SA vs IND | “ಪಂತ್ ಕಳಪೆ ಕ್ಯಾಪ್ಟನ್ಸಿ”ಯನ್ನ ಎತ್ತಿ ಹಿಡಿದ ಪಾಕ್ ಕ್ರಿಕೆಟಿಗ
ಇಂಡೋ – ಆಫ್ರಿಕಾ ನಡುವೆ ಮೊದಲ ಟಿ 20 ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋಲು ಕಂಡಿದೆ. ಐದು ಪಂದ್ಯಗಳ ಟಿ 20 ಸರಣಿಯ ಭಾಗವಾಗಿ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ದಾಖಲೆ ರನ್ ಗುರಿ ಬೆನ್ನತ್ತಿ ಜಯ ಸಾಧಿಸಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 211 ರನ್ ಗಳಿಸಿತ್ತು. ಆದ್ರೆ ಈ ಮೊತ್ತವನ್ನು ಉಳಿಸಿಕೊಳ್ಳಲು ಭಾರತದ ಬೌಲರ್ ಗಳು ವಿಫಲರಾದರು.
ಪರಿಣಾಮ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಏಳು ವಿಕೆಟ್ ಗಳಿಂದ ಸೋಲು ಕಂಡಿದೆ. ಅಲ್ಲದೇ ಐದು ಪಂದ್ಯಗಳ ಟಿ 20 ಸರಣಿಯಲ್ಲಿ 1-0 ಅಂತರದಲ್ಲಿ ಹಿನ್ನಡೆ ಅನುಭವಿಸಿದೆ.
ಇದಲ್ಲದೇ ಮೊದಲ ಬಾರಿಗೆ ಟೀಂ ಇಂಡಿಯಾವನ್ನು ಮುನ್ನಡೆಸಿದ ಪಂತ್ ಚೊಚ್ಚಲ ಪ್ರಯತ್ನದಲ್ಲಿಯೇ ಸಂಪೂರ್ಣವಾಗಿ ವಿಫಲರಾಗಿದ್ದಾರೆ.
ಈ ಬಗ್ಗೆ ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನೀಶ್ ಕನೇರಿಯಾ ಪ್ರತಿಕ್ರಿಯೆ ನೀಡಿದ್ದು, ಪಂತ್ ಅವರ ಕಳಪೆ ನಾಯಕತ್ವವನ್ನು ಎತ್ತಿ ತೋರಿಸಿದ್ದಾರೆ.
ಟೀಂ ಇಂಡಿಯಾ 211 ಬೃಹತ್ ಮೊತ್ತ ದಾಖಲಿಸಿದ್ದರೂ ಅದನ್ನ ಡಿಫೆಂಡ್ ಮಾಡಿಕೊಳ್ಳುವಲ್ಲಿ ನಾಯಕತ್ವದ ಕೊರತೆ ಎದ್ದು ಕಂಡಿತು. ರಿಷಬ್ ಪಂತ್ ಬೌಲರ್ ಗಳನ್ನು ಕಳಪೆಯಾಗಿ ಉಪಯೋಗಿಸಿದರು.

ಲೆಗ್ ಸ್ಪಿನ್ನರ್ ಯುಜುವೇಂದ್ರ ಚಹಾಲ್ ಅವರಿಗೆ ಪವರ್ ಪ್ಲೇ ನಲ್ಲಿ ಬೌಲಿಂಗ್ ಮಾಡಲು ಅವಕಾಶ ನೀಡಬೇಕಾಗಿತ್ತು. ಅಕ್ಷರ್ ಪಟೇಲ್ ಉತ್ತಮ ಆಯ್ಕೆಯಾಗಿತ್ತು.
ವೇಗದ ಬೌಲರ್ ಓವರ್ ಗಳ ಸರದಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಕೇವಲ ಒಂದು ಓವರ್ ನೀಡಿದ್ದು, ಅಚ್ಚರಿಯನ್ನುಂಟು ಮಾಡಿದೆ. ಕ್ರೀಸ್ ನಲ್ಲಿ ಡೇವಿಡ್ ಮಿಲ್ಲರ್ ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದರು.
ಇಂತಹ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯಗೆ ಕೇವಲ ಒಂದು ಔವರ್ ನೀಡಿದ್ದು ಯಾಕೆ ಎಂಬುದನ್ನ ನನಗೆ ಅರ್ಥವಾಗುತ್ತಿಲ್ಲ ಎಂದು ದಾನೀಶ್ ಕನೇರಿಯಾ ತಿಳಿಸಿದ್ದಾರೆ.
ಅಂದಹಾಗೆ ದಕ್ಷಿಣ ಆಫ್ರಿಕಾ ವಿರುದ್ಧ ಟಿ 20 ಸರಣಿಗಾಗಿ ಟೀಂ ಇಂಡಿಯಾ ತಂಡಕ್ಕೆ ಕನ್ನಡಿಗ ಕೆ.ಎಲ್.ರಾಹುಲ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು.
ಆದ್ರೆ ಪ್ರಾಕ್ಟೀಸ್ ಮಾಡುವ ವೇಳೆ ಕೆ.ಎಲ್.ರಾಹುಲ್ ಅವರಿಗೆ ಇಂಜೂರಿಯಾದ ಕಾರಣ ಸರಣಿಯಿಂದ ಹೊರಗುಳಿದರು. ಪರಿಣಾಮ ವೈಸ್ ಕ್ಯಾಪ್ಟನ್ ಆಗಿದ್ದ ರಿಷಬ್ ಪಂತ್ ಗೆ ನಾಯಕತ್ವ ವಹಿಸಲಾಗಿದೆ. ಆದ್ರೆ ಮೊದಲ ಪಂದ್ಯದಲ್ಲಿ ಪಂತ್ ನಿರಾಸೆ ಮೂಡಿಸಿದ್ದಾರೆ.
ಹೀಗಾಗಿ ಕಟಕ್ ನಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಕಮ್ ಬ್ಯಾಕ್ ಮಾಡುವ ನಿರೀಕ್ಷೆ ಇದೆ. ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ನಲ್ಲಿ ಒಂದು ಬದಲಾವಣೆ ಮಾಡುವ ಸಾಧ್ಯತೆಗಳಿವೆ.








