ಮೈಸೂರು : ತಾವು ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದ ಕೋತಿ ಮರಿ ಚಿಂಟು ನೆನಪಿಗಾಗಿ ಮಾಜಿ ಸಚಿವ ಸಾ.ರಾ. ಮಹೇಶ್ ತಮ್ಮ ಫಾರ್ಮ್ ಹೌಸ್ ನಲ್ಲಿ ಸುಮಾರು 20 ಲಕ್ಷ ವೆಚ್ಚದಲ್ಲಿ ದೇವಾಲಯ ನಿರ್ಮಿಸಿದ್ದಾರೆ. ಕುರಿ ಮರಿಯ ಮೇಲೆ ಚಿಂಟು ಕುಳಿತಿರುವ ಏಕಶಿಲಾ ಸ್ಮಾರಕವನ್ನು ನಿರ್ಮಸಲಾಗಿದ್ದು, ದೇವಾಲಯದಲ್ಲಿ ಪ್ರತಿಷ್ಠಾಪನೆ ಮಾಡಲಿದ್ದಾರೆ.
ಜನವರಿ 1ರಂದು ತೋಟದಲ್ಲಿ ವಿದ್ಯುತ್ ತಂತಿ ತಗುಲಿ ಸಾ.ರಾ ಅವರ ಪ್ರೀತಿಯ ಕೋತಿ ಚಿಂಟು ಸಾವನ್ನಪ್ಪಿತ್ತು. ಇನ್ನು ಮೇಕೆ ಎರಡು ತಿಂಗಳ ಹಿಂದೆಯೇ ಸಾವನ್ನಪ್ಪಿತ್ತು. ಇವೆರಡೂ ಸ್ನೇಹಿತರಾಗಿಯೂ ಇದ್ದವು. ಹೀಗಾಗಿ ಕುರಿ ಮೇಲೆ ಕೋತಿ ಕುಳಿತಿರುವಂತೆ ಶಿಲ್ಪ ನಿರ್ಮಾಣ ಮಾಡಲಾಗಿದೆ. ಚಿಂಟು ಜೊತೆ ಆತ್ಮೀಯತೆ ಹೊಂದಿದ್ದ ಶಾಸಕ ಸಾ.ರಾ ಮಹೇಶ್, ಚಿಂಟು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ವಿದೇಶ ಪ್ರವಾಸ ಮೊಟಕುಗೊಳಿಸಿ ತವರಿಗೆ ಓಡಿ ಬಂದಿದ್ದರು. ನಂತರ ಅಂತ್ಯಕ್ರಿಯೆ ನೆರವೇರಿಸಿದರು. ಅಲ್ಲದೆ ಜನವರಿ 11ರಂದು ಶಾಸ್ತ್ರೋಕ್ತವಾಗಿ ಚಿಂಟುವಿನ ತಿಥಿಯನ್ನು ಕೂಡ ನೆರವೇರಿಸಿದ್ದರು.
ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ
ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...








