ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Minister Dr. K. Sudhakar | ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ

Mahesh M Dhandu by Mahesh M Dhandu
July 2, 2022
in Newsbeat, State, ರಾಜ್ಯ
K Sudhakar Saaksha Tv
Share on FacebookShare on TwitterShare on WhatsappShare on Telegram

Minister Dr. K. Sudhakar | ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ

ಬೆಂಗಳೂರು : ವೈದ್ಯಕೀಯ ವೃತ್ತಿ ಅತ್ಯಂತ ಪುಣ್ಯದ ಕೆಲಸವಾಗಿದ್ದು, ಅದೃಷ್ಟವಂತರಿಗೆ ಮಾತ್ರ ಈ ಅವಕಾಶ ಸಿಗುತ್ತದೆ. ವೈದ್ಯರ ಸೇವೆಯನ್ನು ಹಣದಿಂದ ಅಳೆಯಲು ಸಾಧ್ಯವಿಲ್ಲ. ಇಂತಹ ವೃತ್ತಿಯನ್ನು ಸಮರ್ಪಣಾ ಮನೋಭಾವದಿಂದ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಣದಿಂದ ವೈದ್ಯರ ಸೇವೆಯನ್ನು ಅಳೆಯಲು ಸಾಧ್ಯವಿಲ್ಲ. ವೈದ್ಯರು ವೃತ್ತಿಪರರಾಗಿದ್ದಾಗ ಸಮಾಜ ಅವರನ್ನು ಗುರುತಿಸಿ ಗೌರವಿಸುತ್ತದೆ. ವೈದ್ಯರು ಕೇವಲ ಔಷಧಿ ಮಾತ್ರ ಕೊಡುವುದಿಲ್ಲ, ಬದಲಾಗಿ ರೋಗಿಯನ್ನು ಅಂತಃಕರಣದಿಂದ ಆರೈಕೆ ಮಾಡುತ್ತಾರೆ ಎಂದು ಹೇಳಿದರು.

ವೈದ್ಯರಿಗೆ ಪ್ರತಿದಿನದ ಕಲಿಕೆ ಮುಖ್ಯ. ವೈದ್ಯರು ನಿರಂತರ ಅಧ್ಯಯನ ಮಾಡಿದರೆ ಮಾತ್ರ ಹೊಸತನಕ್ಕೆ ಹೊಂದಿಕೊಳ್ಳಲು ಸಾಧ್ಯ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಸಮರ್ಪಣೆಯಿಂದ ಕೆಲಸ ಮಾಡಬೇಕೆ ಹೊರತು, ಟೈಮ್‌ಪಾಸ್‌ ಅಥವಾ ಪರ್ಯಾಯ ಎಂದು ಭಾವಿಸಬಾರದು. ಸಂಜೆ ಖಾಸಗಿ ಪ್ರಾಕ್ಟಿಸ್‌ ಮಾಡಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಆದರೆ ಕೆಲ ವೈದ್ಯರು ಮಾಡುವ ಮೌಲ್ಯ ರಹಿತ ಕಾರ್ಯಗಳಿಂದ ಇಡೀ ವೈದ್ಯಲೋಕಕ್ಕೆ ಕೆಟ್ಟ ಹೆಸರು ಬರುತ್ತದೆ. ಪ್ರಾಮಾಣಿಕವಾಗಿ ಕೆಲಸ ಮಾಡುವ ವೈದ್ಯರಿಗೆ ಇದರಿಂದ ನೋವಾಗುತ್ತದೆ ಎಂದರು.

ಯಾರಾದರೂ ವೈದ್ಯರಿಗೆ ಸಂಪೂರ್ಣವಾಗಿ ಖಾಸಗಿ ಕ್ಷೇತ್ರದಲ್ಲೇ ತೊಡಗಿಸಿಕೊಳ್ಳಬೇಕು ಎಂಬ ಮನಸ್ಸಿದ್ದರೆ ಅವರು ಸ್ವತಂತ್ರರಾಗಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸದ್ಯ ವೈದ್ಯರ ಕೊರತೆ ಇಲ್ಲ. ಆದರೆ ಕೆಲ ವೈದ್ಯರಿಂದ ಹಾಜರಾತಿ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಹಾಗಾಗಿದೆ. ವೈದ್ಯರ ಮೇಲೆ ಯಾರೂ ನಿಗಾ ಇಡಬಾರದು. ವೈದ್ಯರನ್ನು ಯಾರೂ ಅನುಮಾನದಿಂದ ನೋಡಿದರೆ ಆ ವೃತ್ತಿಗೆ ಅಪಮಾನವಾಗುತ್ತದೆ. ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ಬಹಳ ನೋವಿನಿಂದ ಜಾರಿ ತರುವಂತಾಗಿದೆ ಎಂದರು.

