ಟೀಂ ಇಂಡಿಯಾಗೆ ಹೊಸ ಆಟಗಾರರ ಎಂಟ್ರಿ..!
ಡಬ್ಲಿನ್ನಲ್ಲಿ ಭಾನುವಾರ ಐರ್ಲೆಂಡ್ ವಿರುದ್ಧ ನಡೆಯಲಿರುವ ಮೊದಲ ಟಿ 20 ಪಂದ್ಯಕ್ಕಾಗಿ ಟೀಂ ಇಂಡಿಯಾ ಸಜ್ಜಾಗಿದೆ.
ಎಲ್ಲ ಹಿರಿಯ ಆಟಗಾರರು ಸರಣಿಯಿಂದ ದೂರ ಉಳಿದಿರುವ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಜೂನಿಯರ್ ಭಾರತ ತಂಡ ಕಣಕ್ಕೆ ಇಳಿಯಲಿದೆ.
ಮೊದಲ ಟಿ20ಗೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಾರ್ದಿಕ್ ಪಾಂಡ್ಯ. ಈ ಪಂದ್ಯದಲ್ಲಿ ಇಬ್ಬರು ಆಟಗಾರರು ಭಾರತಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂದು ಸುಳಿವು ನೀಡಿದ್ದಾರೆ.
ಮೊದಲ ಟಿ20ಯಲ್ಲಿ ಉಮ್ರಾನ್ ಮಲಿಕ್ ಮತ್ತು ರಾಹುಲ್ ತ್ರಿಪಾಠಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡುವ ಸಾಧ್ಯತೆಗಳಿವೆ.
ನಾವು ಈ ಪಂದ್ಯದಲ್ಲಿ ಹೊಸಬರಿಗೆ ಅವಕಾಶ ನೀಡಲು ಪ್ಲಾನ್ ಮಾಡುತ್ತಿದ್ದೇವೆ. ಅದೇ ವಿಧವಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸಲಿದ್ದೇವೆ.
ಪ್ರಸ್ತುತ ತಂಡ ಪರಿಸ್ಥಿತಿಯನ್ನು ನೋಡಿ ಇಬ್ಬರು ಹೊಸ ಆಟಗಾರರು ತಂಡದ ಕ್ಯಾಪ್ ಪಡೆಯಲಿದ್ದಾರೆ. ಇನ್ನು ಟೀಂ ಇಂಡಿಯಾಗೆ ನಾಯಕತ್ವ ವಹಿಸುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಠ ಎಂದಿದ್ದಾರೆ.
ಡಬ್ಲಿನ್ ವೇದಿಕೆಯಾಗಿ ನಡೆಯಲಿರುವ ಈ ಸರಣಿಯ ಎರಡು ಪಂದ್ಯಗಳು ಭಾರತದ ಕಾಲ ಮಾನದ ಪ್ರಕಾರ ರಾತ್ರಿ 9 ಗಂಟೆಗೆ ಪ್ರಾರಂಭವಾಗಲಿದೆ.
ಇದೇ ಮೊದಲ ಬಾರಿಗೆ ಟೀ ಇಂಡಿಯಾದ ನಾಯಕತ್ವದ ಹೊಣೆ ಹೊತ್ತಿರುವ ಹಾರ್ದಿಕ್ ಪಾಂಡ್ಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಯಾಕೆಂದರೆ ಈ ಬಾರಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಗುಜರಾತ್ ಟೈಟಾನ್ಸ್ ತಂಡ ಚಾಂಪಿಯನ್ ಆಗಿದೆ. ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ನಾಯಕರಾಗಿ ಹಾರ್ದಿಕ್ ಯಶ ಸಾಧಿಸುತ್ತಾರಾ ಅನ್ನೋದನ್ನ ಕಾದು ನೋಡಬೇಕಾಗಿದೆ.
ಅಂದಹಾಗೆ ಐರ್ಲೆಂಡ್ ಸಿರೀಸ್ ಗೆ ಯಂಗ್ ಇಂಡಿಯಾವನ್ನು ಬಿಸಿಸಿಐ ಸೆಲೆಕ್ಟ್ ಮಾಡಿದ್ದು, ದಿನೇಶ್ ಕಾರ್ತಿಕ್ ಅನುಭವ ತಂಡಕ್ಕೆ ನೆರವಾಗಲಿದೆ.
ಟೀಂ ಇಂಡಿಯಾ ಪರ ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸೋದು ಪಕ್ಕಾ. ನಂತರ ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ಹಾರ್ದಿಕ್ ಪಾಂಡ್ಯ ಬ್ಯಾಟ್ ಬೀಸುತ್ತಾರೆ.
ಫಿನಿಷರ್ ಜವಾಬ್ದಾರಿಯನ್ನು ದಿನೇಶ್ ಕಾರ್ತಿಕ್ ನಿಭಾಯಿಸಲಿದ್ದಾರೆ.
ಆಲ್ ರೌಂಡರ್ ಕೋಟಾದಲ್ಲಿ ಅಕ್ಷರ್ ಪಟೇಲ್ ಕಣ್ಣಕಿಳಿಯಬಹುದು.
ವೇಗಿಗಳ ವಿಭಾಗದಲ್ಲಿ ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್ ಸ್ಥಾನ ಪಡೆಯಬಹುದು. ಸ್ಪಿನ್ನರ್ ಆಗಿ ಚಾಹಲ್ ಆಡಬಹುದು.