ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Shinzo Abe | ಜಗತ್ತನ್ನ ಬೆಚ್ಚಿ ಬೀಳಿಸಿದ್ದ ಮಹಾನ್ ನಾಯಕರ ಕೊಲೆಗಳು

Mahesh M Dhandu by Mahesh M Dhandu
July 15, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Shinzo Abe | ಜಗತ್ತನ್ನ ಬೆಚ್ಚಿ ಬೀಳಿಸಿದ್ದ ಮಹಾನ್ ನಾಯಕರ ಕೊಲೆಗಳು

ಜಪಾನ್ ನ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಕೊಲೆ ಇಡೀ ವಿಶ್ವವನ್ನು ಬೆಚ್ಚಿ ಬೀಳಿಸಿದೆ. ಪಕ್ಷದ ಪರವಾಗಿ ಜನರ ನಡುವೆ ಪ್ರಚಾರ ನಡೆಸುವಾಗ ಯಮಗಾಮಿ ಎಂಬ ವ್ಯಕ್ತಿ ಶಿಂಜೋ ಅವರನ್ನ ಗುಂಡಿಕ್ಕೆ ಕೊಲೆ ಮಾಡಿದ್ದಾನೆ.

Related posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

June 20, 2026
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026

ಶಿಂಜೋ ಅವರ ಕೊಲೆಗೆ ನಾನಾ ಕಾರಣಗಳನ್ನು ಹೇಳಲಾಗುತ್ತಿದೆ. ಆದ್ರೆ ಈ ಘಟನೆ ವಿಶ್ವದಲ್ಲಿ ನಡೆದ ಮಹಾನ್ ನಾಯಕರ ಕೊಲೆಗಳನ್ನು ನೆನಪಿಸಿವೆ.

ಅಂತಹ ಪಟ್ಟಿಯನ್ನ ಈ ವಿಡಿಯೋದಲ್ಲಿ ನಾವು ನೋಡೋಣ..

1865 – ಅಮೆರಿಕಾ ಅಧ್ಯಕ್ಷ ಅಬ್ರಹಾಂ ಲಿಂಕನ್ ಕೊಲೆ

ಏಪ್ರಿಲ್ 14, 1865 ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದ ಕೊಲೆ ಇದು. ಅಂದು ಅಮೆರಿಕಾ ಅಧ್ಯಕ್ಷ ಅಬ್ರಹಾಂ ಲಿಂಕನ್ ಅವರು ವಾಷಿಂಗ್ ಟನ್ ನಲ್ಲಿ ನಾಟಕ ನೋಡುತ್ತಿದ್ದಾಗ ರಂಗಭೂಮಿ ನಟನ ಗುಂಡೇಟಿಗೆ ಬಲಿಯಾಗಿದ್ರು. ನಾವು ಇತಿಹಾಸದಲ್ಲಿ ರಾಜ ಮಹಾರಾಜರ ಕೊಲೆಗಳು ದಾಖಲಾಗಿದ್ದರೂ ಆಧುನಿಕ ಜಗತ್ತಿನ ಒಂದು ದೇಶದ ಮುಖ್ಯಸ್ಥ ಹತ್ಯೆಯಾಗಿದ್ದು ಇದೇ ಮೊದಲು.

1881 ಅಮೆರಿಕಾದ ಅಧ್ಯಕ್ಷ ಜೇಮ್ಸ್ ಗಾರ್ ಫೀಲ್ಡ್ ಕೊಲೆ   

ಲಿಂಕನ್ ಅವರ ಕೊಲೆಯ ಬಳಿಕ ಅಮೆರಿಕಾದ 20ನೇ ಅಧ್ಯಕ್ಷನಾಗಿದ್ದ ಜೇಮ್ಸ್ ಜಾರ್ ಫೀಲ್ಡ್ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. 1881 ಜುಲೈ 2 ರಂದು ಈ ಘಟನೆ ನಡೆದಿದ್ದು, 79 ದಿನಗಳ ನಂತರ ಸೆಪ್ಟಂಬರ್ 19 ರಂದು ಜೇಮ್ಸ್ ಕೊನೆಯುಸಿರೆಳೆದಿದ್ದರು.