Minister Dr. K. Sudhakar A doctor's service cannot be measured by money saaksha tv
Minister Dr. K. Sudhakar A doctor’s service cannot be measured by money saaksha tv

ಆಸ್ಪತ್ರೆಯಲ್ಲಿ ರೋಗಿಗೆ ನೀಡುವ ಚಿಕಿತ್ಸೆ ಎಷ್ಟು ಮುಖ್ಯವೋ, ಆಸ್ಪತ್ರೆಯ ನಿರ್ವಹಣೆಯೂ ಅಷ್ಟೇ ಮುಖ್ಯ. ಆಗ ಮಾತ್ರ ಆರೋಗ್ಯ ಸೇವೆಗಳಲ್ಲಿ ದಕ್ಷತೆ, ಗುಣಮಟ್ಟ, ವೃತ್ತಿಪರತೆ ಕಾಯ್ದುಕೊಳ್ಳಲು ಸಾಧ್ಯ. ವೈದ್ಯರು ಆಯುಷ್ಯವನ್ನು ವೃದ್ಧಿ ಮಾಡಲು, ನೋವನ್ನು ನಿವಾರಣೆ ಮಾಡಲು ಸಾಧ್ಯ. ಭಗವಂತ ಈ ಶಕ್ತಿಯನ್ನು ಕೇವಲ ವೈದ್ಯರಿಗೆ ಮಾತ್ರ ಕೊಟ್ಟಿದ್ದಾನೆ. ಡಾ.ಬಿ.ಸಿ.ರಾಯ್ ಜನ್ಮಶತಮಾನೋತ್ಸವದ ಅಂಗವಾಗಿ ಇಡೀ ದೇಶದಲ್ಲಿ ವೈದ್ಯರ ದಿನಾಚರಣೆ ನಡೆಯುತ್ತಿದೆ. ರಾಜ್ಯ ಸರ್ಕಾರ ಕೂಡ ಅರ್ಥಪೂರ್ಣ ಆಚರಣೆಗೆ ಸಿದ್ಧವಾಗಿದೆ. ಜುಲೈ 7 ರಂದು ವಿಧಾನಸೌಧದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ವಿಶೇಷ ಹಾಗೂ ಗಣನೀಯ ಸೇವೆ ಮಾಡಿದವರಿಗೆ ಗೌರವ ಸಮರ್ಪಣೆ ಮಾಡಲಾಗುವುದು ಎಂದರು.

ಶುಲ್ಕ ವಸೂಲಿ
ಕೊರೊನಾ ಸಮಯದಲ್ಲಿ ಕೆಲ ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡಿ, ರೋಗಿಗಳಿಂದ ಹಾಗೂ ಸರ್ಕಾರದಿಂದ ಹಣ ಪಡೆದಿವೆ. ಅಂತಹ ಆಸ್ಪತ್ರೆಗಳಿಗೆ ನೋಟಿಸ್‌ ನೀಡಿ ಹಣ ವಸೂಲಿ ಮಾಡಿ, ರೋಗಿಗಳ ಕುಟುಂಬಕ್ಕೆ ಹಣ ವಾಪಸ್‌ ಕೊಡಿಸಲಾಗುವುದು ಎಂದು ಸಚಿವರು ತಿಳಿಸಿದರು.

ಎಲ್ಲಾ ವೈದ್ಯರು ಆಡಳಿತದಲ್ಲಿ ಪರಿಣತಿ ಪಡೆಯಬೇಕು. ಅದಕ್ಕಾಗಿ ಡಾಕ್ಟರ್ಸ್ ಹೆಲ್ತ್ ಕೇರ್ ಮ್ಯಾನೇಜ್ಮೆಂಟ್ ಆರಂಭಿಸಿದ್ದೇವೆ. ಹೆಲ್ತ್ ವರ್ಕರ್ಸ್ ಕೂಡ ವೃತ್ತಿಪರರಾಗಿ ಬೆಳೆಯಬೇಕು. ಕೋವಿಡ್ ಬಂದ ಮೇಲೆ ಮೂಲಭೂತ ಸೌಕರ್ಯಗಳು ಅಭಿವೃದ್ಧಿಯಾಯಿತು. ಕೋವಿಡ್ ಬಳಿಕ 10 ವರ್ಷದಲ್ಲಿ ಆಗುವಂತಹ ಬೆಳವಣಿಗೆ ಒಂದು ವರ್ಷದಲ್ಲಿ ಆಗಿದೆ. 2020ಕ್ಕೆ ಹೋಲಿಸಿದರೆ ಈಗ ಹೆಚ್ಚುವರಿಯಾಗಿ 4,000 ವೈದ್ಯರು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಸರ್ಕಾರ ವೈದ್ಯರ ನೇಮಕಾತಿ ಹಾಗೂ ಮೂಲಭೂತ ಸೌಕರ್ಯ, ಸೌಲಭ್ಯಗಳನ್ನು ಹೆಚ್ಚು ಮಾಡುತ್ತಿದೆ. ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು ಆರಂಭವಾಗಬೇಕು. ಆದರೆ ಅದಕ್ಕೂ ಮೊದಲು ಗುಣಮಟ್ಟದಲ್ಲಿ ಬದಲಾವಣೆ ತರಬೇಕು. ವೈದ್ಯರ ಮೇಲೆ ಯಾರೇ ಹಲ್ಲೆ ಮಾಡಿದರೂ ಅದು ಅಕ್ಷಮ್ಯ ಅಪರಾಧ. ವೈದ್ಯರ ಮೇಲೆ ಹಲ್ಲೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮಾಸ್ಕ್ ಧರಿಸಿ
ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರು ಮಾಸ್ಕ್ ಧರಿಸಬೇಕು. ಸರ್ಕಾರದ ಮಾರ್ಗ ಸೂಚಿಗಳನ್ನು ಪಾಲಿಸಬೇಕು ಎಂದು ಸಚಿವರು ತಿಳಿಸಿದರು.

Tags: #Minister Dr.K.Sudhakar.#Saaksha TVkarnataka
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram