ಕಾರ್ ಮತ್ತು ಟಿಟಿ ನಡುವೆ ಅಫಘಾತ, ಇಬ್ಬರ ಸಾವು, 3 ಮಂದಿ ಗಂಭೀರ….
ಕಾರ್ ಮತ್ತು ಟಿಟಿ ವಾಹನದ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಬಳಿ ಸಂಭವಿಸಿದೆ.
ಬೇಗೂರು ಬ್ರಿಡ್ಜ್ ಬಳಿ ಬೆಂಗಳೂರಿನಿಂದ ಹಾಸನ ಕಡೆಗೆ ಬರ್ತಿದ್ದ ಇನೋವಾ ಕಾರ್, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ, ಹಾಸನದಿಂದ ಎದುರು ಬರ್ತಿದ್ದ ಟಿಟಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಿಟಿ ವಾಹನದಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಇದರ ಜೊತೆಗೆ ಬುಲೆಟ್ ಬೈಕ್ಗೂ ಟಿಟಿ ವಾಹನ ಅಪ್ಪಳಿಸಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ.
ಮೃತರ ಪೈಕಿ ಒಬ್ಬರನ್ನ ಬೆಂಗೂರಿನ ಸುನಿಲ್ ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣವನ್ನ ದಾಖಲಿಸಿದ್ದಾರೆ.