1901  ಅಮೆರಿಕಾ ಅಧ್ಯಕ್ಷ ವಿಲಿಯಮ್ ಮೆಕೆನ್ ಲೀ ಕೊಲೆ

1901 ಸೆಪ್ಟಂಬರ್ 14 ರಂದು ನ್ಯೂಯಾರ್ಕ್ ನಲ್ಲಿ ವಿಲಿಯಮ್  ಮೆಕೆನ್ ಲೀ ಅವರನ್ನು ಗುಂಡಿಟ್ಟು ಕೊಲೆ ಮಾಡಲಾಯ್ತು. ಆರ್ಥಿಕ ಹಿಂಜರಿತದಿಂದ ಕೆಲಸ ಕಳೆದುಕೊಂಡಿದ್ದ ಲಿಯೋನ್ ಎಂಬಾತ ಈ ಕೊಲೆ ಮಾಡಿದ್ದ.

1948 ಮಹಾತ್ಮ ಗಾಂಧಿಜೀ ಕೊಲೆ

ಈ ಘಟನೆ ಇಡೀ ವಿಶ್ವಕ್ಕೆ ದೊಡ್ಡ ಆಘಾತವನ್ನ ನೀಡಿತ್ತು. ಶಾಂತಿ ದೂತ ಕೊಲೆಗೆ ಇಡೀ ಜಗತ್ತು ತಲೆತಗ್ಗಿಸಿತ್ತು. 1948 ಜನವರಿ 30 ರಂದು ದೆಹಲಿಯಲ್ಲಿ ನಾತೂರಾಮ್ ಗೋಡ್ಸೆ ಗಾಂಧಿಯವರನ್ನ ಗುಂಡಿಟ್ಟು ಕೊಂದಿದ್ದ. ಭಾರತ ಎರಡು ಭಾಗವಾಗಲು ಗಾಂಧೀಜಿಯೇ ಕಾರಣ ಎಂದು ಭಾವಿಸಿ ಗೋಡ್ಸೆ ಗಾಂಧಿಜೀಯವರನ್ನ ಕೊಲೆ ಮಾಡಿದ್ದ. ದೆಹಲಿಯ ಬಿರ್ಲಾ ಹೌಸ್ ನಲ್ಲಿ ಈ ಘಟನೆ ನಡೆದಿತ್ತು.

Shinzo Abe The murders of great leaders shocked the world saaksha tv
Shinzo Abe The murders of great leaders shocked the world saaksha tv

1963 ಅಮೆರಿಕಾ ಅಧ್ಯಕ್ಷ ಜಾನ್ ಎಫ್ ಕೆನಡಿ ಕೊಲೆ

ಅಧಿಕಾರದಲ್ಲಿದ್ದಾಗಲೇ ಕೊಲೆಯಾದ ಅಮೆರಿಕಾದ ನಾಲ್ಕನೇ ಅಧ್ಯಕ್ಷ ಜಾನ್ ಎಫ್ ಕೆನಡಿ. ಅಮೆರಿಕಾದ 35ನೇ ಅಧ್ಯಕ್ಷರಾಗಿದ್ದ ಕೆನಡಿ ಅವರನ್ನು 1936ರ ನವೆಂಬರ್ 22 ರಂದು ಕೊಲೆ ಮಾಡಲಾಯ್ತು. ಟೆಕ್ಸಾಸ್ ನ ರಾಜಧಾನಿ ಡಲ್ಲಾಸ್ ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿದ್ದಾಗ ಕೆನಡಿ ಅವರ ಕೊಲೆಯಾಯ್ತು.  ಆದ್ರೆ ಇವರ ಕೊಲೆಗೆ ಇದೇ ಕಾರಣ ಅಂತಾ ಈವರೆಗೂ ತಿಳಿದು ಬಂದಿಲ್ಲ.

ಮಾರ್ಟಿನ್ ಲೂಥರ್ ಕಿಂಗ್ 1968

ಮಹಾತ್ಮ ಗಾಂಧೀಜಿ ಅವರ ತತ್ವಗಳ ಅನುಯಾಯಿಗಳಾಗಿದ್ದ ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಅವರನ್ನ ಕೊಲೆ ಮಾಡಲಾಗಿತ್ತು. 1968 ರ ಏಪ್ರಿಲ್ 4 ರಂದು ಜೇಮ್ಸ್ ರೇ ಎಂಬಾತ ಕಪ್ಪು ವರ್ಣಿಯರನ್ನ ಒಗ್ಗೂಡಿಸಲು ಲೂಥರ್ ನಡೆಸುತ್ತಿದ್ದ ಹೋರಾಟಗಳ ಕಾರಣದಿಂದಾಗಿ ಅವರನ್ನ ಗುಂಡಿಟ್ಟು ಕೊಲೆ ಮಾಡಿದ್ರು.

Shinzo Abe The murders of great leaders shocked the world saaksha tv
Shinzo Abe The murders of great leaders shocked the world saaksha tv

ಭಾರತ ಪ್ರಧಾನಿ ಇಂದಿರಾ ಗಾಂಧಿ ಕೊಲೆ 1984

ಮಹಾತ್ಮ ಗಾಂಧಿಯವರ ಕೊಲೆಯ ಬಳಿಕ ಇಡೀ ಭಾರತವನ್ನು ಬೆಚ್ಚಿ ಬೀಳಿಸಿದ ಕೊಲೆ ಅಂದ್ರೆ ಅದು ಇಂಧಿರಾ ಗಾಂಧಿ ಅವರ ಕೊಲೆ. 1984ರ ಅಕ್ಟೋಬರ್ 30 ರಂದು ಇಂದಿರಾ ಗಾಂಧಿಯವರನ್ನ ಅವರ ಬಾಡಿಗಾರ್ಡ್ ಗಳೇ ಕೊಲೆ ಮಾಡಿದರು. ಇಂದಿರಾ ಗಾಂಧಿ ಅವರ ದೇಹಕ್ಕೆ 33 ಗುಂಡುಗಳು ಹೊಕ್ಕಿದ್ದವು.

ರಾಜೀವ್ ಗಾಂಧಿ ಕೊಲೆ 1991

ಇಂದಿರಾ ಗಾಂಧಿ ಅವರ ಕೊಲೆಯಾದ ಐದು ವರ್ಷಕ್ಕೆ ರಾಜೀವ್ ಗಾಂಧಿ ಅವರ ಕೊಲೆಯಾಯ್ತು. 1991 ರ ಮೇ 21 ರಂದು ತಮಿಳುನಾಡಿನ ಶ್ರೀಪೆರಂಬುದೂರಿನಲ್ಲಿ ಮಾನವ ಬಾಂಬ್ ಸ್ಫೋಟಿಸಿ ರಾಜೀವ್ ಗಾಂಧಿಯವರನ್ನ ಕೊಲೆ ಮಾಡಲಾಯ್ತು. ಈ ಘಟನೆಯಲ್ಲಿ ರಾಜೀವ್ ಗಾಂಧಿ ಅವರ ದೇಹ ಛಿದ್ರ ಛಿದ್ರವಾಗಿತ್ತು.

ಹೀಗೆ ಅಧಿಕಾರ, ದ್ವೇಷ, ರಾಜಕೀಯ, ಹಣದ ಕಾರಣಕ್ಕಾಗಿ ಜಗತ್ತಿನಲ್ಲಿ ಹಲವು ನಾಯಕರ ಕೊಲೆಗಳಾಗಿವೆ.   

Tags: #Saaksha TVMahatma Gandhishinzo abe
ShareTweetSendShare
Join us on:

Related Posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram