ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಐಪಿಎಲ್ ನೇರ ಪ್ರಸಾರ ಹಕ್ಕು ಮಾರಾಟ – ಬಿಸಿಸಿಐ ಬೊಕ್ಕಸ ತುಂಬುತ್ತೆ… ಆದ್ರೆ ಜನ ಸಾಮಾನ್ಯರ ಜೇಬಿಗೆ ಕತ್ತರಿ..!

Mahesh M Dhandu by Mahesh M Dhandu
June 16, 2022
in Newsbeat, Sports, ಕ್ರಿಕೆಟ್
BCCI
Share on FacebookShare on TwitterShare on WhatsappShare on Telegram

ಐಪಿಎಲ್ ನೇರ ಪ್ರಸಾರ ಹಕ್ಕು ಮಾರಾಟ – ಬಿಸಿಸಿಐ ಬೊಕ್ಕಸ ತುಂಬುತ್ತೆ… ಆದ್ರೆ ಜನ ಸಾಮಾನ್ಯರ ಜೇಬಿಗೆ ಕತ್ತರಿ..!

ಸುಮಾರು 40 ವರ್ಷಗಳ ಹಿಂದೆ ಭಾರತೀಯ ಕ್ರಿಕೆಟಿಗರಿಗೆ ವೇತನ, ಭತ್ಯೆ ನೀಡಲು ಕೂಡ ಬಿಸಿಸಿಐನ ಬಳಿ ದುಡ್ಡು ಇರಲಿಲ್ಲ. ಅಷ್ಟೇ ಯಾಕೆ, 1983ರಲ್ಲಿ ವಿಶ್ವಕಪ್ ಗೆದ್ದಾಗ ಕಪಿಲ್ ಬಳಗಕ್ಕೆ ಸನ್ಮಾನ ಮಾಡಲು ಮತ್ತು ಗೌರವ ಧನ ನೀಡಲು ಲತಾ ಮಂಗೇಶ್ಕರ್ ಅವರು ಸಂಗೀತ ಕಚೇರಿ ನಡೆಸಬೇಕಾಯ್ತು. ಅಷ್ಟರ ಮಟ್ಟಿಗೆ ಬಿಸಿಸಿಐ ದುಡ್ಡಿಗಾಗಿ ಪರದಾಟ ನಡೆಸಬೇಕಾಗಿತ್ತು.

Related posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

August 7, 2026
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

August 7, 2026

ಆದ್ರೆ ಜಗನ್ ಮೋಹನ್ ದಾಲ್ಮಿಯಾ ಬಿಸಿಸಿಐ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಬಿಸಿಸಿಐನ ಬೊಕ್ಕಸಕ್ಕೆ ಹಣದ ಹೊಳೆಯೇ ಹರಿದುಬಂತು. ನೋಡ ನೋಡುತ್ತಲೇ ಭಾರತದಲ್ಲಿ ಕ್ರಿಕೆಟ್ ಒಂದು ಧರ್ಮವಾಗಿ ಬೆಳೆದುನಿಂತಿತ್ತು. ಸಚಿನ್ ತೆಂಡುಲ್ಕರ್ ಎಂಬ ಮಾಂತ್ರಿಕ ವಿಶ್ವ ಕ್ರಿಕೆಟ್ ಅನ್ನು ಭಾರತದತ್ತ ತಿರುಗಿನೋಡುವಂತೆ ಮಾಡಿದ್ದರು. ಮೈದಾನದೊಳಗೆ ಪ್ರೇಕ್ಷಕರನ್ನು ಕೈ ಬೀಸಿ ಕರೆಯುವಂತೆ ಮಾಡಿದ್ದ ಎವರ್ ಗ್ರೀನ್ ಆಟಗಾರ. ಅಷ್ಟೇ ಅಲ್ಲ, ಜಾಹಿರಾತು ಕಂಪೆನಿಗಳನ್ನು ಕ್ರಿಕೆಟಿಗರತ್ತ ಸೂಜಿಗಲ್ಲಿನಂತೆ ಆಕರ್ಷಿಸುವಂತೆ ಮಾಡಿದ್ದರು. ಸಚಿನ್ ಜೊತೆಗೆ ಗಂಗೂಲಿ, ರಾಹುಲ್, ಧೋನಿ, ವಿರಾಟ್ ಕೊಡುಗೆಯೂ ಸೇರಿಕೊಂಡಿದೆ. ಇದಕ್ಕೂ ಮುನ್ನ ಅಂದ್ರೆ 80ರ ದಶಕದಲ್ಲಿ ಕಪಿಲ್ ದೇವ್ ಮತ್ತು ಸುನೀಲ್ ಗವಾಸ್ಕರ್ ನಂತಹ ಆಟಗಾರರು ಜಾಹಿರಾತುಕಂಪೆನಿಗಳ ಕಣ್ಮನಿಗಳಾಗಿದ್ದರು.

