BSY | 140 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ
ತುಮಕೂರು : ನಮ್ಮ ಉದ್ದೇಶ 140 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮತ್ತೊಮ್ಮೆ ಬಿಜೆಪಿಯನ್ನ ಅಧಿಕಾರಕ್ಕೆ ತರಬೇಕು. ಈ ಹಿನ್ನೆಲೆಯಲ್ಲಿ ರಾಜ್ಯದ ಉದ್ದಗಲಕ್ಕೂ ಈಗಾಗಲೇ ಪ್ರವಾಸ ಆರಂಭ ಮಾಡಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಮುಂಬರುವ ಚುನಾವಣೆಗೆ ಸಿದ್ದತೆ ಮಾಡಲಾಗ್ತಿದೆ.
ನಮ್ಮ ಉದ್ದೇಶ 140 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮತ್ತೊಮ್ಮೆ ಬಿಜೆಪಿಯನ್ನ ಅಧಿಕಾರಕ್ಕೆ ತರಬೇಕು. ಈ ಹಿನ್ನೆಲೆಯಲ್ಲಿ ರಾಜ್ಯದ ಉದ್ದಗಲಕ್ಕೂ ಈಗಾಗಲೇ ಪ್ರವಾಸ ಆರಂಭ ಮಾಡಿದ್ದೇವೆ.
ಜಿಲ್ಲೆಗಳಿಗೆ ಹೋಗಿ ಕಾರ್ಯಕರ್ತರ ಜೊತೆ ಕುಳಿತು ಮಾತನಾಡಿ, ಎಲ್ಲಾ ವರ್ಗದ ಜನರನ್ನ ತಮ್ಮಜೊತೆ ತೆಗೆದುಕೊಂಡು ಹೋಗುವ ಪ್ರಾಮಾಣಿಕ ಪ್ರಯತವನ್ನ ಮಾಡ್ತೇವೆ. ಅನೇಕ ಜನ ಬಿಜೆಪಿ ಪಕ್ಷಕ್ಕೆ ಬರೋಕೆ ತುದಿಗಾಲಲ್ಲಿ ನಿಂತಿದ್ದಾರೆ.
ಪಕ್ಷವನ್ನ ಬಲಪಡಿಸುವಂತ ಪ್ರಾಮಾಣಿಕ ಕೆಲಸವನ್ನ ಮಾಡ್ತೇವೆ. ಅನೇಕ ಜನ ಬಿಜೆಪಿಗೆ ಬರ್ತಾ ಇದ್ದಾರೆ. ಪಕ್ಷಕ್ಕೆ ಬರೋರನ್ನ ಯಾರು ಬೇಡ ಅಂತ ಹೇಳಲ್ಲ.

ಬರೋರಿಗೆ ಯಾರಿಗೆ ಏನ್ ಜವಾಬ್ದಾರಿ ಕೊಡ್ಬೇಕು ಅಂತ ಪಕ್ಷದ ಮುಖಂಡರು ತೀರ್ಮಾನ ಮಾಡ್ತಾರೆ. ಪಕ್ಷಕ್ಕೆ ಬರೋದನ್ನ ಆಲ್ ರೆಡಿ ಶುರು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ರಾಹುಲ್ ಗಾಂಧಿ ವಿಚಾರಣೆ ವಿಚಾರವಾಗಿ ಮಾತನಾಡಿದ ಬಿಎಸ್ ವೈ, ನನಗೂ ಅದಕ್ಕು ಸಂಬಂಧ ಇಲ್ಲ. ಇಡಿ ಅವರು ಯಾರ್ ಬಗ್ಗೆ ಏನ್ ಅನುಮಾನ ಇರುತ್ತೆ ಅವರನ್ನ ತನಿಖೆ ಮಾಡ್ತಾರೆ.
ಸತ್ಯಾಸತ್ಯಾಯತೆ ಹೊರಬರುತ್ತೆ. ನಿರಾಪರಾಧಿಯಾದ್ರೆ ಅವರು ಯಾವುದೇ ಗೊಂದಲ ಇಲ್ಲದೇ ವಾಪಸ್ ಬರ್ತಾರೆ. ಅಪರಾಧಿಗಳಾದ್ರೆ ಸಹಜವಾಗಿ ಯಾರಿಗೆ ಯಾವ ರೀತಿಯಾಗಿ ಶಿಕ್ಷೆ ಆಗ್ಬೇಕು ಆ ರೀತಿಯಾಗಿ ಶಿಕ್ಷೆ ಆಗುತ್ತೆ.
ಕಾನೂನಿನಲ್ಲಿ ರಾಹುಲ್ ಗಾಂಧಿ,ಯಡಿಯೂರಪ್ಪ ಬೇರೆ ಮತ್ತೊಬ್ಬರು ಬೇರೆ ಪ್ರಶ್ನೆಯೇ ಇಲ್ಲ. ಇಡಿ ಅವರು ತನಿಖೆ ಮಾಡ್ತಿದ್ದಾರೆ ಕಾದು ನೋಡೋಣ ಎಂದಿದ್ದಾರೆ.








