾರಿಗೆ ಬರಲಿದ್ದು ಇದರ...