ನಂತರ 2007ರಲ್ಲಿ ಆರಂಭವಾಗ ಐಪಿಎಲ್ ಬಿಸಿಸಿಐನ ಬೊಕ್ಕಸವನ್ನು ತುಂಬಿತುಳುಕುವಂತೆ ಮಾಡಿತ್ತು. ಐಪಿಎಲ್ ಅಂದ್ರೆ ಬಿಸಿಸಿಐ ಪಾಲಿಗೆ ಚಿನ್ನದ ಮೊಟ್ಟೆ ಇಡುವ ಕೋಳಿ. ಅಷ್ಟರ ಮಟ್ಟಿಗೆ ಐಪಿಎಲ್ ನಲ್ಲಿ ಹಣದ ಹೊಳೆಯೇ ಹರಿದು ಬರುತ್ತಿದೆ. ಕಳೆದ 15 ವರ್ಷಗಳಲ್ಲಿ ಐಪಿಎಲ್ ವಿಶ್ವ ಕ್ರೀಡಾ ರಂಗದ ಉದ್ಯಮವಾಗಿ ಬೆಳೆಯುತ್ತೆ ಅಂತ ಯಾರು ಕೂಡ ಅಂದುಕೊಂಡಿರಲಿಲ್ಲ.

IPL Direct Broadcasting Sale saaksha tv
IPL Direct Broadcasting Sale saaksha tv

ಇವತ್ತು ಬಿಸಿಸಿಐ ಕೋಟಿ ಕೋಟಿ ಲೆಕ್ಕಚಾರದಲ್ಲಿ ವ್ಯವಹಾರ ನಡೆಸುತ್ತದೆ. ಸ್ವತಂತ್ರ್ಯ ಸಂಸ್ಥೆಯಾಗಿರುವ ಬಿಸಿಸಿಐನಲ್ಲಿ ಭ್ರಷ್ಟಚಾರ ನಡೆದಿಲ್ಲ ಅಂತ ಹೇಳುತ್ತಿಲ್ಲ. ಆದ್ರೂ ಅದನ್ನೆಲ್ಲಾ ಮೆಟ್ಟಿ ನಿಂತು ದೊಡ್ಡ ಉದ್ಯಮವಾಗಿ ಬೆಳೆದು ನಿಂತಿದೆ. ಬಿಸಿಸಿಐ ಪದಾಧಿಕಾರಿಗಳ ದೂರ ದೃಷ್ಟಿ ಮತ್ತು ಬದ್ದತೆಯಿಂದಾಗಿಯೇ ಇಂದು ವಿಶ್ವ ಕ್ರಿಕೆಟ್ ನ ದೊಡ್ಡಣ್ಣನಾಗಿ ಬಿಸಿಸಿಐ ಬೆಳಗುತ್ತಿದೆ.

ಇದೀಗ 2023ರಿಂದ 27ರವರೆಗಿನ ಐಪಿಎಲ್ ನ ಮಾಧ್ಯಮ ಹಕ್ಕು 48,390 ಕೋಟಿ ರೂಪಾಯಿಗೆ ಮಾರಾಟವಾಗಿದೆ.
ಅಂದ್ರೆ ನಾಲ್ಕು ವರ್ಷಗಳ ಐಪಿಎಲ್ ಟೂರ್ನಿಗಳಲ್ಲಿ ಒಟ್ಟು 410 ಪಂದ್ಯಗಳು ನಡೆಯಲಿವೆ. ಇಲ್ಲಿ ಪ್ರತಿ ಪಂದ್ಯಕ್ಕೆ ಬಿಸಿಸಿಐ ಪಡೆಯುವ ಹಣ ಬರೋಬ್ಬರಿ 118 ಕೋಟಿ ರೂಪಾಯಿ. ಇನ್ನು ಪ್ರತಿ ಓವರ್ ಗೆ ದಕ್ಕುವ ಹಣ 2.95 ಕೋಟಿ ರೂಪಾಯಿ. ಹಾಗೇ ಪ್ರತಿ ಎಸೆತಕ್ಕೆ ಬಿಸಿಸಿಐಗೆ ಸಿಗುವಂತಹ ಹಣ 49 ಲಕ್ಷ ರೂಪಾಯಿ.

ಅಂದ ಮೇಲೆ ಐಪಿಎಲ್ ನಲ್ಲಿ ಪ್ರತಿ ಆಟಗಾರರು ಕೋಟಿ ಕೋಟಿ ಬೆಲೆಗೆ ಹರಾಜಾಗುವುದರಲ್ಲಿ ಅಚ್ಚರಿ ಏನಿಲ್ಲ. ಲಕ್ಷ, ಕೋಟಿ ಲೆಕ್ಕದಲ್ಲಿ ನಡೆಯುವ ಐಪಿಎಲ್ ಟೂರ್ನಿಯಲ್ಲಿ ಕ್ರಿಕೆಟಿಗರು ಕೂಡ ದುಬಾರಿ ಬೆಲೆಗೆ ಮಾರಾಟವಾಗುವುದರಲ್ಲಿ ವಿಶೇಷತೆ ಏನು ಇಲ್ಲ.

ಆದ್ರೆ ನೆನಪಿಡಿ, ನೇರ ಪ್ರಸಾರದ ಹಕ್ಕಿನಿಂದ ಬಿಸಿಸಿಐನ ಬೊಕ್ಕಸ ತುಂಬುತ್ತೆ. ಆದ್ರೆ ನೇರ ಪ್ರಸಾರದ ಹಕ್ಕನ್ನು ಪಡೆದ ಸಂಸ್ಥೆ ಈ ಹಣವನ್ನು ಯಾವ ರೀತಿ ಸರಿದೂಗಿಸುತ್ತೆ ಅನ್ನೋದು ಕೂಡ ಮುಖ್ಯವಾಗಿರುತ್ತದೆ. ಮುಖ್ಯವಾಗಿ ಜಾಹಿರಾತಿನ ದರ ದುಪ್ಪಟ್ಟು ಆಗುವುದರಲ್ಲಿ ಅನುಮಾನವೇ ಇಲ್ಲ. ಕಾರ್ಪೋರೇಟ್ ಕಂಪೆನಿಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ದುಬಾರಿ ಹಣ ನೀಡಿ ಜಾಹಿರಾತು ನೀಡುತ್ತವೆ. ಇದರಿಂದ ಗ್ರಾಹಕರ ಜೇಬಿಗೂ ಕತ್ತರಿ ಬೀಳುವ ಸಾಧ್ಯತೆಗಳಿವೆ.

ಒಟ್ಟಿನಲ್ಲಿ ಕ್ರಿಕೆಟ್ ಭಾರತದಲ್ಲಿ ಹಣದ ಹೊಳೆಯನ್ನೇ ಹರಿಸುತ್ತಿದೆ. ಇಲ್ಲಿ ಬಿಸಿಸಿಐಗೆ ನಷ್ಟವಿಲ್ಲ. ನೇರ ಪ್ರಸಾರದ ಹಕ್ಕನ್ನು ಪಡೆದ ಸಂಸ್ಥೆಗೂ ತೊಂದರೆ ಇಲ್ಲ. ಜಾಹಿರಾತು ಕಂಪೆನಿಗಳಿಗೂ ಸಮಸ್ಯೆ ಇಲ್ಲ. ಸಮಸ್ಯೆ ಇರೋದು ಕ್ರಿಕೆಟ್ ಅಭಿಮಾನಿಗಳಿಗೆ ಮತ್ತು ಜನ ಸಾಮಾನ್ಯರಿಗೆ ಎಂಬುದನ್ನು ಮರೆಯುವಂತಿಲ್ಲ.

Tags: #Saaksha TVbcciipl 2022
ShareTweetSendShare
Join us on:

Related Posts

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

by Shwetha
August 7, 2026
0

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ ವಿರುದ್ಧ ಗಂಭೀರ ಸಮರ ಸಾರಿದ್ದಾರೆ. ಭಾರತದಲ್ಲಿ ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram